SEMINAR ON DISEASES

Held by SANJEEVINI eco club GHS talewad.

SBNN GOVT HIGH SCHOOL, TALEWAD

Our beatifu school with coverd lott of trees and garden.

INTERNATIONAL YOGA DAY

300 above students participated in this celebration.

PATIBHA KARANJI AT MULAWAD

Our students participated and won many events.

PRACTICAL IN ATL LAB

Our students participated in atal thinkaring lab.

Thursday, October 5, 2023

ಮಮಕಾರ


 *🌻ದಿನಕ್ಕೊಂದು ಕಥೆ🌻                                                  ಮಮಕಾರ*

ನಗರದ ಪ್ರತಿಷ್ಠಿತ ಚಿನ್ನ ಬೆಳ್ಳಿ ವ್ಯಾಪಾರಿ,ಕೇಶವ ಮೂರ್ತಿ ತನ್ನ ಸಂಬಂಧಿಕರ ಪೈಕಿ

ಮಾಧವಿಯ ಕೈ ಹಿಡಿದು ಒಂದು ದಶಕ ಉರುಳಿದರೂ ಅವರಿಗೆ ಸಂತಾನ ಭಾಗ್ಯ ಪ್ರಾಪ್ತಿ ಆಗಿರಲಿಲ್ಲ.ಹಾಗಂತ ಅವರೇನು ಪರಸ್ಪರರನ್ನು ದೂಷಿಸುತ್ತ ಕಾಲ ಕಳೆಯಲಿಲ್ಲ.ಬದಲಿಗೆ ಈ ವಿಷಯ ಕ್ಕೆ ಸಂಬಂಧಿಸಿದಂತೆ ಪತಿ ಪತ್ನಿ ಯರು ಗಹನವಾಗಿ ಯೋಚಿಸಿದ ನಂತರ, ಮಾಧವಿ ನೀಡಿದ ಸಲಹೆಯಂತೆ ಅವರು ಒಂದು ಹೆಣ್ಣು ಮಗುವನ್ನು ದತ್ತು ತೆಗೆದುಕೊಳ್ಳಬೇಕೆಂಬ ನಿರ್ಧಾರ ಕ್ಕೆ ಬಂದಿದ್ದರು.ಇವರು ಕೈಕೊಂಡ ನಿರ್ಧಾರಕ್ಕೆ ಹತ್ತಿರದ ಬಂಧು ಬಳಗದವರಿಂದ ಅಪಸ್ವರ ಕೇಳಿ ಬಂದಿತ್ತಾದರೂ ಅದಕ್ಕೆ ಸೊಪ್ಪು ಹಾಕದೇ ತಾವು ನಿಶ್ಚಯಿಸಿದಂತೆ ಮಾಧವಿಯ ಕಡೆ ದೂರದ ಸಂಬಂಧಿಗಳ ಪೈಕಿ ಅನಾಥೆ ಯಾದ  ಪರಿಮಳ ಳನ್ನು ಕಾನೂನನ್ವಯ ಎಲ್ಲ ವಿಧಿ ವಿಧಾನಗಳನ್ನು ಕ್ರಮವಾಗಿ ಅನುಸರಿಸಿ , ಒಂದು ಶುಭ ಮುಹೂರ್ತದಲ್ಲಿ ಆಕೆಯನ್ನು ದತ್ತು ಪಡೆದು ಮನೆಗೆ ಕರೆದು ತಂದಿದ್ದರು.ಮೂರು ವರ್ಷದ ಪುಟ್ಟ ಪರಿಮಳ ನೋಡಲು ಎಷ್ಟು ಮುದ್ದಾಗಿದ್ದಳೋ ಅಷ್ಟೇ ಚೂಟಿ ಕೂಡ ಆಗಿದ್ದಳು.

ಕೆಳ ಮಧ್ಯಮ ವರ್ಗದ ಕುಟುಂಬದಲ್ಲಿ ಬೆಳೆದು ಬಂದ ಬಾಲೆ, ಅತ್ಯಾಧುನಿಕ ಮಾಧವಿ ಯ ಮನೆಗೆ ಕಾಲಿಟ್ಟಾಗ ಎಲ್ಲವನ್ನು ಬೆರಗು ಕಣ್ಣುಗಳಿಂದ ನೋಡುತ್ತ

ಶುರುವಿನಲ್ಲಿ ಆತಂಕದಲ್ಲಿದ್ದಳು.ಬರಬರುತ್ತ ಮಾಧವಿ ತಾಯಿಯ ಪ್ರೀತಿ,ಮಮಕಾರ ಧಾರೆಎರೆಯಲು ಆರಂಭಿಸಿದ ಬಳಿಕ ಮುಂದಿನ ಆರೇಳು ತಿಂಗಳು ಗಳಲ್ಲಿ ಹೊಸ ಪರಿಸರಕ್ಕೆ ಹೊಂದಿಕೊಂಡು, ಮೂರು ಹೊತ್ತು  ಮಾಧವಿಯ ಹಿಂದೆ "ಅಮ್ಮಾ.. ಅಮ್ಮಾ.."ಎಂದು ಓಡಾಡತೊಡಗಿದಾಗ ಮಾಧವಿ  ಅವ್ಯಕ್ತ ಆನಂದ ಅನುಭವಿಸಲಾರಂಭಿಸಿದಳು.ಹಾಗೆಯೇ ಮಾಧವಿ ಹೇಳಿ ಕೊಟ್ಟಂತೆ ಆಕೆಯ ಪತಿಗೆ"ಅಪ್ಪಾ..ಅಪ್ಪಾ.."ಎಂದು ಕೂಗುವುದನ್ನು ರೂಢಿಸಿಕೊಂಡಳು.

ಪರಿಮಳ ಅವರ ಮನೆಗೆ ಬಂದು ಒಂದು ವರ್ಷ ಕಳೆದಿತ್ತು ಅಷ್ಟೇ.ಆಗ ವಿಚಿತ್ರವೋ

ಪವಾಡವೋ ಅಥವಾ ವಿಧಿಯ ಆಟವೋ ಎಂಬಂತೆ ಮಾಧವಿ ಚೊಚ್ಚಲು ಗರ್ಭಿಣಿ ಯಾಗಿದ್ದಳು.ತಾನು ತಾಯಿ ಆಗುತ್ತಿರುವ ವಿಚಾರ ಅವಳಲ್ಲಿನ ಸಂಭ್ರಮ ಇನ್ನೂ ಹೆಚ್ಚಾಗಿಸಿತ್ತು.ಆಗಾಗ ಆಕೆ ಪರಿಮಳಳಿಗೆ "ಪುಟ್ಟೀ... ನಿನ್ನ ಜೊತೆ ಆಡೋಕೆ ಪುಟ್ಟ ಬರತ್ತೆ"ಎಂದು ಕೇಳಿದಾಗ ಅದು ಖುಷಿ ಆಶ್ಚರ್ಯ ದಿಂದ ನಲಿದಾಡಿ ತನ್ನ ಸಂತೋಷ ವ್ಯಕ್ತಪಡಿಸುತ್ತಿದ್ದಳು.ದಿನಗಳು ಉರುಳಿದ ಬಳಿಕ ಮಾಧವಿ ಒಂದು ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದಾಗ ಎಲ್ಲರಿಗೂ  ಖುಷಿಯಲ್ಲಿ ಮಿಂದೆದ್ದಿದ್ದರು.ಪರಿಮಳಳಂತೂ ಶಾಲೆಯ ಅವಧಿ ಹೊರತು ಪಡಿಸಿ ಉಳಿದೆಲ್ಲ ವೇಳೆಯನ್ನು  ಪುಟ್ಟ ಪಾಪು ನಿನ್ನೊಂದಿಗೆ ಆಟ ಆಡುತ್ತ ಕಾಲ ಕಳೆಯುತ್ತಿದ್ದಳು.

ಆ ಮಗುವಿಗೆ ಒಂದು ಶುಭ ಮುಹೂರ್ತದಲ್ಲಿ "ನಿಶಾಂತ್"ಎಂದು ನಾಮಕರಣ

ಮಾಡಿ ಮುಗಿಸಿದ್ದರು.

ಮಾಧವಿ ಮತ್ತು ಕೇಶವಮೂರ್ತಿ ಯವರ ಬದುಕಿನ ಹಡಗು ಈ ರೀತಿ ನಿಶ್ಚಿಂತೆಯಿಂದ ಸಾಗುತ್ತಿದ್ದಾಗ ಅನಿರೀಕ್ಷಿತವಾಗಿ ಬಿರುಗಾಳಿಗೆ ಸಿಲುಕಿ, ಒಂದು ದೊಡ್ಡ ಬಂಡೆಗೆ ಅಪ್ಪಳಿಸಿದಂತೆ ಒಂದು ದಿನ ಸಂಜೆ ಕೇಶವ ಮೂರ್ತಿ ಅಂಗಡಿ ಯಿಂದ ಮನೆಗೆ ಬಂದವ ತೀವ್ರ ಎದೆನೋವು ಎಂದು ನರಳಲು ಆರಂಭಿಸಿದ. ತಡಮಾಡದೇ  ಮಾಧವಿ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ನುರಿತ ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಆತ ಬದುಕಿ ಉಳಿಯಲಿಲ್ಲ.ಪತಿಯನ್ನು ಕಳೆದುಕೊಂಡ ಮಾಧವಿ ಯ ಜಂಘಾಬಲವೇ ಉಡುಗಿ ಹೋದಂತಾಗಿತ್ತು. ಕಾಲ ಎಲ್ಲವನ್ನೂ ಸರಿಪಡಿಸುತ್ತದೆ ಎನ್ನುವಂತೆ ತನ್ನ ಎರಡೂ ಕಂದಮ್ಮಗಳ ಲಾಲನೆ ಪಾಲನೆಯಲ್ಲಿ ತೊಡಗಿದರೂ ಆಗಾಗ ಪತಿಯ ಅಗಲುವಿಕೆಯ ದು:ಖ  ನೆನಪಿಸಿಕೊಂಡು ಮೌನದಿಂದ ಕಣ್ಣೀರಿಡುತ್ತಿದ್ದಳು.

ಕಾಲ ಸರಿದಂತೆ ಮಾಧವಿಯ ಮಕ್ಕಳಿಬ್ಬರೂ ಶಾಲೆಗೆ ಹೋಗಲಾರಂಭಿಸಿದರು

ಮಾಧವಿ ಐದನೇ ತರಗತಿಯಲ್ಲಿ ದ್ದಾರೆ ನಿಶಾಂತ್ ಒಂದನೇ ತರಗತಿಯಲ್ಲಿ ಓದುತ್ತಿದ್ದ.ಓದಿನ ವಿಚಾರದಲ್ಲಿ ಪರಿಮಳ ಇಡೀ ತರಗತಿಯಲ್ಲಿ ಮೊದಲನೇಯ ಸ್ಥಾನದಲ್ಲಿದ್ದಾರೆ ನಿಶಾಂತ್ ಅಷ್ಟೊಂದು ಚುರುಕಾಗಿರಲಿಲ್ಲ ಇದರಿಂದ ಸಹಜವಾಗಿ ಪರಿಮಳ  ಎಲ್ಲರ ಹೊಗಳಿಕೆಗೆ ಪಾತ್ರಳಾಗಿದ್ದಳು .ಈ ವಿಷಯ ಪುಟ್ಟ ನಿಶಾಂತ್ ನ

ಕಿವಿಗೆ ಬಿದ್ದಾಗಲೆಲ್ಲ ಆತ ಆಂತರ್ಯದಲ್ಲಿ ಅಸಮಾಧಾನ ಪಡತೊಡಗುತ್ತಿದ್ದ.

