SEMINAR ON DISEASES

Held by SANJEEVINI eco club GHS talewad.

SBNN GOVT HIGH SCHOOL, TALEWAD

Our beatifu school with coverd lott of trees and garden.

INTERNATIONAL YOGA DAY

300 above students participated in this celebration.

PATIBHA KARANJI AT MULAWAD

Our students participated and won many events.

PRACTICAL IN ATL LAB

Our students participated in atal thinkaring lab.

Thursday, September 5, 2024

SHRI SANGAMESH PUJARI
HEADMASTER

ಗಣಿತ ಪ್ರಯೋಗಾಲಯ ಉದ್ಘಾಟನೆ













 

Sunday, February 11, 2024

SCIENCE EXHIBITION

Saturday, February 10, 2024

DESHI AATAGALU


Friday, February 9, 2024

ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ*



 ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ*

ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ. ನಮಗಿರುವ ಸೌಲಭ್ಯಗಳನ್ನು ಬಳಸುತ್ತಾ ಅವುಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಇನ್ನಷ್ಟು ಉತ್ತಮ ಪ್ರಯತ್ನ ಮಾಡಬೇಕೆ ಹೊರತು ಇತರರ ಜತೆಗೆ ಹೋಲಿಸಿಕೊಂಡು ನರಳಬಾರದು. ಆ ರೀತಿಯ ಸಂದೇಶವನ್ನು ನೀಡುವ ಒಂದು ಒಳ್ಳೆಯ ಕಥೆ ಸದ್ಯಕ್ಕೆ ವೈರಲ್ ಆಗಿದೆ. ಕೆಲವು ಪಕ್ಷಿಗಳ ಮೂಲಕ ನಮ್ಮ ಆಲೋಚನೆ ವಿಷಯವನ್ನು ಸರಳವಾಗಿ ಹೇಳಿದ್ದಾರೆ ಈ ಕಥೆಯಲ್ಲಿ.




ಒಂದು ಕಾಡಿನಲ್ಲಿ ಒಂದು ಕಾಗೆ ವಾಸವಾಗಿತ್ತು. ಅದರ ಜೀವನ ಸೊಗಸಾಗಿ ಸಾಗುತ್ತಿತ್ತು. ಆದರೆ ಪಕ್ಕದಲ್ಲೇ ಇದ್ದ ಕೊಳದಲ್ಲಿನ ಹಂಸವನ್ನು ನೋಡಿ ‘ಅದು ತುಂಬಾ ಬೆಳ್ಳಗೆ, ಸುಂದರವಾಗಿ ಇದೆ. ನಾನು ಕಪ್ಪಗಿದ್ದೇನೆ’ ಎಂದು ನೋವನುಭವಿಸುವುದನ್ನು ಆರಂಭಿಸಿತು. ಒಂದು ದಿನ ಹಂಸದ ಬಳಿ ಹೋಗಿ ‘ನೀನು ತುಂಬಾ ಸುಂದರವಾಗಿ ಇರುತ್ತೀಯ. ಆನಂದವಾಗಿಯೂ ಇರುತ್ತೀಯ ಅಲ್ಲವೇ’ ಎಂದಿತು. ಕಾಗೆ ಮಾತಿಗೆ ಹಂಸ ಉತ್ತರ ಕೊಡುತ್ತಾ, ‘ನಿಜ ನಾನು ಸುಂದರವಾಗಿರುತ್ತೇನೆ. ಆದರೆ ಗಿಳಿರಾಮ ನನಗಿಂತಲೂ ಎರಡು ಬಣ್ಣಗಳಲ್ಲಿ ಸುಂದರವಾಗಿರುತ್ತದೆ. ಅದರ ಜತೆ ಹೋಲಿಸಿದರೆ ನಾನೇನು ಅಲ್ಲ’ ಎಂದು ಬೇಸರಿಸಿಕೊಂಡಿತು. ಇದನ್ನು ಕೇಳಿದ ಕಾಗೆ ಗಿಳಿ ಬಳಿಗೆ ಹೋಗಿ, ‘ಹಂಸಕ್ಕಿಂತಲೂ ಸುಂದರವಾಗಿ ನೀನಿದ್ದೀಯ’ ಎಂದಿತು. ಈ ಮಾತಿಗೆ ಗಿಳಿ, ‘ನನ್ನದೇನಿದೆ ಕೇವಲ ಎರಡು ಬಣ್ಣಗಳು. ನವಿಲು ಬಣ್ಣಬಣ್ಣದ ಗರಿಗಳಿಂದ ತುಂಬಾ ಸುಂದರವಾಗಿರುತ್ತದೆ. ಅದನ್ನು ನೋಡಲು ಜನ ಪೈಪೋಟಿ ಬೀಳುತ್ತಿರುತ್ತಾರೆ. ‘ ಎಂದಿತು. ನವಿಲನ್ನು ನೋಡಲು ಕಾಗೆ ಜೂಗೆ ಹೋಯಿತು. ಅಲ್ಲಿ ಅದನ್ನು ನೋಡಲು ಜನ ಗುಂಪು ಗುಂಪಾಗಿದ್ದಾರೆ. ಅವರೆಲ್ಲಾ ಹೊರಟು ಹೋದ ಮೇಲೆ ನವಿಲಿನೊಂದಿಗೆ ಕಾಗೆ, ‘ನೀನು ಹಂಸ, ಗಿಳಿಗಿಂತಲೂ ತುಂಬಾ ಸುಂದರವಾಗಿದ್ದೀಯ. ನೀನು ಅದೃಷ್ಟವಂತೆ. ನಿನ್ನ ನೋಡಲು ಜನರೆಲ್ಲಾ ಬರುತ್ತಿದಾರೆ.’ ಇದರಿಂದ ನವಿಲು ಭಯದಿಂದ ‘ಹಾಂ ಏನು ಅದೃಷ್ಟ ಬಿಡಮ್ಮ…ಸುಂದರವಾಗಿದ್ದೀನಿ ಎಂದು ಈ ಜೂನಲ್ಲಿ ನನ್ನನ್ನು ತಂದು ಹಾಕಿದ್ದಾರೆ. ಇಲ್ಲಿ ಒಂದೇ ಒಂದು ಕಾಗೆ ಸಹ ಇಲ್ಲ. ಅವೆಲ್ಲಾ ಹಾಯಾಗಿ ಹೊರಗಿನ ಪ್ರಪಂಚದಲ್ಲಿ ಓಡಾಡಿಕೊಂಡಿವೆ. ನಾನು ಕಾಗೆಯಾಗಿ ಯಾಕೆ ಹುಟ್ಟಲಿಲ್ಲ ಎಂದು ಎಷ್ಟೋ ಸಲ ವ್ಯಥೆ ಪಟ್ಟಿದ್ದೇನೆ. ‘ ಎಂದು ನವಿಲು ಹೇಳಿದ ಬಳಿಕ ಕಾಗೆಗೆ ಜ್ಞಾನೋದಯವಾಯಿತು.