ಮಾಧವಿ ಗೆ ನಿಶಾಂತ್ ನೂ ಓದಿನಲ್ಲಿ ಮುಂದೆ ಬರಲಿ ಎಂಬ ಇರಾದೆ ಯಿಂದ 

ಆತನಿಗಾಗಿ ಖಾಸಗಿ ಶಿಕ್ಷರನ್ನು ನೇಮಿಸಿ ಕೊಂಡಿದ್ದಳು.ಆದರೆ ಅದೇಕೋ ಆತ ಓದಿನ ಕಡೆ  ನಿರೀಕ್ಷಿತ ಗಮನ ನೀಡದಾದಾಗ ಮಾಧವಿ ಗೆ ಒಂದು ಬಗೆಯ ಚಿಂತೆ ಕಾಡತೊಡಗಿತು.ಈ ಕುರಿತು ಪರಿಮಳಳ ಎದುರು ತೋಡಿಕೊಂಡು "ನೀನಾದರೂ 

ಅವನಿಗೆ ಬುದ್ಧಿ ಹೇಳಮ್ಮಾ"ಎಂದು ಕೇಳಿದಾಗ ಆಕೆ ಅಮ್ಮನ ಮಾತಿಗೆ ಬೆಲೆ ಕೊಟ್ಟು ವಿದ್ಯೆಯ ಮಹತ್ವ ದ ಬಗ್ಗೆ ಆತನಿಗೆ ತಿಳುವಳಿಕೆ ನೀಡಿದರೂ ಅದೇನು ಪ್ರಯೋಜನ ವಾಗಲಿಲ್ಲ.ನಿಶಾಂತ್ ಬೆಳೆಯುತ್ತ ಹೋದಂತೆ ಸಹವಾಸದ ದೋಷದಿಂದಲೋ

ಏನೋ ಮನೆಯವರೊಂದಿಗೆ ಒರಟಾಗಿ ವರ್ತಿಸಲಾರಂಭಿಸಿದ.ಜವಾಬ್ದಾರಿ ಹೆಗಲಿಗೇರಿದಾಗ ಸರಿ ಹೋದಾನು ಎಂದು ಅಂದು ಕೊಂಡ ಮಾಧವಿ  ಆತನಿಗೆ ಹೆಚ್ಚು ಹೇಳುವುದನ್ನು ಕಡಿಮೆ ಮಾಡಿದಳು.ಇದೇ ಅವನಿಗೆ ಒಂದು ರೀತಿಯ ಪ್ಲಸ್ ಪಾಯಿಂಟ್ ಆದಂತಾಯ್ತು.

ಓದಿನಲ್ಲಿ ಮುಂದಿದ್ದ ಪರಿಮಳ  ಆಂಗ್ಲ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದು

ಅದೇ ಊರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಲು ಆರಂಭಿಸಿದಳು.ಇತ್ತ ನಿಶಾಂತ್ ಕಾಲೇಜು ಓದನ್ನು ಅರ್ಧಕ್ಕೆ ನಿಲ್ಲಿಸಿ, ಯಾವುದೋ

ವ್ಯಾಪಾರ ಮಾಡುತ್ತೇನೆ ಎಂದು ಮಾಧವಿ ಯಿಂದ ಹಣ ಕೀಳಲಾರಂಭಿಸಿದ.

ಈತನ ಈ ಹವ್ಯಾಸ ಅಪಾಯಕಾರಿ ಮಟ್ಟ ಮುಟ್ಟುವುದೆಂದರಿತ  ಮಾಧವಿ

ತಾಯಿ ಯಾಗಿ  ಆತನ ಒಳ್ಳೆಯದಕ್ಕೆ ಸ್ವಲ್ಪ ಕಟುವಾಗಿ ಮಾತನಾಡಿದ್ದಕ್ಕೆ ಅಂದು

ಆತ ತನ್ನ ತಾಯಿ ಎಂದೂ ನೋಡದೇ ತುಂಬ ತುಚ್ಛವಾಗಿ ಮಾತನಾಡಿದ.ಅಷ್ಟೇ ಅಲ್ಲದೇ ಮಾತು ಮಾತಿಗೆ ಪರಿಮಳಳ ವಿಷಯ ಎಳೆದು ತಂದು ರಾದ್ಧಾಂತ ಮಾಡಿದ. ಈ ನಡುವೆ ಪರಿಮಳಳಿಗೆ ಬೇರೆ ಊರಿಗೆ ವರ್ಗವಾಗಿದ್ದು ಮಾಧವಿ ಗೆ

ಬೇಸರದ ವಿಷಯ ವಾಗಿದ್ದರೆ ಈತನಿಗೆ ಇನ್ನು ತನಗಾರೂ ಅಡ್ಡಿಪಡಿಸಲ್ಲ ಎಂಬ ಧೋರಣೆ ತಲೆ ಹೊಕ್ಕಿತ್ತು.

ಮಾಧವಿ ಬೇರೆ ಊರಿಗೆ ಹೋಗಿ ಎರಡು ವರ್ಷಗಳ ನಂತರ ಆಕೆಗೆ ಕಂಕಣ ಬಲ ಕೂಡಿ ಬಂದಿದ್ದರಿಂದ ಸರ್ಕಾರದ ಇಲಾಖೆಯೊಂದರಲ್ಲಿ ಅಧಿಕಾರಿಯಾಗಿದ್ದ ಶ್ರೀಪತಿ ಯೊಂದಿಗೆ  ಮದುವೆ ಮಾಡಿ ಮಾಧವಿ ಆ ಒಂದು ಜವಾಬ್ದಾರಿ ಯಿಂದ ಮುಕ್ತ ಳಾಗಿದ್ದಳು.ಎರಡು ವರ್ಷದ ನಂತರ ಪರಿಮಳ ತಾನಿದ್ದ ಊರಲ್ಲಿ ಹೊಸ ಮನೆಕಟ್ಟಿಸಿಕೊಂಡಾಗಲಂತೂ ಮಾಧವಿಗೆ ಹಿಡಿಸಲಾರದಷ್ಟು ಸಂತೋಷ ವಾಗಿತ್ತು.

ಇತ್ತ ನಿಶಾಂತ್ ದಿನೇ ದಿನೇ ಚಟದ ದಾಸನಾಗಿ ಕಣ್ಮುಂದೆ ಹಾಳಾಗಿ ಹೋಗುತ್ತಿರುವುದನ್ನು ಕಂಡು ಒಳ ಒಳಗೇ ಗಂಭೀರ ವಾಗಿ ಚಂತಿಸಲಾರಂಭಿಸಿದಳು.ಇದರಿಂದ ಆಕೆಯ ಆರೋಗ್ಯ ಮೊದಲಿಗಿಂತ ಕ್ಷೀಣಿಸಲಾರಂಭಿಸಿತು. ವಿಷಯ ಅರಿತ ನಂತರ ಪರಿಮಳ ತನ್ನ ತಾಯಿಯನ್ನು

ಕರೆದು ಕೊಂಡು ಹೋಗಿ ಸೂಕ್ತ ಚಿಕಿತ್ಸೆ ನೀಡೀದಳು.ಒಂದೆರಡು ತಿಂಗಳ ಬಳಿಕ ಮಾಧವಿ ಆರೋಗ್ಯ ಚೇತರಿಸಿದ ನಂತರ ತನ್ನ ಊರಿಗೆ ವಾಪಸ್ ಬಂದಳು.ಅಷ್ಟರೊಳಗೆ ಆಕೆಯ ಅನುಪಸ್ಥಿತಿಯಲ್ಲಿ ನಿಶಾಂತ್ ಹಣ ಹಾಗೂ ಆರೋಗ್ಯ ಕೆಡಿಸಿಕೊಂಡಿದ್ದ. ಯಾವಾಗಲೂ ತಾಯಿಗೆ ಹಣಕ್ಕಾಗಿ ಪೀಡಿಸುವುದೇ ಆಗಿತ್ತು.ಕಂಡಕಂಡವರಲ್ಲಿ ಸಾಲು ಸೋಲ ಮಾಡಿ ಕೊನೆಗೆ ತಾಯಿಗೆ ಹೆದರಿಸಿ ಬೆದರಿಸಿ ಮನೆ ಹರಾಜು ಹಾಕುವ ಮಟ್ಟಕ್ಕೆ ತಂದಿಟ್ಟಿದ್ದ. ನೀನು ಮಾಡುತ್ತಿರುವುದು ತಪ್ಪು ಎಂದು ಹೆಳಿದ್ದಕ್ಕೆ ಆ ದಿನ ನಿನ್ನಿಷ್ಟ ಬೇಕಿದ್ರೆ ಇರು ಇಲ್ಲಾಂದ್ರೆ ಹೊರಟು ಹೋಗು ಎಂದು  ಹುಚ್ಚಾಪಟ್ಟೆ ರೆಗಾಡಿದ್ದ.ಈ ವಿಷಯ ಮಗಳಿಗೆ ಹೇಳಿದರೆ ಮಗ ಇನ್ನೇನು ಮಾಡುತ್ತಾನೋ ಎಂಬ ಅಳುಕಿನಿಂದ ತುಟಿ ಪಿಟಕ್ಕೆನ್ನದೇ ಮೌನ ವಾಗಿ ಉಳಿದು ಗತಿಸಿದ ಪತಿಯ ಫೋಟೋ ಎದುರು ನಿಂತು ದು:ಖಿಸುವುದೇ ಆಗಿತ್ತು ಅವಳ ದಿನಚರಿ.ಮನಸ್ಸಿನಲ್ಲಿ ಮನೆ ಹರಾಜಿನ ವಿಷಯ ತಾಳದಾದಾಗ ಪರೋಕ್ಷವಾಗಿ ಇದನ್ನು ಮಗಳ ಗಮನಕ್ಕೆ ತಂದು ತಂದೆಯ ಮನೆಯನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳುವಂತೆ ಹೇಳಿದ್ದಳು.

ಮನೆಯ ಹರಾಜಿನ ದಿನವಂತೂ ಮಾಧವಿಗೆ ಎನೂ ತೋಚದೇ ಜ್ವರ ಬಂದಂತಾಗಿತ್ತು.ಹರಾಜುದಾರರು ಬಂದು ಕೊನೆಯ ಬಿಡ್ಡು ಕೂಗು ವೇಳೆ ಸರಿಯಾಗಿ ಪತಿಯೊಂದಿಗೆ ಬಂದ ಪರಿಮಳ ತಾನೇ ಕೂಗಿ ಅಂತೂ ಅದನ್ನು ತನ್ನದಾಗಿಸಿಕೊಂಡು, ತಮ್ಮನನ್ನು ಕೂಗಿ ಇನ್ನು ಮುಂದೆ ಯಾವ ಕಾರಣಕ್ಕೂ ಅಮ್ಮ ನಿನ್ನೊಂದಿಗೆ ಇಲ್ಲಿರಲ್ಲ ನನ್ನೊಂದಿಗೆ ಇರುತ್ತಾಳೆ ಎಂದು ಕಠೋರವಾಗಿ ನುಡಿದು, ನೀನು ಸರಿದಾರಿಗೆ ಬಂದ ದಿನವೇ ಈ ಮನೆ  ನಿನಗೆ ಮಾಡಿಕೊಡುವೆ"ಎಂದು ಹೇಳಿ

ತಾಯಿಯ ಕೈ ಹಿಡಿದು ಬಾ.. ಅಮ್ಮಾ ಹೋಗೋಣ ಎಂದು ಕಾರಿನೊಳಗೆ ಕೂರಿಸಿಕೊಂಡು ಹೊರಟಾಗ ಅವಳಲ್ಲಿನ ಮಮಕಾರ ಕಂಡ ಮಾಧವಿಯ ಕಣ್ಣುಗಳು  ತುಂಬಿ ಬಂದಿದ್ದವು.

                                  

ಕೃಪೆ:ಅರವಿಂದ.ಜಿ.ಜೋಷಿ.                      

ಸಂಗ್ರಹ:ವೀರೇಶ್ ಅರಸೀಕೆರೆ. From Facebook

Monday, October 2, 2023

ಗಾಂಧೀಜಿ ಜಯಂತಿ ಪ್ರಯುಕ್ತ ನಮ್ಮ ಹೆಮ್ಮೆಯ ಮುಖ್ಯೋಪಾಧ್ಯಾಯರ ಭಾಷಣ

ಗಾಂಧೀಜಿ ಜಯಂತಿ ಪ್ರಯುಕ್ತ ನಮ್ಮ ಹೆಮೆಯ ಮುಖ್ಯೋಪಾಧ್ಯಾರ ಭಾಷಣ..

ಲಾಲ ಬಾಹದ್ದೂರ ಶಾಸ್ತ್ರಿ ಜಯಂತಿ

 


Thursday, September 28, 2023

ವಿಶ್ವ ‌ಪರಿಸರ ‌ದಿನಾಚರಣೆ

 





ಜಗತ್ತು ಇಂದು ಎದುರಿಸುತ್ತಿರುವ ಅತ್ಯಂತ ದೊಡ್ಡ ಸಮಸ್ಯೆ ಎಂದರೆ, ಅದು ಪರಿಸರ ಮಾಲಿನ್ಯ. ಪ್ರತೀ ವರ್ಷವೂ ಹೆಚ್ಚುತ್ತಾ ಸಾಗಿರುವ ಪರಿಸರ ಮಾಲಿನ್ಯವು ಭೂಮಿಯ ಪರಿಸರವನ್ನು ಬಂಜರಾಗಿಸುತ್ತಾ ಸಾಗಿದೆ ಮತ್ತು ಭೂಮಿಯ ಮೇಲೆ ಸರಿಪಡಿಸಲಾಗದ ಸಮಸ್ಯೆಗಳನ್ನು ತಂದೊಡ್ಡುತ್ತಿದೆ. ಪರಿಸರಮಾಲಿನ್ಯದಲ್ಲಿ ಮುಖ್ಯವಾಗಿ ಐದು ವಿಧಗಳು, ಅವೆಂದರೆ-

ವಾಯುಮಾಲಿನ್ಯ, ಜಲಮಾಲಿನ್ಯ, ಮಣ್ಣಿನ ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು ವಿಕಿರಣ ಸಂಬಂಧಿತ ಮಾಲಿನ್ಯ. ಪ್ರತೀ ವರ್ಷವೂ ಜಗತ್ತಿನಲ್ಲಿ ಸುಮಾರು 2.4 ಮಿಲಿಯನ್‌ ಜನರು, ಕೇವಲ ವಾಯುಮಾಲಿನ್ಯದ ನೇರ ಪರಿಣಾಮಗಳಿಂದಾಗಿಯೇ ಮರಣ ಹೊಂದುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಅಂದಾಜು ಮಾಡಿದೆ.

ಒಂದು ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುವಂತೆ ವಿವಿಧ ಹಾನಿಕಾರಕ ಅಂಶಗಳನ್ನು ಅಥವಾ ಅನಾರೋಗ್ಯಕರ ಅಂಶಗಳನ್ನು ಆ ಪರಿಸರದ ಒಳಕ್ಕೆ ಸೇರಿಸುವುದು- ಇದು ಪರಿಸರಮಾಲಿನ್ಯಕ್ಕೆ ನಾವು ಕೊಡಬಹುದಾದ ಅತ್ಯಂತ ಸೂಕ್ತ ವಿವರಣೆ. ಬಹಳ ಸಾಮಾನ್ಯ ರೀತಿಯ ಮಾಲಿನ್ಯ ಕಾರಕಗಳು ಅಂದರೆ, ರಾಸಾಯನಿಕಗಳು, ತ್ಯಾಜ್ಯಗಳು ಮತ್ತು ಕಲುಷಿತ ನೀರು. ರಾಜಧಾನಿ ಬೀಜಿಂಗ್‌ ಸೇರಿದಂತೆ ಚೀನಾದ ನಗರಗಳು ವಾಯುಮಾಲಿನ್ಯಕ್ಕೆ ಕೊಡಬಹುದಾದ ಅತ್ಯಂತ ಉತ್ತಮ ಉದಾಹರಣೆ. ಅತ್ಯಧಿಕ ಮಟ್ಟದಲ್ಲಿ ಕಲುಷಿತವಾಗಿರುವ ಭಾರತದ ಗಂಗಾನದಿ ಜಲಮಾಲಿನ್ಯಕ್ಕೆ ಕೊಡಬಹುದಾದ ಅತ್ಯಂತ ಉತ್ತಮ ಉದಾಹರಣೆಗಳಲ್ಲಿ ಒಂದು.

ನೈರ್ಮಲ್ಯವು ಸ್ವಾತಂತ್ರÂಕ್ಕಿಂತಲೂ ಹೆಚ್ಚಿನದು ಎಂದು ಮಹಾತ್ಮಾ ಗಾಂಧೀಜಿಯವರು ಹೇಳುತ್ತಾರೆ. ಆದರೆ ದುರದೃಷ್ಟದ ವಿಚಾರ ಅಂದರೆ, ನಾವು ಸ್ವಾತಂತ್ರÂವನ್ನು ಗಳಿಸಿ 67 ವರ್ಷಗಳನ್ನು ಕ್ರಮಿಸಿದ್ದರೂ ಸಹ, ಇಲ್ಲಿ ಶೌಚಾಲಯದ ಸೌಕರ್ಯ ದೊರೆತಿರುವುದು ಗ್ರಾಮೀಣ ನಾಗರಿಕರಲ್ಲಿ ಸುಮಾರು 30% ರ‌ಷ್ಟು ಜನರಿಗೆ ಮಾತ್ರ.

ಮನುಷ್ಯ ತನ್ನ ಜೀವನ ಸೌಕರ್ಯದ ಅತಿಲಾಲಸೆಗಾಗಿ ಪರಿಸರವನ್ನು ಕೆಟ್ಟದಾಗಿ ಬಳಸಿಕೊಳ್ಳುತ್ತಿರುವ ಧಾವಂತದಲ್ಲಿ, ಸ್ವಾರ್ಥಪರನಾಗಿ ಮಾಲಿನ್ಯದ ಪರಿಣಾಮಗಳನ್ನೇ ಮರೆತುಬಿಟ್ಟಿದಾನೆ. ಕೈಗಾರಿಕಾ ಅಭಿವೃದ್ಧಿಗಳು ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಉಂಟು ಮಾಡುತ್ತಿವೆ. ಇಡೀ ಜೀವಜಗತ್ತಿನ ಜೀವನಾಧಾರ ವ್ಯವಸ್ಥೆಯನ್ನು ಮನುಷ್ಯ ತನ್ನದೇ ಸ್ವಂತ ಸ್ವತ್ತು ಎಂಬಂತೆ ಬದಲಾಯಿಸಿ ಬಿಟ್ಟಿದ್ದಾನೆ. ಇದರಿಂದಾಗಿ ಪರಿಸರದ ನೈಸರ್ಗಿಕ ಸಮತೋಲನವೇ ಅಸ್ತವ್ಯಸ್ತವಾಗಿದೆ. ಅತಿಬಳಕೆ, ದುರ್ಬಳಕೆ ಮತ್ತು ಸಂಪನ್ಮೂಲಗಳನ್ನು ಸ್ವಾರ್ಥ ಸಾಧನೆಗಾಗಿ ಬಳಸುತ್ತಿರುವ ಕಾರಣದಿಂದಾಗಿ ಭೂಸವಕಳಿ ಮತ್ತು ಬರಗಾಲದಂತಹ ಗಂಭೀರ ಸಮಸ್ಯೆಗಳು ತಲೆ ಎತ್ತಿವೆ. ಇಷ್ಟು ಮಾತ್ರ ಅಲ್ಲ, ಈಗ ಹವಾಮಾನ ಬದಲಾವಣೆ ಎನ್ನುವ ಇನ್ನೊಂಂದು ಅಪಾಯ ಎದ್ದು ನಿಂತಿದೆ. ಮಾಲಿನ್ಯವು ಜಾಗತಿಕ ತಾಪಮಾನದ ರೂಪದಲ್ಲಿ ಎದುರಾಗಿದ್ದು, ಇದು ಜಾಗತಿಕ ಹವಾಮಾನದ ಕಾರ್ಯ ವಿಧಾನಕ್ಕೆ ಅಡಚಣೆ ಉಂಟುಮಾಡುವ ಮೂಲಕ ಅಡ್ಡಿಪಡಿಸುತ್ತದೆ. ಚಳಿಗಾಲದಲ್ಲಿ ಬಿಸಿಯೇರುತ್ತಿದೆ, ಬರಗಾಲ ಮತ್ತು ಆಹಾರದ ಹಾಹಾಕಾರವು ಹೆಚ್ಚುತ್ತಿದೆ, ಮಳೆಯು ಮಳೆಗಾಲದಲ್ಲಿ ಮಾತ್ರ ಬೀಳುತ್ತದೆ ಎಂದು ಹೇಳುವುದು ಅಸಾಧ್ಯ.

ಆದರೆ ಕಾಲ ಇನ್ನೂ ಮಿಂಚಿಲ್ಲ, ನಾವು ಇನ್ನೂ ಕಾರ್ಯೋನ್ಮುಖರಾಗಬಹುದು ಎನ್ನುವುದು ಜಾnನಿಗಳ ಅಭಿಪ್ರಾಯ, ಕಾರ್ಬನ್‌ ಡೈ ಆಕ್ಸೆ„ಡ್‌ ಅನ್ನು ತಡೆಯುವ ಮೂಲಕ, ಶುದ್ಧ ಇಂಧನಗಳನ್ನು ಉಪಯೊಗಿಸುವ ಮೂಲಕ, ಸರಿಯಾದ ತ್ಯಾಜ್ಯ ವಿಲೇವಾರಿ ಮತ್ತು ವ್ಯಾಪಕ ರೀತಿಯಲ್ಲಿ ಮರಗಿಡಗಳನ್ನು ನೆಡುವ ಮೂಲಕ, ಆಗಿರುವ ಮಾಲಿನ್ಯವನ್ನು ಇನ್ನೂ ಸರಿಪಡಿಸಬಹುದು ಎನ್ನುವುದು ವಿಜಾnನಿಗಳ ಅನಿಸಿಕೆ.


ವಾಯು ಮಾಲಿನ್ಯ
ವಾಯುಮಾಲಿನ್ಯ ಅನ್ನುವುದು ಅತ್ಯಂತ ಭಯಾನಕ ರೀತಿಯ ಮಾಲಿನ್ಯ. ವಾಹನಗಳು, ಕಾರ್ಖಾನೆಗಳು, ಉಷ್ಣ ವಿದ್ಯುತ್‌ ಸ್ಥಾವರಗಳು ಉಗುಳುವ ತ್ಯಾಜ್ಯ ಅನಿಲಗಳು, ಸ್ಥಳೀಯ ದಹಿಸುವಿಕೆಗಳು, ಲೋಹದ ಧೂಳು... ಇತ್ಯಾದಿಗಳು ವಾಯುಮಾಲಿನ್ಯದ ಪ್ರಮುಖ ಕಾರಣಗಳು.

ವಾಯು ಮಾಲಿನ್ಯದ ಕಾರಣದಿಂದಾಗಿ, ಜಗತ್ತಿನಾದ್ಯಂತ ಪರಿಸರದ ಗಾಳಿಯ ಸಂತುಲನೆಯಲ್ಲಿ ವ್ಯತ್ಯಾಸವಾಗುತ್ತದೆ. ಹೆಚ್ಚಿನ ದಹನಕಾರಿ ಇಂಧನಗಳು - ಅಂದರೆ ಬರ್ನಿಂಗ್‌ ಫ‌ುÂಯೆಲ್‌ಗ‌ಳಿಂದ ವಾಯುಮಾಲಿನ್ಯ ಕಾರಕಗಳು ಬಿಡುಗಡೆಯಾಗುತ್ತವೆ. ಇದ್ದಿಲನ್ನು ಸುಡುವಾಗ ಇಂಗಾಲದ ಡೈ ಆಕ್ಸೆ„ಡ್‌ ಮತ್ತು ಸಲ#ರ್‌ ಡೈ ಆಕ್ಸೆ„ಡ್‌ ಉತ್ಪತ್ತಿಯಾಗುತ್ತದೆ. ಆಮ್ಲ ಮಳೆಗೆ ಕಾರಣ ಈ ಇಂಗಾಲದ ಡೈಆಕ್ಸೆ„ಡ್‌. ವಿಮಾನ ಮತ್ತು ರಾಕೆಟ್‌ಗಳಲ್ಲಿ ಕ್ಲೋರೋಫ್ಲೋರೋಕಾರ್ಬನ್‌ಗಳನ್ನು ಪ್ರೊಪೆಲ್ಲೇಂಟ್‌ಗಳಾಗಿ ಮತ್ತು ಶೈತ್ಯಕಾರಕಗಳಾಗಿ ಬಳಸುತ್ತಾರೆ, ಇದರಿಂದ ಓಝೊàನ್‌ ಪದರಕ್ಕೆ ಹಾನಿ ಉಂಟಾಗುತ್ತದೆ.

ವಾಯು ಮಾಲಿನ್ಯವು, ಅನೇಕ ರೀತಿಯ ಕಾಯಿಲೆಗಳಿಗೆ ಮತ್ತು ದೃಷ್ಟಿ ಮಾಂದ್ಯತೆಗೆ ಕಾರಣವಾಗುವುದಷ್ಟೇ ಅಲ್ಲ, ಇದು ಇಡಿಯ ಪರಿಸರ ವ್ಯವಸ್ಥೆಯನ್ನೇ ಅಸ್ತವ್ಯಸ್ತಗೊಳಿಸುತ್ತದೆ. ವಾಯುಮಾಲಿನ್ಯದ ಕಾರಣದಿಂದಾಗಿ ಸುರಿಯುವ ಆಮ್ಲಮಳೆಯು ಮಣ್ಣು, ಸಸ್ಯ ಸಂಕುಲ ಮತ್ತು ಆ ಪ್ರದೇಶದ ಜಲಚರಗಳ ಜೀವನ ವ್ಯವಸ್ಥೆಗೆ ಹಾನಿ ಉಂಟು ಮಾಡುತ್ತದೆ. ಪರಮಾಣು ಸ್ಫೋಟ ಮತ್ತು ಪರಮಾಣು ಪರೀಕ್ಷೆಗಳು ಗಾಳಿಯನ್ನು ಮಲಿನಗೊಳಿಸುತ್ತಿವೆ. 1952ರ ಲಂಡನ್ನಿನ ದಟ್ಟ ಧೂಮವು ಸುಮಾರು 4,000 ಜನರ ಸಾವಿಗೆ ಕಾರಣವಾಗಿತ್ತು. ಇದು ವಾಯುಮಾಲಿನ್ಯದ ಭೀಕರತೆಗೆ ಒಂದು ಉದಾಹರಣೆ. ಆಗ್ರಾದಲ್ಲಿನ ತಾಜ್‌ ಮಹಲ್‌, ಮಥುರಾ ರಿಫೈನರಿಯ ಹೊಗೆಯ ಅಪಾಯದಲ್ಲಿದೆ. ಈ ಇಪ್ಪತ್ತು ವರ್ಷಗಳಲ್ಲಿ ಕೈಗಾರಿಕಾ ಸ್ಥಾವರಗಳಿಂದ ಮತ್ತು ರಿಫೈನರಿಗಳಿಂದ ಹೊರಸೂಸಿದ ತ್ಯಾಜ್ಯಗಳು ಮತ್ತು ಹೊಗೆಯಿಂದ ನಮ್ಮ ಪ್ರಾಚೀನ ಸ್ಮಾರಕಗಳು ಬಹುಮಟ್ಟಿಗೆ ಕಳೆ ಗುಂದುತ್ತಾ ಸಾಗಿವೆ ಎಂದು ವರದಿಗಳು ಹೇಳುತ್ತಿವೆ.

ಜಲಮಾಲಿನ್ಯ

ಇಡೀ ಭೂಮಿಯ ನಾಲ್ಕನೇ ಮೂರರಷ್ಟು ಭಾಗವು ನೀರಿನಿಂದ ಆವೃತವಾಗಿದ್ದರೂ ಸಹ, ನಮ್ಮಲ್ಲಿ ಕುಡಿಯುವ ಶುದ್ಧ ನೀರಿಗೆ ಕೊರತೆ ಇದೆ. ಯಾವುದೇ ಬಾಹ್ಯ ಮೂಲದಿಂದ ನೀರು ಕಲುಷಿತಗೊಳ್ಳುವುದನ್ನು ಮತ್ತು ಅದರಿಂದ ಜೀವನಕ್ಕೆ ಅಪಾಯಕಾರಿಯಾಗುವುದನ್ನು ಜಲಮಾಲಿನ್ಯ ಎಂದು ಕರೆಯುತ್ತೇವೆ. ಕ್ಷಿಪ್ರ ಕೈಗಾರಿಕಾ ಬೆಳವಣಿಗೆಗಳು ಮತ್ತು ಆಧುನಿಕ ಅಭಿವೃದ್ಧಿಗಳ ಕಾರಣದಿಂದಾಗಿ ಜಲಮಾಲಿನ್ಯದ ಸಮಸ್ಯೆ ದಿನೇ ದಿನೇ ಹೆಚ್ಚುತ್ತಾ ಸಾಗಿದೆ. ಜಲಮಾಲಿನ್ಯದ ಪ್ರಮುಖ ಕಾರಣಗಳು ಅಂದರೆ, ದಿನನಿತ್ಯ ಬಳಸುವ ನೀರಿನ ಮೂಲಗಳು, ಕೃಷಿಗಾಗಿ ಬಳಸುವ ನೀರಿನ ಮೂಲಗಳು, ತ್ಯಾಜ್ಯ ಅಂಶಗಳು, ಕಾರ್ಖಾನೆಯ ತ್ಯಾಜ್ಯಗಳು, ವಿಕಿರಣಶೀಲ ತ್ಯಾಜ್ಯಗಳು, ಎಣ್ಣೆಯ ಸೋರುವಿಕೆ, ಸಾವಯವ, ನಿರವಯವ, ಜೈವಿಕ ಅಂಶಗಳ ಇರುವಿಕೆ ಮತ್ತು ಜಲ ಮೂಲಗಳಿಗೆ ಸೇರಿಸುವಿಕೆ.ಭಾರತದಲ್ಲಿ ನದಿಗಳು, ಜಲಾಶಯಗಳು, ಕೊಳಗಳು ಮತ್ತು ಬಾವಿಗಳು ಸೇರಿದಂತೆ ನೀರಿನ ಬಹುತೇಕ ಎಲ್ಲಾ ಮೂಲಗಳು ಕಲುಷಿತಗೊಂಡಿವೆ ಮತ್ತು ಅವು ಕುಡಿಯಲು ಯೋಗ್ಯವಾಗಿಲ್ಲ. ರಾಸಾಯನಿಕ ಗೊಬ್ಬರಗಳ ಅಧಿಕ ಬಳಕೆ, ನದಿಗಳು, ಸಮುದ್ರಗಳು ಮತ್ತು ಸಾಗರಗಳು, ಅಪಾಯಕಾರಿ ಮಲಿನಕಾರಕಗಳಿಂದ ಕಲುಷಿತಗೊಳುತ್ತಾ ಸಾಗಿವೆ. ಒಂದು ಅಂದಾಜಿನ ಪ್ರಕಾರ ವರ್ಷದಲ್ಲಿ 500 ಟನ್‌ಗಿಂತಲೂ ಹೆಚ್ಚಿನ ಪ್ರಮಾಣದ ಪಾದರಸ ಸಾಗರವನ್ನು ಸೇರುತ್ತಿದೆ. ಇಂದು ಭಾರತದ ಗಂಗಾ ನದಿಯೂ ಸೇರಿದಂತೆ ಎಲ್ಲಾ ನದಿಗಳು ವಿಶೇಷವಾಗಿ ಮಲಿನಗೊಂಡಿವೆ. ಇದರಿಂದಾಗಿ ಜಲಜನ್ಯ ಕಾಯಿಲೆಗಳಾದ ಅತಿಸಾರ, ಟ್ರಾಕೋಮಾ, ಕರುಳಿನ ಹುಳಗಳು, ಹೆಪಾಟೈಟಿಸ್‌, ಕಾಮಾಲೆ... ಇತ್ಯಾದಿ ಅನೇಕ ರೀತಿಯ ಕಾಯಿಲೆಗಳು ಹುಟ್ಟಿಕೊಳ್ಳುತ್ತಿವೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಗಳು ಹೇಳುವ ಪ್ರಕಾರ, ಭಾರತದಲ್ಲಿರುವ ಎಲ್ಲಾ ಸಾಂಕ್ರಾಮಿಕ ರೋಗಗಳಲ್ಲಿ ಶೇಕಡಾ 20ರಷ್ಟು ಕಾಯಿಲೆಗಳು ನೀರಿನ ಮೂಲದ ಕಾಯಿಲೆಗಳು. ಎಣ್ಣೆಯು ಸಮುದ್ರ ನೀರನ್ನು ವಿಶೇಷವಾಗಿ ಕಲುಷಿತಗೊಳಿಸುತ್ತಿದೆ. ಬೃಹತ್‌ ಗಾತ್ರದ ಟ್ಯಾಂಕರ್‌ಗಳಿಂದ ನಿರಂತರವಾಗಿ ಸಮುದ್ರದ ನೀರಿಗೆ ಎಣ್ಣೆ ಸೋರಿಕೆಯಾಗುತ್ತಿದೆ. ವಿಷ-ಮಾಲಿನ್ಯಗಳನ್ನು ನೀರಿಗೆ ಸೇರಿಸುವ ಈ ಪ್ರಕ್ರಿಯೆಗಳಿಂದಾಗಿ ಜಲಸಸ್ಯಗಳು ಮತ್ತು ಜಲಚರಗಳ ಪ್ರಾಣಕ್ಕೆ ಕುತ್ತು ಉಂಟಾಗಿದೆ.


ಮಣ್ಣಿನ ಮಾಲಿನ್ಯ

ಮನುಷ್ಯನ ಹಸ್ತಕ್ಷೇಪ ಅಥವಾ ದುರ್ಬಳಕೆಯ ಕಾರಣದಿಂದಾಗಿ ನೆಲ ಅಥವಾ ಮಣ್ಣಿನ ಭೌತಿಕ, ರಾಸಾಯನಿಕ ಮತ್ತು ಜೈವಿಕ ಪರಿಸ್ಥಿತಿ ಮತ್ತು ಸಂರಚನೆಯಲ್ಲಿ ಆಗುವ ಬದಲಾವಣೆಗೆ ಮಣ್ಣು ಅಥವಾ ನೆಲದ ಮಾಲಿನ್ಯ ಎಂದು ಹೇಳಬಹುದು. ಮಣ್ಣಿನ ಮಾಲಿನ್ಯಕ್ಕೆ ಇರುವ ಪ್ರಮುಖ ಕಾರಣ ಅಂದರೆ ಅರಣ್ಯನಾಶ, ನೈಸರ್ಗಿಕ ಪ್ರಕೋಪಗಳಾದ ಅತಿವೃಷ್ಟಿ, ಪ್ರಾದೇಶಿಕ ವೈಪರೀತ್ಯ, ಬಿರುಗಾಳಿಗಳು ಮತ್ತು ಮನುಷ್ಯನ ಅತಿಚಟುವಟಿಕೆಯ ಕಾರಣಗಳಿಂದಾಗಿ ಹೆಚ್ಚಾಗುತ್ತಿರುವ ಮಣ್ಣು ಸವಕಳಿಯ ಪ್ರಮಾಣ. ಅನೇಕ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಮಣ್ಣು ಸವಕಳಿಯ ಪ್ರಮಾಣ ಮತ್ತು ತಪ್ಪು ವ್ಯವಸಾಯ ಕ್ರಮಗಳಿಂದಾಗಿ, ಫ‌ಲವತ್ತಾದ ಮೇಲ್ಮಣ್ಣು ಕೊಚ್ಚಿಹೋಗಿ ವ್ಯಾಪಕ ಭೂಪ್ರದೇಶವನ್ನು ಬಂಜರಾಗಿಸಿವೆ.

ಕೃಷಿಯ ಘನ ತ್ಯಾಜ್ಯಗಳು ಮತ್ತು ಹದ-ಘನ ತ್ಯಾಜ್ಯಗಳು ಹಾಗೂ ಅಶೌಚ ಅಭ್ಯಾಸಗಳ ಕಾರಣದಿಂದಾಗಿ ಮಣ್ಣು ಮಲಿನಗೊಳ್ಳುತ್ತದೆ. ಮಾತ್ರವಲ್ಲದೆ ಅಪಾಯಕಾರಿ ಅಂಶಗಳು ಮತ್ತು ಸೂûಾ¾ಣು ಜೀವಿಗಳಿಂದ ಮಣ್ಣು ದಿನೇ ದಿನೇ ಅತಿಯಾಗಿ ಮಲಿನಗೊಳ್ಳುತ್ತಿದೆ, ಮಣ್ಣಿನ ಈ ಮಾಲಿನ್ಯವು ಆಹಾರ ಸರಪಣೆಯನ್ನು ಅಥವಾ ನೀರನ್ನು ಸೇರಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಜೈವಿಕ ವಾಹಕಗಳ ಮೂಲಕ ಪ್ರಾಣಿ, ಪಕ್ಷಿಗಳು ಮತ್ತು ಮನುಷ್ಯರ ವಿಸರ್ಜನೆಗಳು ಮಣ್ಣಿನ ಮಾಲಿನ್ಯದ ಪ್ರಮುಖ ಅಂಶಗಳು. ಗೊಬ್ಬರಗಳಾಗಿ ಬಳಕೆಯಾಗುವ ತ್ಯಾಜ್ಯಗಳು ಮಾಲಿನ್ಯ ಉಂಟು ಮಾಡುವ ಪ್ರಮುಖ ಅಂಶಗಳು. ಆಮ್ಲಮಳೆಯಿಂದಾಗಿ ಮಣ್ಣಿನ ಆಮ್ಲಿàಯತೆಯು ಹೆಚ್ಚಾಗುತ್ತದೆ, ಇದು ಗಿಡಮರಗಳ ಬೆಳವಣಿಗೆಗೆ ಹಾನಿಕಾರಕ.
ಶಬ್ದ ಮಾಲಿನ್ಯ

ಶಬ್ದವೂ ಸಹ ಒಂದು ರೀತಿಯ ಪ್ರಮುಖ ಮಾಲಿನ್ಯಕಾರಕ. ನಗರ ಪ್ರದೇಶಗಳಲ್ಲಿ ಶಬ್ದಗಳ ಮಟ್ಟವು ಎಚ್ಚರಿಕೆ ನೀಡುವ ರೀತಿಯಲ್ಲಿ ಹೆಚ್ಚುತ್ತಾ ಸಾಗಿದೆ. ಶಬ್ದ ಮಾಲಿನ್ಯ ಅಂದರೆ 80 ಡೆಸಿಬಲ್‌ ಮಿತಿಯನ್ನು ಮೀರಿದ ಅನಾವಶ್ಯಕ ಶಬ್ದ ಎಂದು ಹೇಳಬಹುದು. ಗುಡುಗು ಮತ್ತು ಮಿಂಚುಗಳ ಕರ್ಕಶ ಸದ್ದು, ಯಂತ್ರಗಳು, ವಾಹನಗಳು, ರೈಲ್ವೆ, ಮಾನಗಳು ಮತ್ತು ಹಬ್ಬಗಳ ಸಂದರ್ಭಗಳಲ್ಲಿ ಲೌಡ್‌ ಸ್ಪೀಕರ್‌ಗಳು, ಸಿಡಿಮದ್ದುಗಳು ಹೊರಡಿಸುವ ಕರ್ಕಶ ಸದ್ದು ಮತ್ತು ಕರ್ಕಶ ಸದ್ದನ್ನು ಹೊರಡಿಸುವ ಕೆಲವು ಸಂಗಿತ ವಾದ್ಯಗಳು ಶಬ್ದಮಾಲಿನ್ಯದ ವರ್ಗದಲ್ಲಿ ಬರುತ್ತವೆ.