ಮನುಷ್ಯರಲ್ಲೂ ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವವರಿಗೇನು ಬರವಿಲ್ಲ. ಈ ರೀತಿ ಮಾಡುತ್ತಾ ತಮ್ಮಲ್ಲಿನ ಜ್ಞಾನವನ್ನು, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಅವರವರ ವಿಶೇಷತೆ ಅವರಿಗೆ ಇದ್ದೇ ಇರುತ್ತದೆ. ಅವರವರ ಸಮಸ್ಯೆಗಳೂ ಅವರವರಿಗೆ ಇರುತ್ತವೆ. ನಮಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸದ್ಭಳಕೆ ಮಾಡಿಕೊಂಡರೆ ಸಂತೃಪ್ತಿಯಾಗಿ ಜೀವಿಸಬಹುದು ಎಂಬುದನ್ನು ನಮಗೆ ನೆನಪಿಸುತ್ತದೆ.




ಕೃಪೆ: kannada+.

ಸಂಗ್ರಹ :ವೀರೇಶ್ ಅರಸಿಕೆರೆ. 

ಪರಿಶ್ರಮದ ಮಹತ್ವ. 💐


ಪರಿಶ್ರಮದ ಮಹತ್ವ. 💐

ಇಂದಿನ ದಿನಗಳಲ್ಲಿ ಮಾನವನನ್ನು ಕಾಡುವ ಅನೇಕ ತೊಂದರೆಗಳಲ್ಲಿ ನಿದ್ರೆ ಬರದಿರುವ ಕಾಯಿಲೆಯೂ ಒಂದು. ನಗರಗಳಲ್ಲಿ ಬಹಳ ಮಂದಿಗೆ ನಿದ್ದೆಯ ಗುಳಿಗೆಗಳನ್ನು ನುಂಗಿದ ಬಳಿಕವೇ ನಿದ್ದೆ ಬರುತ್ತದೆ. ನಮ್ಮ ಔಷಧಾಲಯಗಳಲ್ಲಿ ಅತಿ ಹೆಚ್ಚು ಮಾರಾಟವಾಗುವ ಮದ್ದೆಂದರೆ-ನಿದ್ರಾ ಗುಳಿಗೆಯೆನ್ನುತ್ತಾರೆ. ಆದರೆ ಹೀಗೆ ನಿದ್ರಾ ಗುಳಿಗೆಯನ್ನು ನುಂಗುವುದು ತಪ್ಪು. ಏಕೆಂದರೆ ಅದೊಂದು ಕೆಟ್ಟ ಚಟವಾಗಿ ಬಿಡುವ ಅಪಾಯವಿದೆ-ಎಂದು ವೈದ್ಯರು ಅಭಿಪ್ರಾಯ ಪಡುತ್ತಾರೆ. ಹಾಗಿದ್ದರೆ ಸಹಜವಾಗಿ ನಿದ್ದೆ ಬರುವಂತೆ ಮಾಡುವ ವಿಧಾನವೇನು ? ಎಂಬುದನ್ನು ತಿಳಿಸುವ ಒಂದು ರೋಚಕ ಪ್ರಸಂಗ ಇಲ್ಲಿದೆ. ಮೊಗಲ ವಂಶದ ಅರಸನಾದ ಅಕ್ಬರನಿಗೆ ಅತ್ಯಂತ ಆತ್ಮೀಯ ಒಡನಾಡಿಯಾಗಿದ್ದವನು-ಬೀರ್‌ಬಲ್. ಇಬ್ಬರೂ ಜತೆಯಾಗಿ ಸಂಜೆಯ ವಾಯು-ವಿಹಾರಕ್ಕೆ ಒಂದು ಹಳ್ಳಿಯ ರಸ್ತೆಯಲ್ಲಿ ಹೊರಟಿದ್ದರು. ದಾರಿಯಲ್ಲಿ ಕಲ್ಲು-ಮುಳ್ಳು ತುಂಬಿದ್ದುದರಿಂದ ಕಾಲಿಗೆ ಚುಚ್ಚ ತೊಡಗಿದವು. ಅಕ್ಬರನಿಗೆ ನಡೆಯುವುದೇ ಕಷ್ಟವಾಯಿತು. ಆದರೆ ಅದೇ ರಸ್ತೆಯ ಪಕ್ಕದಲ್ಲಿ ಹರಡಿದ್ದ ಕಲ್ಲುಗಳ ಮೇಲೆ ಚಾಪೆಯೊಂದನ್ನು ಬಿಡಿಸಿ, ಅದರ ಮೇಲೊಬ್ಬ ಕೂಲಿಕಾರ ಮಲಗಿದ್ದ; ಗಾಢನಿದ್ರೆಯಲ್ಲಿದ್ದ. ಅರಸನಿಗೆ ಆಶ್ಚರ್ಯವಾಯಿತು. ಬೀರ್‌ಬಲ್ಲನೊಡನೆ 'ಇದರ ಒಳಗುಟ್ಟೇನು ?' ಎಂದು ಪ್ರಶ್ನಿಸಿದ. ಬೀರ್‌ಬಲ್ 'ಅವನನ್ನು ಅರಮನೆಗೆ ಕರೆದೊಯ್ದು ವಿಚಾರಿಸೋಣ' ಎಂದು ನುಡಿದ, ಅರಮನೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಿಸಿದ. ಆದರೆ ಅರಮನೆಗೆ ತಲಪಿದ ಬಳಿಕ, ಒಳ್ಳೆಯ ಊಟ ಮಾಡಿಸಿ, ಒಳ್ಳೆಯ ಹಾಸಿಗೆಯ ಮೇಲೆ ಮಲಗಿಸಿದರೂ ಆ ಕೂಲಿಕಾರನಿಗೆ ನಿದ್ದೆಯೇ ಬರಲಿಲ್ಲ. ಬಹುಶಃ ಚಾಪೆಯಡಿಯಲ್ಲಿ ಕಲ್ಲು ಇದ್ದರೆ ನಿದ್ದೆ ಬರುತ್ತದೆ ಎಂದು ಭಾವಿಸಿ ಹಾಸಿಗೆಯಡಿಯಲ್ಲಿ ಕಲ್ಲುಗಳನ್ನು ಹರಡಿ ಮಲಗಿಸಿದರು. ಊಹೂಂ, ನಿದ್ದೆ ಬರಲೇ ಇಲ್ಲ. ಆಗ ಕೂಲಿಕಾರನನ್ನೇ 'ನಿನಗೇಕೆ ನಿದ್ದೆ ಬರುತ್ತಿಲ್ಲ ?' ಎಂದು ಪ್ರಶ್ನಿಸಿದಾಗ, ಅವನು ಹೀಗೆ ಉತ್ತರಿಸಿದ 'ಮಹಾರಾಜರೆ, ನಾನೊಬ್ಬ ರೈತ. ದಿನವಿಡೀ ಹೊಲದಲ್ಲಿ ದುಡಿದಾಗ, ನನಗೆ ತಾನಾಗಿಯೇ ನಿದ್ದೆ ಬರುತ್ತದೆ. ಈ ಅರಮನೆಗೆ ಬಂದಾಗ ಅಂತಹ ದುಡಿತ, ಪರಿಶ್ರಮವಿಲ್ಲದೆ ನಿದ್ದೆ ಬರುತ್ತಿಲ್ಲ' ಈ ಮಾತನ್ನು ಕೇಳಿದಾಗ ಅಕ್ಬರನು ಸಂತಸದಿಂದ 'ಶಾಭಾಷ್' ಎಂದು ಚಪ್ಪಾಳೆ ತಟ್ಟಿದ. ಬೀರ್‌ಬಲ್‌ನೂ ಆನಂದದಿಂದ ಅರಸನನ್ನು ಅನುಕರಿಸುತ್ತಾ ಚಪ್ಪಾಳೆ ತಟ್ಟಿದ. ಇಲ್ಲಿ ಸಹಜ-ನಿದ್ರೆಯ ರಹಸ್ಯ ಮತ್ತು ಪರಿಶ್ರಮದ ಮಹತ್ವ ಅಡಗಿದೆ. ದುಡಿದು ತಿನ್ನುವ ರೈತರು, ಕೂಲಿಕಾರರು, ಜನಸಾಮಾನ್ಯರು ತಮ್ಮ ಪರಿಶ್ರಮದಿಂದ ಇಮ್ಮಡಿ ಲಾಭವನ್ನು ಪಡೆಯುತ್ತಾರೆ. ಹೊಲದಲ್ಲಿ ದುಡಿಯುವುದರಿಂದ ದೊರೆಯುವ ಆರ್ಥಿಕ ಲಾಭದೊಂದಿಗೇ, ದೈಹಿಕ ಆರೋಗ್ಯ ಲಾಭವನ್ನೂ ಪಡೆಯುತ್ತಾರೆ. ಈ ಆರೋಗ್ಯ ಲಾಭಕ್ಕೆ ಬೆಲೆ ಕಟ್ಟಲು ಸಾಧ್ಯವೇ ? - ಡಾ.ಡಿ.ವೀರೇಂದ್ರ ಹೆಗ್ಗಡೆ, ಧರ್ಮಸ್ಥಳ