ಹೆಚ್ಚು ಹೆಚ್ಚು ಶಬ್ದಗಳು ಆಧುನಿಕ ಜಗತ್ತಿನ ನಿರ್ಮಾಣಗಳು ಈಗ ನಗರ ಪ್ರದೇಶಗಳ ಬಹುಮುಖ್ಯ ಪರಿಸರ ಮಾಲಿನ್ಯಕಾರಕ ಎನಿಸಿವೆ. ಶಬ್ದ ಮಾಲಿನ್ಯದ ಬಹಳ ಪ್ರಮುಖ ಪರಿಣಾಮ ಅಂದರೆ ಕಿವುಡುತನ. ಇದರಿಂದಾಗಿ ಭಾಗಶಃ ಅಥವಾ ಸಂಪೂರ್ಣ ಕಿವುಡುತನ ಉಂಟಾಗಬಹುದು. ಈ ಕಾರಣದಿಂದಾಗಿ ಕೆಲಸಗಾರರಲ್ಲಿ ದಕ್ಷತೆಯ ಕೊರತೆ ಕಾಣಿಸಿಕೊಳ್ಳಬಹುದು.

ಶಬ್ದಮಾಲಿನ್ಯದ ಮಟ್ಟವು ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಇದ್ದರೆ, ಇದರಿಂದಾಗಿ ದೈಹಿಕ ಮತ್ತು ಮಾನಸಿಕ ತೊಂದರೆಗಳು ಕಾಣಿಸಿಕೊಳ್ಳಬಹುದು. ಒತ್ತಡ ಮತ್ತು ಆತಂಕವು ಕಾಣಿಸಿಕೊಳ್ಳಲು ಇರುವ ಪ್ರಮುಖ ಕಾರಣ ಶಬ್ದ ಎನ್ನುವುದಕ್ಕೆ ಪುರಾವೆಗಳಿವೆ. ಇದರಿಂದಾಗಿ ತಲೆನೋವು, ಕಿರಿಕಿರಿ ಮಾತ್ರವಲ್ಲ ರಕ್ತದೊತ್ತಡದ ಮೇಲೆಯೂ ಇದು ಪರಿಣಾಮ ಉಂಟು ಮಾಡುತ್ತದೆ.

ಇತರ ಪರಿಣಾಮಗಳು


ಹಸುರು ಮನೆ ಅನಿಲಗಳಾದ ಇಂಗಾಲದ ಡೈ ಆಕ್ಸೆ„ಡ್‌, ನೈಟ್ರೋಜನ್‌ ಆಕ್ಸೆ„ಡ್‌, ಮೀಥೇನ್‌, ಹೈಡ್ರೋಫ್ಲೋರೋಕಾರ್ಬನ್‌ ಅನಿಲಗಳು, ಪರ್‌ಫ್ಲೋರೋ ಕಾರ್ಬನ್‌ಗಳು, ಸಲ#ರ್‌ ಹೆಕ್ಸಾಫ್ಲೋರೈಡ್‌ಗಳು ಲಕ್ಷಣ ಬದಲಾವಣೆಗಳನ್ನು ನಿರ್ಮಿಸಿವೆ. ಹಸುರು ಮನೆ ಅನಿಲಗಳ ಕಾರಣದಿಂದಾಗಿ ಹೆಚ್ಚಾಗುತ್ತಿರುವ ಮಾಲಿನ್ಯದಿಂದಾಗಿ ಜಾಗತಿಕ ತಾಪಮಾನವು ಹೆಚ್ಚಳವಾಗುತ್ತಿದೆ. ಜಾಗತಿಕ ತಾಪಮಾನ ಅಂದರೆ ಸರಾಸರಿ ಭೂಮಿಯ ಉಷ್ಣತೆಯು ಹೆಚ್ಚುವುದು, ಇದು ನೈಸರ್ಗಿಕ ಮತ್ತು ಮನುಷ್ಯರ ಚಟುವಟಿಕೆ ಇವೆರಡರ ಕಾರಣದಿಂದ ಉದ್ಭºವಿಸಿರುವ ಹಸುರು ಮನೆ ಪರಿಣಾಮದ ಫ‌ಲ. ಧ್ರುವ ಪ್ರದೇಶದಲ್ಲಿನ ಮಂಜುಗಡ್ಡೆಗಳು ಬಹಳ ಕ್ಷಿಪ್ರವಾಗಿ ಕರಗುತ್ತಿವೆ. ಇದರಿಂದಾಗಿ ಸಾಗರ ಸಮುದ್ರಗಳ ನೀರಿನ ಮಟ್ಟವು ಏರಿಕೆಯಾಗುತ್ತಿದೆ. ಅಂಟಾರ್ಟಿಕಾದಲ್ಲಿ ಹುಲ್ಲಿನ ಬೆಳವಣಿಗೆ ಮತ್ತು ಮರುಭೂಮಿ ಪ್ರದೇಶಗಳಲ್ಲಿ ಮಂಜು ಬೀಳುವುದು ಜಾಗತಿಕ ತಾಪಮಾನದ ಎಚ್ಚರಿಕೆಯ ಸೂಚನೆಗಳು. ಕಾಡಿನ ನಾಶವು ಮಹತ್ತರ ಬದಲಾವಣೆಗಳನ್ನು ಉಂಟು ಮಾಡುತ್ತಿದೆ. ಮಾತ್ರವಲ್ಲ ಬಹಳ ಅಪರೂಪದ ಅನೇಕ ಜೀವಿಗಳು ನಮ್ಮ ಕಾಡು ಮತ್ತು ನಮ್ಮ ನಡುವಿನಿಂದ ಕಣ್ಮರೆಯಾಗುತ್ತಿವೆ.


ಹೆಚ್ಚಾಗುತ್ತಿರುವ ಜಾಗತಿಕ ತಾಪಮಾನವು ಮನುಷ್ಯ ಸಮುದಾಯಕ್ಕೆ ಬಹಳ ಪ್ರಮುಖ ಸವಾಲು ಎಂದು ಅನೇಕ ಜಾnನಿಗಳ ಅಭಿಪ್ರಾಯವಾಗಿದೆ. ಜಾಗತಿಕ ತಾಪಮಾನದ ಪರಿಣಾಮವು ಆರೊಗ್ಯದ ಮೇಲೆ ಉಂಟು ಮಾಡುವ ಪರಿಣಾಮವನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಂಡಿಯನ್‌ ಅಸೋಸಿಯೇಷನ್‌ ಆಫ್ ಪ್ರಿವೆಂಟಿವ್‌ ಆ್ಯಂಡ್‌ ಸೋಶಿಯಲ್‌ ಮೆಡಿಸಿನ್‌ ಮತ್ತು ಇಂಡಿಯನ್‌ ಪಬ್ಲಿಕ್‌ ಹೆಲ್ತ್‌ ಅಸೋಸಿಯೇಷನ್‌ಗಳು ಭಾರತ ಸರಕಾರವನ್ನು ಒತ್ತಾಯಿಸಿವೆ.


ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಇರುವಂತಹ ಪ್ರಮುಖ ಅಂಶಗಳು ಅಂದರೆ, ಹವಾಮಾನ ಬದಲಾವಣೆ ಮತ್ತು ಮನುಷ್ಯರ ಆರೋಗ್ಯಗಳ ನಡುವಿನ ಸಂಬಂಧಗಳ ಬಗೆಗೆ ಜನಸಾಮಾನ್ಯರಲ್ಲಿ ಜಾಗೃತಿಯನ್ನು ಮೂಡಿಸುವುದು. ನಮ್ಮ ಗ್ರಹವನ್ನು ಅವನತಿಯಿಂದ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಾಮಾನ್ಯ ಜಾಗೃತಿ ಅತ್ಯಂತ ಆವಶ್ಯಕ. ಪರಿಸರವನ್ನು ಕಾಪಾಡಿಕೊಳ್ಳುವ ನೆಲೆಯಲ್ಲಿ ಜಗತ್ತಿನ ಎಲ್ಲಾ ದೇಶಗಳು ಒಗ್ಗೂಡಿ ಕೆಲಸ ಮಾಡಬೇಕಾಗಿದೆ.


ತಡೆಗಟ್ಟುವಿಕೆ ಮತ್ತು
ಮಾಲಿನ್ಯ ನಿಯಂತ್ರಣ


ಮಾಲಿನ್ಯ ನಿಯಂತ್ರಣ ಅನ್ನುವುದು, ಮಾಲಿನ್ಯಕಾರಕಗಳನ್ನು ಪರಿಸರದಿಂದ ಹೋಗಲಾಡಿಸಲು ಇರುವಂತಹ ಒಂದು ಉಪಾಯ. ಪರಿಸರಕ್ಕೆ ಸಂಬಂಧಿಸಿದ ವಿವಿಧ ಮಂಡಳಿ, ಇಲಾಖೆಗಳು-ಗಾಳಿ, ನೀರು ಮತ್ತು ಮಣ್ಣಿಗೆ ಸಂಬಂಧಿಸಿದಂತೆ ವಿವಿಧ ಕಟ್ಟಳೆಗಳನ್ನು ವಿಧಿಸುವ ಮೂಲಕ ಇದನ್ನು ಸಾಧಿಸಬಹುದು. ಗಾಳಿ ಮತ್ತು ನೀರಿನ ಮಾಲಿನ್ಯ, ಘನತ್ಯಾಜ್ಯಗಳ ನಿಯಂತ್ರಣಕ್ಕಾಗಿ ವೈವಿಧ್ಯಮಯ ಸಾಧನಗಳು ಮತ್ತು ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಬಹುದು. ಕೆಳಗೆ ತಿಳಿಸಿದ ಕಾರ್ಯವಿಧಾನಗಳ ಮೂಲಕ ಮಾಲಿನ್ಯವನ್ನು ತಡೆಗಟ್ಟಬಹುದು.


1.ರಿಸೈಕ್ಲಿಂಗ್‌
2.ಮರು ಬಳಕೆ
3.ತಗ್ಗಿಸುವುದು
4.ಸಹನೀಯಗೊಳಿಸುವುದು
ವಾಯು ಮಾಲಿನ್ಯವನ್ನು ತಡೆಯುವುದು ಹೇಗೆ?

1.ಕೈಗಾರಿಕಾ ವಲಯ ಮತ್ತು ಜನವಸತಿ ಪ್ರದೇಶಗಳ ನಡುವೆ ಆರೋಗ್ಯಕರ ಅಂತರವನ್ನು ಕಾಪಾಡಿಕೊಳ್ಳುವುದು.


2.ಹೊಗೆಯು ವಾತಾವರಣದಿಂದ ಅತ್ಯಂತ ಎತ್ತರದಲ್ಲಿ ಬಿಡುಗಡೆ ಹೊಂದುವಂತೆ ಎತ್ತರವಾದ ಹೊಗೆ ಕೊಳವೆಗಳನ್ನು ಕಟ್ಟುವುದು.


3.ರೈಲ್ವೇ ಟ್ರ್ಯಾಕ್‌ಗಳನ್ನು ವಿದ್ಯುತ್‌ ಚಾಲಿತಗೊಳಿಸುವುದು.


4.ಗಣಿಗಾರಿಕೆಯ ವಲಯಗಳಲ್ಲಿ ಮರಗಿಡಗಳನ್ನು ಬೆಳೆಸುವುದು.


5.ಕಲ್ಲಿದ್ದಲಿನ ಇಂಧನಕ್ಕೆ ಬದಲಾಗಿ ಗ್ಯಾಸ್‌ ಇಂಧನವನ್ನು ಬಳಸುವುದು.


6.ಹೊಗೆ ನಿಯಂತ್ರಣಾ ವ್ಯವಸ್ಥೆ ಇರುವಂತೆ ವಾಹನಗಳನ್ನು ವಿನ್ಯಾಸಗೊಳಿಸುವುದು.


7.ಕಾರ್ಖಾನೆಗಳು, ಸ್ಥಾವರಗಳು ಮತ್ತು ರಿಫೈನರಿಗಳ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಅಥವಾ ಮರುಬಳಕೆ ಮಾಡುವುದು.


8.ವಾಹನಗಳನ್ನು ಕಾಲಕಾಲಕ್ಕೆ ಸರಿಯಾಗಿ ಸರ್ವಿಸಿಂಗ್‌ ಮಾಡಿಸಿಕೊಳ್ಳುವುದರಿಂದ ಅವುಗಳನ್ನು ಸುಸ್ಥಿತಿಯಲ್ಲಿ ಇರಿಸಿಕೊಳ್ಳ ಬಹುದು ಮಾತ್ರವಲ್ಲ, ಇಂಧನದ ಬಳಕೆಯನ್ನೂ ತಗ್ಗಿಸಿಕೊಳ್ಳಬಹುದು.


9.ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಳಸುವುದು.


10.ಬದಲಿ ಇಂಧನ ಮೂಲಗಳಾದ ಸೌರ ಶಕ್ತಿ, ಜಲವಿದ್ಯುತ್‌ ಶಕ್ತಿ ಮತ್ತು ಪವನಶಕ್ತಿಯನ್ನು ಉಪಯೋಗಿಸುವುದು.


ಜಲಮಾಲಿನ್ಯವನ್ನು ನಿಯಂತ್ರಿಸುವುದು ಹೇಗೆ?


1.ವಿಷಕಾರಕವಲ್ಲದ ಸಾಬೂನುಗಳು, ಡಿಟರ್ಜಂಟ್‌ಗಳು ಮತ್ತು ಶುದ್ಧೀಕಾರಕಗಳನ್ನು ಬಳಸುವ ಮೂಲಕ ಜಲಮಾಲಿನ್ಯವನ್ನು ತಡೆಯಬಹುದು.


2. ಹೂದೋಟ ಮತ್ತು ಹುಲ್ಲುಹಾಸುಗಳ ಮೇಲೆ ರಾಸಾಯನಿಕಗಳು ಮತ್ತು ಕೀಟನಾಶಕಗಳನ್ನು ಉಪಯೋಗಿಸದಿರುವುದು.


3.ಪೈಂಟ್ಸ್‌, ಮೋಟಾರ್‌ ಆಯಿಲ್‌, ಗ್ಯಾಸೋಲಿನ್‌, ಹಾನಿಕಾರಕ ರಾಸಾಯನಿಕಗಳನ್ನು ಸ್ಥಳೀಯ ಕಾನೂನುಗಳು ಮತ್ತು ಸುರಕ್ಷತಾ ಕ್ರಮಗಳಿಗೆ ಅನುಸಾರವಾಗಿ ವಿಲೇವಾರಿ ಮಾಡುವುದು.


4.ಅಂತರ್ಜಲವನ್ನು ರಕ್ಷಿಸಿ, ಅದು ನಮ್ಮ ನಿತ್ಯ ಉಪಯೋಗಕ್ಕೆ, ನೀರಾವರಿ ವಿಧಾನಕ್ಕೆ ಮತ್ತು ನೈಸರ್ಗಿಕ ಪರಿಸರ ವ್ಯವಸ್ಥೆಗೆ ಬೇಕೆ ಬೇಕು.


5. ಪರಿಸರಕ್ಕೆ ಹಾನಿಕಾರಕವಾದ ರಾಸಾಯನಿಕಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿ ಮತ್ತು ಬಳಸಿ.


6.ಪರಿಸರಸ್ನೇಹಿ ವಾಶಿಂಗ್‌ ಪೌಡರ್‌, ಶುದ್ಧೀಕಾರಕಗಳನ್ನು ಬಳಸಿ, ರಾಸಾಯನಿಕಗಳನ್ನು ಸಂಗ್ರಹಿಸುವಾಗ ಅಂತರ್ಜಲ ಕಲುಷಿತಗೊಳ್ಳದಂತೆ ಎಚ್ಚರಿಕೆ ವಹಿಸುವುದು.


7.ಹುಲ್ಲುಹಾಸುಗಳು ಮತ್ತು ಅಧಿಕ ವೆಚ್ಚದಾಯಕ ಗಿಡಗಳನ್ನು ಬೆಳೆಸುವುದಕ್ಕೆ ಬದಲಾಗಿ ಸ್ಥಳೀಯ ಜಾತಿಯ ಗಿಡಗಳನ್ನು ನೆಟ್ಟು ಬೆಳೆಸುವುದು.


8. ಸಾಕು ಪ್ರಾಣಿಗಳ ತ್ಯಾಜ್ಯವನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು.


9.ಮನೆಯ ಸ್ವತ್ಛತೆಯನ್ನು ಸುಸೂತ್ರ ರೀತಿಯಲ್ಲಿ ನಿರ್ವಹಿಸುವುದು.


ಮಣ್ಣಿನ ಮಾಲಿನ್ಯವನ್ನು ಹೇಗೆ ತಡೆಯಬಹುದು?


ರಸಗೊಬ್ಬರಗಳು ಮತ್ತು ಕೀಟನಾಶಕಗಳ ಬಳಕೆಯನ್ನು ಮಿತಗೊಳಿಸುವುದು.


ಜೈವಿಕ ನಿಯಂತ್ರಣ ವಿಧಾನಗಳು ಮತ್ತು ಅದರ ಬಳಕೆಯ ಬಗ್ಗೆ ಅರಿವನ್ನು ಹೊಂದಿರುವುದು.


ಪಶುಗಳು ಅತಿಯಾಗಿ ಮೇಯುವುದನ್ನು ನಿಯಂತ್ರಿ ಸುವುದು ಮತ್ತು ಸರಿಯಾದ ರೀತಿಯಲ್ಲಿ ಕಾಡುಗಳ ನಿರ್ವಹಣೆ.


ಕಾಡು ಬೆಳೆಸುವಿಕೆ ಮತ್ತು ಕಾಡುಗಳ ಮರುಅಭಿವೃದ್ಧಿಯನ್ನು ಉತ್ತೇಜಿಸುವುದು.


ಮರುಬಳಕೆಯ ಚೀಲಗಳನ್ನು ಹೆಚ್ಚು ಬಳಸುವುದು ಮತ್ತು ಪ್ಲಾಸ್ಟಿಕ್‌ ಚೀಲಗಳ ಬಳಕೆಯನ್ನು ತಗ್ಗಿಸುವುದು.


ಮಣ್ಣನ್ನು ಆವರಿಸುವ ಹುಲ್ಲನ್ನು ಬೆಳೆಸುವುದು ಮತ್ತು ನದೀ ಪಾತ್ರದ ಉದ್ದಕ್ಕೂ ದೊಡª ದೊಡ್ಡ ಮರಗಳನ್ನು ಬೆಳೆಸುವುದು.


ಕಾರ್ಖಾನೆಯ ತ್ಯಾಜ್ಯಗಳನ್ನು ತಗ್ಗು ಪ್ರದೇಶಗಳಿಗೆ ಬಹಳ ಜಾಗರೂಕತೆಯಿಂದ ವಿಲೇವಾರಿ ಮಾಡುವುದು.


ಕಳೆಗಳು ಗದ್ದೆಗಳಲ್ಲಿ ತಳವೂರದ ರೀತಿಯಲ್ಲಿ ವ್ಯವಸಾಯದಲ್ಲಿ ಸೂಕ್ತ ತಂತ್ರಜಾnನವನ್ನು ಬಳಸುವುದು.


ಗಣಿಗಾರಿಕೆ ಮತ್ತು ಅದರ ಸಾಗಾಟದಲ್ಲಿ ಸೂಕ್ತ ಮತ್ತು ಸುಧಾರಿತ ಕ್ರಮಗಳನ್ನು ಕೈಗೊಳ್ಳುವುದು.


ಭೂಪ್ರದೇಶವನ್ನು ಬಂಜರಾಗಲು ಅಥವಾ ಒಣಗಲು ಬಿಡದಿರುವುದು.


ಶಬ್ದಮಾಲಿನ್ಯವನ್ನು ತಡೆಗಟ್ಟುವುದು ಹೇಗೆ?


ಶಬ್ದವನ್ನು ಉತ್ಪತ್ತಿ ಮಾಡುವ ಯಂತ್ರಗಳನ್ನು ಪ್ರತ್ಯೇಕವಾಗಿ ಇರಿಸುವ ಮೂಲಕ ಮತ್ತು ಕಿವಿಯ ಬಿರಡೆ, ಇಯರ್‌ ಪ್ಲಗ್‌ ಅಥವಾ ಮಫ್ಲರ್‌ನಂತಹ ಶಬ್ದನಿರೋಧಕಗಳನ್ನು ಉಪಯೋಗಿಸುವ ಮೂಲಕ.


ಕಟ್ಟಡಗಳ ವಲಯ ಅಥವಾ ಅವನ್ನು ಆವರಿಸಿರುವ ಗೋಡೆಗಳ ಮೂಲಕ ಶಬ್ದವು ಹಾದು ಹೋಗದಂತೆ ನಿಯಂತ್ರಣ ಸಾಧಿಸುವ ಮೂಲಕ.


ಲೌಡ್‌ ಸ್ಪೀಕರ್‌ ಇತ್ಯಾದಿಗಳನ್ನು ಬಳಸುವ ಬಗ್ಗೆ ಕಾನೂನಿನಲ್ಲಿ ನಿರ್ಬಂಧಗಳನ್ನು ಹೇರುವುದು.


ಶಬ್ದ ಮಾಲಿನ್ಯದ ಅಪಾಯಗಳ ಕುರಿತು ಸಿನೆಮಾಗಳು ಮತ್ತು ಪತ್ರಿಕೆಗಳ ಮೂಲಕ ಪ್ರಚಾರ ಮಾಡುವುದು.


ಶಬ್ದ ಪ್ರತಿಬಂಧಕಗಳನ್ನು ಬಳಸುವುದು.


ವಾಹನಗಳ ವೇಗವನ್ನು ಮಿತಗೊಳಿಸುವುದು.


ಮಾರ್ಗಗಳ ಮೇಲ್ಮೆ„ ರಚನೆಯನ್ನು ಉತ್ತಮಪಡಿಸುವುದು.


ಘನ ವಾಹನ ಸಂಚಾರವನ್ನು ಮಿತಗೊಳಿಸುವುದು.


ಬ್ರೇಕಿಂಗ್‌ಗಳು, ಆಕ್ಸಲರೇಷನ್‌ ಮತ್ತು ಚಕ್ರದ ವಿನ್ಯಾಸವನ್ನು ವ್ಯತ್ಯಾಸಗೊಳಿಸುವ ವಿರುದ್ಧ ಸಾರಿಗೆ ನಿಯಂತ್ರಣ ಕಾನೂನುಗಳನ್ನು ಬಳಸುವುದು.


ನಿಶ್ಯಬ್ದ ಜೆಟ್‌ ಇಂಜಿನ್‌ಗಳನ್ನು ವಿನ್ಯಾಸಗೊಳಿಸುವ ಮೂಲಕ ವೈಮಾನಿಕ ಶಬ್ದಗಳನ್ನು ತಗ್ಗಿಸಬಹುದು


ಹಗಲು ಹೊತ್ತಿನಲ್ಲಿ ಹಾರುವ ವಿಮಾನದ ಸಮಯ ಮತ್ತು ರನ್‌ ವೇಗಳ ಬಳಕೆಯಲ್ಲಿ ಮಾರ್ಪಾಡು ಮಾಡುವಂತಹ ಕಾರ್ಯಗಳಲ್ಲಿ ಬದಲಾವಣೆಗಳನ್ನು ತರುವ ಮೂಲಕ ವಿಮಾನ ನಿಲ್ದಾಣದ ಹತ್ತಿರ ವಸತಿ ಇರುವ ಜನಸಮುದಾಯಕ್ಕೆ ಸಹಾಯ ಮಾಡಬಹುದು.