ಸಂಗ್ರಹ : ವೀರೇಶ್ ಅರಸಿಕೆರೆ.

ಶ್ರದ್ಧೆ ಮತ್ತು ಅದಮ್ಯ ಉತ್ಸಾಹ

 

💐ಶ್ರದ್ಧೆ💐
  ಚಿಕ್ಕವರಾದರೇನು ದೊಡ್ಡವರಾದರೇನು ಶ್ರದ್ಧೆ ಉಳ್ಳವರು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು, ಶ್ರದ್ಧೆಯಿಲ್ಲದವರು ಎಂಥವರಿದ್ದರೂ ಏನನ್ನೂ ಸಾಧಿಸಲಾರರು. ಸಿದ್ಧಿಯ ಶ್ರೀ ಗಿರಿಯತ್ತ ನಮ್ಮನ್ನು ಕೈಹಿಡಿದು ಮುನ್ನಡೆಸುವುದೇ ಈ ಶ್ರದ್ಧೆ.
 ಒಂದು ಭದ್ರವಾದ ಕೋಟೆಯ ಗೋಡೆ ಇತ್ತು ಅದರಲ್ಲಿ ಆಲದ ಮರದ ಒಂದು ಚಿಕ್ಕಬೀಜ ಬಂದು ಬಿದ್ದಿತು. ಕೋಟೆ ಗೋಡೆಯು ದರ್ಪದಿಂದ ಕೇಳಿತು- "ಇಲ್ಲಿ ಮಣ್ಣಿಲ್ಲ, ನೀರಿಲ್ಲ ನೀನು ಹೇಗೆ ಬೆಳೆಯುತ್ತಿ?" "ನೂಡುತ್ತಿರು ನಾನು ಹೇಗೆ ಬೆಳೆಯುತ್ತೇನೆ!" ಎಂದಿತು ಬೀಜ.ಅಷ್ಟರಲ್ಲಿ ಮಳೆ ಬಿದ್ದಿತು. ಅಷ್ಟು ಹಸಿ ಸಾಕಾಗಿತ್ತು. ಅದು ಬೇರು ಬಿಟ್ಟಿತು. ಬಿಗಿ ಹಿಡಿಯಿತು. ನಿಧಾನವಾಗಿ ಗಾಳಿ ಧೂಳ ಬಳಸಿಕೊಂಡು ಮೊಳಕೆಯೊಡೆಯಿತು. ದಿನಗಳು ಉರುಳಿದವು. ಋತುಗಳು ಸರಿದವು. ಬೇರು ಬಲಿಷ್ಠವಾಯಿತು! ಕೋಟೆಗೋಡೆ ಸಡಿಲಾಯಿತು!! ಚಿಕ್ಕ ಬೀಜದ ಶ್ರದ್ಧೆಗೆ ಭದ್ರವಾದ ಕೋಟೆಗೋಡೆಯು ನಡುಗಿ ಹೋಗಿತ್ತು.!