ಪರಿಸರವನ್ನು ಕಾಪಾಡುವ ನಿಟ್ಟಿನಲ್ಲಿ ಜನರು ಹೇಗೆ ಸಹಾಯ ಮಾಡಬಹುದುನಿಮ್ಮ ನಿತ್ಯ ಜೀವನದಲ್ಲಿ ಈ ಅಭ್ಯಾಸಗಳನ್ನು ಅನುಸರಿಸಿ:


ಸಾರ್ವಜನಿಕ ಸ್ಥಳಗಳಲ್ಲಿ ಅಲ್ಲಲ್ಲಿ ಕಸಕಡ್ಡಿಗಳನ್ನು ಹಾಕಬೇಡಿ. ತ್ಯಾಜ್ಯ-ನಿರೋಧಕ ಶಿಬಿರಗಳನ್ನು ಆಯೋಜಿಸಿ, ಈ ಮೂಲಕ ಜನರಲ್ಲಿ ಜಾಗೃತಿಯನ್ನು ಉಂಟು ಮಾಡಬಹುದು.


ಧೂಮಪಾನವನ್ನು ನಿಲ್ಲಿಸಿ, ನೋ ಸ್ಮೋಕಿಂಗ್‌ ಸೂಚನೆಯನ್ನು ಅನುಸರಿಸಿ.


ಮರುಬಳಕೆ ಮಾಡುವ ಕೈಚೀಲಗಳನ್ನು ಉಪಯೋಗಿಸಿ.


ಉತ್ಪನ್ನಗಳಿಗೆ ಅನಗತ್ಯವಾಗಿ ಅಥವಾ ವ್ಯರ್ಥವಾಗಿ ಪ್ಯಾಕೆಜ್‌ ಮಾಡಬೇಡಿ.


ಘನತ್ಯಾಜ್ಯಗಳ ನಿರ್ವಹಣೆಯಲ್ಲಿ 3ಆರ್‌ ಸೂತ್ರವನ್ನು ಅನುಸರಿಸಿ: ಅಂದರೆ ರೆಡ್ನೂಸ್‌, ರಿಯೂಸ್‌ ಮತ್ತು ರಿಸೈಕಲ್‌.


ವಾಹನಗಳನ್ನು ರಭಸವಾಗಿ ಸ್ಟಾರ್ಟ್‌ ಮಾಡುವುದು ಮತ್ತು ಒಮ್ಮೆಲೆ ನಿಲ್ಲಿಸುವ ಕ್ರಮವನ್ನು ಬಿಟ್ಟುಬಿಡಿ.


ತ್ಯಾಜ್ಯಗಳನ್ನು ಸುಡಬೇಡಿ, ಅದರಲ್ಲು ವಿಶೇಷವಾಗಿ ಪ್ಲಾಸ್ಟಿಕ್‌ ಅನ್ನು ಸುಡುವಾಗ ಹೆಚ್ಚು ಹಾನಿಕಾರಕ ಅನಿಲಗಳು ಪರಿಸರಕ್ಕೆ ಬಿಡುಗಡೆ ಆಗುತ್ತವೆ.


ಸೀಸರಹಿತ ಪೆಟ್ರೋಲ್‌ ಮತ್ತು ಶಕ್ತಿಯ ಬದಲೀ ಮೂಲಗಳನ್ನು ಉಪಯೋಗಿಸಿ ಮತ್ತು ಎಂಜಿನ್‌ಗಳನ್ನು ಸಕಾಲದಲ್ಲಿ ಸರ್ವಿಸಿಂಗ್‌ ಮಾಡಿಸಿ ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಿ. ಟೈರ್‌ಗಳಲ್ಲಿ ಗಾಳಿಯ ಒತ್ತಡ ಸರಿಯಾಗಿ ಇರುವಂತೆ ನೋಡಿಕೊಳ್ಳಿ. ಹೀಗಿದ್ದರೆ ವಾಹನಗಳು ಸಮರ್ಥವಾಗಿ ಓಡುತ್ತವೆ.


ನಿಮ್ಮ ನಿತ್ಯ ಪ್ರಯಾಣಕ್ಕಾಗಿ ಹೆಚ್ಚು ಹೆಚ್ಚು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಳಸಿಕೊಳ್ಳಿ ಅಥವಾ ಕಾರ್‌ಪೂಲ್‌ ವಿಧಾನವನ್ನು ಅನುಸರಿಸಿ.


ಸುರಕ್ಷಿತವಾಗಿ ಬಳಸಬಹುದಾದಲ್ಲಿ ಸೈಕಲ್‌ ಅನ್ನು ಉಪಯೋಗಿಸಿ - ನಡಿಗೆ ಎನ್ನುವುದು ಉಚಿತ ಸಾಧನ. ಸೈಕ್ಲಿಂಗ್‌ ನಿಮ್ಮ ದೇಹಕ್ಕೆ ಒಳ್ಳೆಯ ವ್ಯಾಯಾಮವನ್ನು ನೀಡುತ್ತದೆ.


ಅನಗತ್ಯ ಶಬ್ದವಾಗುವಿಕೆಯನ್ನು ತಪ್ಪಿಸಿಕೊಂಡು ಶಬ್ದಮಾಲಿನ್ಯವನ್ನು ತಗ್ಗಿಸಿಕೊಳ್ಳಿ.


ಉಳಿಕೆ ರಾಸಾಯನಿಕಗಳನ್ನು, ಬಳಸಿದ ಎಣ್ಣೆ ಇತ್ಯಾದಿಯನ್ನು ಯಾವತ್ತೂ ಚರಂಡಿಯಲ್ಲಿ, ಶೌಚಾಲಯದಲ್ಲಿ ಅಥವಾ ನೆಲದಲ್ಲಿ ಅಥವಾ ನೀರಿನಲ್ಲಿ ಚೆಲ್ಲಿ ಬಿಡಬಾರದು ಅಥವಾ ತೋಟದಲ್ಲಿ ಸುಟ್ಟು ಹಾಕಬಾರದು, ಹೀಗೆ ಮಾಡುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ.


ಬಳಸಿ ಉಳಿದ ಎಣ್ಣೆ, ಹಳೆಯ ಬ್ಯಾಟರಿಗಳು ಮತ್ತು ಬಳಸಿದ ಟೈಯರ್‌ಗಳನ್ನು ಮರುಬಳಕೆಗಾಗಿ ಅಥವಾ ಸುರಕ್ಷಿತ ವಿಲೇವಾರಿಗಾಗಿ ಗ್ಯಾರೆಜ್‌ಗೆ ಕಳುಹಿಸಿ; ಇವೆಲ್ಲವೂ ಗಂಭೀರ ಮಾಲಿನ್ಯವನ್ನು ಉಂಟು ಮಾಡುತ್ತವೆ.


ಸ್ಥಳೀಯ ಆಹಾರಗಳು ಮತ್ತು ಸಾಮಗ್ರಿಗಳಿಗೆ ಪ್ರೋತ್ಸಾಹ ನೀಡಿ. ಹೀಗೆ ಮಾಡುವುದರಿಂದಾಗಿ ಆಹಾರಗಳನ್ನು ಬಹಳ ಕಾಲ ಕೆಡದಂತೆ ಇರಿಸಲು ಬಳಸುವ ಸಂರಕ್ಷಕಗಳ ಬಳಕೆ ಮತ್ತು ಆಹಾರ ಮತ್ತು ಸರಕುಗಳ ಸಾರಿಗೆ ವೆಚ್ಚ ಕಡಿಮೆಯಾಗಬಹುದು.


ನಿಸರ್ಗದ ಜತೆಗೆ ಮರುಸಂಪರ್ಕ ಬೆಳೆಸಿಕೊಳ್ಳಿ. ಗಾಳಿ ಮತ್ತು ಸೂರ್ಯನಿಂದ ಹೇರಳವಾಗಿ ದೊರಕುವ ಹಸಿರು ಶಕ್ತಿಯನ್ನು ಬಳಸಿಕೊಳ್ಳಿ ಮತ್ತು ಹಸುರಿನ ಜತೆಗಿನ ಜೀವನವನ್ನು ಜೀವಿಸಿ. ನಿಮ್ಮ ಬಟ್ಟೆಬರೆಗಳನ್ನು ಡ್ರೆ„ಯರ್‌ನಲ್ಲಿ ಒಣಗಿಸುವುದಕ್ಕೆ ಬದಲಾಗಿ ಬಿಸಿಲಿಗೆ ಒಣಗಲು ಹಾಕಿ. ಏರ್‌ಕಂಡಿಷನ್‌ ವ್ಯವಸ್ಥೆಗೆ ಒಡ್ಡಿಕೊಳ್ಳುವುದಕ್ಕೆ ಬದಲಾಗಿ ತೆರೆದ ಕಿಟಿಕಿಗಳಿಂದ ಬೀಸುವ ತಾಜಾ ಗಾಳಿಯನ್ನು ಆನಂದಿಸಿ.


ನಿಮ್ಮದೇ ಆದ ಹಸುರು ವಾತಾವರಣವನ್ನು ನಿರ್ಮಿಸಿಕೊಳ್ಳಿ. ನಿಮ್ಮ ಕೈತೋಟ-ಹೂದೋಟಗಳನ್ನು ಗೌರವಿಸಿ, ಹೆಚ್ಚು ಹೆಚ್ಚು ಗಿಡಗಳನ್ನು ನೆಡಿ ಮತ್ತು ನಿಮ್ಮ ಮನೆಯ ಒಳಾಂಗಣದಲ್ಲಿ ಹೆಚ್ಚು ಗಿಡಗಳನ್ನು ಹಾಕಿ. ಅವು ಗಾಳಿಯನ್ನು ಶುದ್ಧಗೊಳಿಸುತ್ತವೆ, ಆಮ್ಲಜನಕವನ್ನು ಒದಗಿಸುತ್ತವೆ ಮತ್ತು ನಿಮ್ಮ ಸುತ್ತಮುತ್ತಲಿನ ವಾತಾವರಣವನ್ನು ಆಹ್ಲಾದಗೊಳಿಸುತ್ತವೆ.
ತ್ಯಾಜ್ಯಗಳು ನದಿ ಮತ್ತು ಇತರ ಜಲ ಮೂಲಗಳನ್ನು ಮಲಿನಗೊಳಿಸದ ರೀತಿಯಲ್ಲಿ ಅವನ್ನು ಸರಿಯಾಗಿ ವಿಲೇವಾರಿ ಮಾಡಿ.

ನಿಮ್ಮ ಸಾಕುಪ್ರಾಣಿಗಳನ್ನು ಚೆನ್ನಾಗಿ ಆರೈಕೆ ಮಾಡಿ ಮತ್ತು ಅವುಗಳ ತ್ಯಾಜ್ಯಗಳನ್ನು ಸರಿಯಾಗಿ ಲೇವಾರಿ ಮಾಡಿ.

ಮಳೆ ನೀರನ್ನು ಸಂಗ್ರಹಿಸಿ.
ಪರ್ಯಾಯ ವ್ಯವಸಾಯ ಪದ್ಧತಿಯನ್ನು ಅನುಸರಿಸಿ.
ಕೀಟನಾಶಕಗಳ ಮಿತ ಬಳಕೆ, ಸರಿಯಾದ ಬೇಸಾಯ ಕ್ರಮ, ಸರಿಯಾದ ಒಳಚರಂಡಿ ಮತ್ತು ನೀರಾವರಿ ಕ್ರಮಗಳನ್ನು ಅಳವಡಿಸಿಕೊಳ್ಳಿ.
ಸಾವಯವ ಘನ ತ್ಯಾಜ್ಯವನ್ನು ಗೊಬ್ಬರವಾಗಿ ಬಳಸಿ
ವಿವಿಧ ಕಾರಣಗಳಿಗಾಗಿ ಮರಗಳನ್ನು ಕಡಿದಿರುವಲ್ಲೆಲ್ಲ ಗಿಡಗಳನ್ನು ನೆಡುವುದರಿಂದ ಪರಿಸರದಲ್ಲಿನ ಹೆಚ್ಚುವರಿ ಇಂಗಾಲದ ಡೈ ಆಕ್ಸಿಡ್‌ ಅನ್ನು ಹೀರಿಕೊಳ್ಳಲು ಸಹಾಯ ಆಗುತ್ತದೆ.
ತ್ಯಾಜ್ಯಗಳನ್ನು ಜೈವಿಕ ತ್ಯಾಜ್ಯ ಮತ್ತು ಅಜೈವಿಕ ತ್ಯಾಜ್ಯಗಳೆಂದು ವಿಂಗಡಿಸಿದ ಅನಂತರ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಿ.
ಕಾಂಪೋಸ್ಟ್‌ ಬಿನ್‌ ಅನ್ನು ಉಪಯೋಗಿಸಿ. ಇದನ್ನು ಉಳಿಕೆ ಆಹಾರ ಮತ್ತು ಇತರ ಜೈವಿಕ ಅಂಶಗಳನ್ನು ರಿ-ಸೈಕಲ್‌ ಮಾಡಲು ಉಪಯೋಗಿಸಬಹುದು.
ಏಳು ಶತಕೋಟಿ ಕನಸುಗಳು, ಒಂದೇ ಪರಿಸರ, ಎಚ್ಚರಿಕೆಯಿಂದ ಖರ್ಚು ಮಾಡೋಣ ಇದು ಈ ಬಾರಿಯ ವಿಶ್ವ ಪರಿಸರ ದಿನದ ಘೋಷವಾಕ್ಯ. ಇದು ನೈಸರ್ಗಿಕ ಸಂಪನ್ಮೂಲಗಳ ಅವನತಿ, ಅದನ್ನು ತಡೆಗಟ್ಟುವುದು ಮತ್ತು ಭವಿಷ್ಯ ಕ್ಕಾಗಿ ಕಾಪಾಡಿಕೊಳ್ಳಲು ನಾವು ಏನು ಮಾಡಬಹುದು ಎಂಬ ಬಗ್ಗೆ ಹೇಳುತ್ತದೆ. ಮನುಷ್ಯಕುಲದ ಮತ್ತು ವಾತಾವರಣದ ಹಿತ, ಮತ್ತು ಆರ್ಥಿಕ ಸುಸ್ಥಿತಿಗಳು ಖಂಡಿತವಾಗಿಯೂ ಪೃಥ್ವಿಯ ನೈಸರ್ಗಿಕ ಸಂಪನ್ಮೂಲಗಳ ಜವಾಬ್ದಾರಿಯುತ ನಿರ್ವಹಣೆಯನ್ನು ಅವಲಂಬಿಸಿವೆ.