 💐ಅದಮ್ಯ ಉತ್ಸಾಹ💐
    ತೇನಸಿಂಗನು ಉತ್ಸಾಹಿ ಬಾಲಕ, ದನಗಾಯಿ ಹಿಮದ-ಬೆಟ್ಟಗಳ ಮಧ್ಯಮ ಚಿಕ್ಕ ಗ್ರಾಮದಲ್ಲಿ ವಾಸಿಸುತ್ತಿದ್ದನು. ದಿನ ಬೆಳಗಾದರೆ ಜಗತ್ತಿನ ಅತ್ಯುನ್ನತ ಪರ್ವತ ಎವರೆಸ್ಟ್ ಶಿಖರದ ದರ್ಶನ ಆಗುತ್ತಿತ್ತು! ಒಂದು ದಿನ ಅವನು ತಾಯಿಗೆ ಕೇಳಿದ- "ಈ ಶಿಖರವನ್ನು ಯಾರಾದರೂ ಹತ್ತಿರುವರೇನಮ್ಮ?" ತಾಯಿ ಹೇಳಿದಳು- "ಇಲ್ಲ ಮಗು, ಇದೂವರೆಗೆ ಜಗತ್ತಿನಲ್ಲಿ ಯಾರೂ ಅದನ್ನು ಹತ್ತಿಲ್ಲ;  ಹತ್ತುವ ಪ್ರಯತ್ನವನ್ನೂ ಮಾಡಿಲ್ಲ!" ಅದೇ ದಿನ ತೇನಸಿಂಗನು ಶಿಖರವನ್ನು ಹತ್ತುವ ನಿರ್ಣಯ ಮಾಡಿದ. ಅದೆಂಥ ನಿರ್ಣಯವದು!  ಕುಳಿತರೆ ನಿಂತರೆ ಅದರದೆ ಕನಸು! ಅದೆಷ್ಟು ಬಾರಿ ಆತ ಕನಸಿನಲ್ಲಿ ಆ ಶಿಖರವನ್ನು ಏರಿ ಇಳಿದನೋ; ಇಳಿದು ಏರಿದನೋ? ಸದಾ ಮನಸಿನಲ್ಲಿ ಅದರದೇ ಚಿಂತನೆ. ಅದೇನು ಸಾಮಾನ್ಯ ಶಿಖರವಲ್ಲ.  ಆ ಶಿಖರವನ್ನು ಏರುವಾಗ ಯಾವುದೇ ಕ್ಷಣವೂ ಜೀವನದ ಕೊನೆಯ ಕ್ಷಣವಾಗಬಹುದು. ಆದರೆ ಆತ ಅಷ್ಟೇ ಛಲದಿಂದ, ಉತ್ಸಾಹದಿಂದ, ಪ್ರೇಮದಿಂದ ನಿರಂತರ ಪ್ರಯತ್ನಿಸಿದ. ಅದ್ಭುತ ಸಾಧನೆಯದು. ಶಿಖರವನ್ನೇರುವ ಕನಸು ಆತನ ಮೈ-ಮನವನುಂಡು ಪ್ರಾಣಕ್ಕೆ ಪ್ರಾಣವಾಯಿತು. ಒಂದು ದಿನ ಆತನ ಕನಸು ನನಸಾಯಿತು! ಜಗತ್ತಿನ ಅತ್ಯುನ್ನತ ಶಿಖರವನ್ನು ಏರಿದ ಪ್ರಪ್ರಥಮ ವ್ಯಕ್ತಿಯಾದ! ಆತನದು ಅದಮ್ಯ ಉತ್ಸಾಹ!

ಶ್ರೀ ಸಿದ್ಧೇಶ್ವರ ಸ್ವಾಮೀಜಿ, ವಿಜಯಪುರ.                                    ಸಂಗ್ರಹ: ವೀರೇಶ್ ಅರಸಿಕೆರೆ.