ಕೃಪೆ: ‌ಉದಯವಾಣಿ

1972ರಲ್ಲಿ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಪರಿಸರ ದಿನಾಚರಣೆ ಆಚರಿಸಬೇಕು ಎಂದು ನಿರ್ಧರಿಸಲಾಯಿತು. 1973ರಿಂದ ಪರಿಸರ ದಿನದ ಆಚರಣೆ ಪ್ರಾರಂಭವಾಯಿತು. ಅಂತೆಯೇ ಜೂನ್ 5 ವಿಶ್ವ ಪರಿಸರ ದಿನಾಚರಣೆ. ಪ್ರಪಂಚದಾದ್ಯಂತ ಗಿಡ ನೆಡುವ ಸಂಭ್ರಮ. ಪ್ರತಿ ವರ್ಷ ನಿರ್ಧಿಷ್ಟ ವಸ್ತು ವಿಷಯವನ್ನಾಧರಿಸಿ ಆಚರಿಸಲಾಗುತ್ತದೆ. ಅಂತಯೇ ’ಯೋಚಿಸು, ಉಣ್ಣು, ಉಳಿಸು’ ಎಂಬ ಸಿದ್ಧಾಂತದ ಮೇಲೆ ಈ ಬಾರಿ ಪರಿಸರ ದಿನಾಚರಣೆ ಆಚರಿಸಲಾಗುತ್ತಿದೆ.

ಪ್ರತಿ ವರ್ಷ ಪರಿಸರ ದಿನಾಚರಣೆ ಬರುತ್ತದೆ. ಆ ಸಂದರ್ಭದಲ್ಲಿ ಎಲ್ಲರ ಬಾಯಲ್ಲಿ ಪರಿಸರ ಕಾಳಜಿ ಬಗೆಗಿನ ಉದ್ದುದ್ದ ವಾಖ್ಯಗಳು, ಗಿಡ ನೆಡುವ ಸಡಗರ.. ಪರಿಸರ ಸಂರಕ್ಷಣೆಯ ಅಣಿಮುತ್ತುಗಳು..ಎಲ್ಲಡೆ ಹಸಿರಿನಿಂದ ಕಂಗೊಳಿಸುವ ಬಣ್ಣ... ಮುಂದಿನ ವರ್ಷದ ಪರಿಸರ ದಿನಾಚರಣೆ ಬರುವ ಹೊತ್ತಿಗೆ ನಗರದಲ್ಲಿ ಹಸಿರ ಕಾನನ ಮಾಡಿಬಿಡುತ್ತೇವೆ ಎಂಬ ಧಾವಂತ... ಹಾಗೆ ದಿನಗಳೆದಂತೆ ಆಡಿದ ಮಾತನ್ನು, ಪರಿಸರದ ಬಗೆಗಿನ ಕಾಳಜಿಯನ್ನೇ ಮರೆತು ಸಾಗುವ ಪರಿ.. ಇದು ನಾವು ಆಚರಿಸುತ್ತಿರುವ ಪರಿಸರ ದಿನಾಚರಣೆ....

ಪರಿಸರ, ಪಕೃತಿ ನಮಗೆ ಯಾವುದನ್ನು ನೀಡಲ್ಲ.. ಎಲ್ಲವನ್ನೂ ನೀಡುತ್ತದೆ. ಅಗಣಿತವಾದ ಅಮೂಲ್ಯ ಕೊಡುಗೆಗಳನ್ನು ನೀಡುತ್ತದೆ. ಪ್ರತಿಯೊಂದು ಜೀವ ಸಂಕುಲಕ್ಕೆ ಅಗತ್ಯ, ಅನಿವಾರ್ಯ.. ಆದರೆ ನಾವಿಂದು ಪರಿಸರಕ್ಕಾಗಿ, ಏನನ್ನು ಕೊಟ್ಟಿದ್ದೇವೆ.. ಕೊಡುತ್ತಿದೇವೆ ಎಂಬುದನ್ನು ಪ್ರತಿಯೊಬ್ಬ ಮಾನವನು ತನಗೆ ತಾನೇ ಹಾಕಿಕೊಳ್ಳಬೇಕಾದ ಪ್ರಶ್ನೆ. ಉತ್ತರ ಮಾತ್ರ ನಗಣ್ಯ. ಕೊನೆ ಪಕ್ಷ ಇರುವ ಪರಿಸರವನ್ನು ರಕ್ಷಿಸಿಕೊಳ್ಳುವ ಬಗ್ಗೆ ಕಿಂಚಿತ್ತೂ ಯೋಚಿಸಲೂ ಆಗದಷ್ಟು ನಿಷ್ಕಾಳಜಿ.

ಹಸಿರನ್ನು ಉಳಿಸಲು ಇದೆಯೆ ನಮಗೆ ಇಚ್ಚಾ ಶಕ್ತಿ ?..

ಬೆಂಗಳೂರು ನಗರದಲ್ಲಂತೂ ದಿನದಿಂದ ದಿನಕ್ಕೆ ಮಾಲಿನ್ಯ ಹೆಚ್ಚುತ್ತಿದೆ. ಕಣ್ಣೆತ್ತಿ ನೋಡಿದರೆ ಪರ್ವತದಂತೆ ಎದ್ದು ನಿಂತ, ನಿಲ್ಲುತ್ತಿರುವ ಕಟ್ಟಡಗಳ ಸಮುಚ್ಛಯ, ರಸ್ತೆಯಲ್ಲಿ ತುಂಬಿದ ತ್ಯಾಜ್ಯ, ಗಾಳಿಯಲ್ಲಿ ಮಾಲಿನ್ಯದ ದಟ್ಟ ಹೊಗೆ, ಚರಂಡಿಗಳ ಅವ್ಯವಸ್ಥೆಯಿಂದ ಕೊಳಚೆ ನೀರಿನ ಪ್ರವಾಹ, ವಾಹನಗಳ ಭರಾಟೆ, ಕಿವಿಗಡಚಿಕ್ಕುವ ಶಬ್ದ. ಇವುಗಳಿಂದ ಕಲ್ಮಷವಾದ ದೂಳಿನ ಕಣಗಳ ನಿರಂತರ ಸೇವನೆಯಿಂದ ಒಂದಿಲ್ಲೊಂದು ಕಾಯಿಲೆಗೆ ತುತ್ತಾಗುತ್ತಿರುವ ಮನುಷ್ಯ... ಕಲುಷಿತಗೊಂಡ ನೀರು, ಗಾಳಿ, ಆಹಾರದ ಸೇವನೆಗೆ ನಮ್ಮನ್ನೇ ನಾವು ಒಗ್ಗೂಡಿಸಿಕೊಂಡು ನಡೆಯುತ್ತಿರುವ ಸ್ಥಿತಿ.

ಪ್ರತಿದಿನ ಬೆಂಗಳೂರನ್ನು ಸೇರುತ್ತಿರುವ ಜನ, ಏರುತ್ತಿರುವ ತ್ಯಾಜ್ಯ, ಇದ್ದಬದ್ದ ಮರಗಳನ್ನು ಕಡಿದು ಕಟ್ಟುತ್ತಿರುವ ವಾಣಿಜ್ಯ ಕಟ್ಟಡಗಳು... ದಿನಂಪ್ರತಿ 1200ದಷ್ಟು ಸೇರಿಕೊಳ್ಳುವ ವಾಹನಗಳು... ಇದು ಹೀಗೆ ಮುಂದುವರಿದರೆ ಮುಂದೊಂದುದಿನ ಮುಂದಿನ ಪೀಳಿಗೆಗಳಿಗೆ ’ಪರಿಸರ’, ’ಹಸಿರು’ ಎಂದರೇನು ಎಂಬುದೇ ಗೊತ್ತಾಗದ ಸ್ಥಿತಿ ತಲುಪುವ ಕಾಲ ದೂರವಿಲ್ಲ. ಅಷ್ಟೊತ್ತಿಗೆ ಉಸಿರಾಟಕ್ಕೂ ನಿರ್ಮಲವಾದ ಗಾಳಿ ಇಲ್ಲದೇ ಮನುಷ್ಯ ಪರದಾಡುವ ಪರಿಸ್ಥಿತಿ ಬಂದರೆ ಆಶ್ಚರ್ಯವಿಲ್ಲ.
ಕಾಂಕ್ರೀಟ್ ಕಾಡಲ್ಲಿ ಹಸಿರಿಗೆಲ್ಲಿ ಉಳಿವು ?...

ಪ್ರತಿಯೊಬ್ಬ ವ್ಯಕ್ತಿ ಪರಿಸರದ ಅಗತ್ಯತೆ, ಕಾಳಜಿ, ಅರಿವನ್ನು ಹೊಂದಿರುವುದರ ಜೊತೆಗೆ. ಪರಿಸರಕ್ಕೆ ತಾನು ನೀಡುತ್ತಿರುವ ಕೊಡುಗೆಯಾದರೂ ಏನು ಎಂಬುದನ್ನು ಮನವರಿಕೆ ಮಾಡಿಕೊಂಡು ಅದರ ಉಳಿವಿಗಾಗಿ ಜಾಗೃತನಾಗಬೇಕು. ನಮಗಿರುವ ಒಂದೇ ಒಂದು ಭೂಮಿಯನ್ನು, ಭೂಗ್ರಹವನ್ನು ಉಳಿಸಿಕೊಳ್ಳಲು ಹಿಂದೆಂದೂ ಇಲ್ಲದ ಕಾಳಜಿ ಈಗ ಬಾಯಲ್ಲಿ ಮಾತ್ರ ಪಠಣ ಮಾಡಿದರೆ ಸಾಲದು.

ಇನ್ನಾದರೂ ಮನುಷ್ಯ ಜಾಗೃತನಾಗಿ ಪರಿಸರ ಸಂರಕ್ಷಣೆಗಾಗಿ ಕ್ರಮಗಳನ್ನು ಕೈಗೊಂಡು ಹಸಿರು ಕ್ರಾಂತಿ ಮಾಡಬೇಕಿದೆ. ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ ಅದು ನಿತ್ಯ ನಿರಂತರವಾಗಿರಬೇಕು. ಅಂದಾಗ ಮಾತ್ರ ಪರಿಸರ ದಿನಾಚರಣೆಗೊಂದು ಅರ್ಥ ಸಿಗುತ್ತದೆ.. ಪರಿಸರವನ್ನು ಉಳಿಸುವ ಮೂಲಕ ನಾವು ಬದುಕಿ ಬಾಳಿದಂತಾಗುತ್ತದೆ.

ಕೃಪೆ: ಅಂತರಜಾಲ

ಮಹಾತ್ಮ ಗಾಂಧಿ ಜನ್ಮ ದಿನಾಚರಣೆ

 



ಪ್ರತಿವರ್ಷ ಅಕ್ಟೋಬರ್ ೦೨ ರಂದು ಗಾಂಧಿ ಜಯಂತಿ ಆಚರಿಸಲಾಗುತ್ತದೆ. ಭಾರತದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನೂ ಇದೇ ದಿನ ಆಚರಿಸಲಾಗುತ್ತದೆ.

ಅಕ್ಟೋಬರ್ 2 ನಮ್ಮ ದೇಶಾದ್ಯಂತ ಆಚರಿಸುವ ರಾಷ್ಟ್ರಿಯ ಹಬ್ಬ ಕಾರಣ ಅಂದು ಗಾಂಧಿ ಜಯಂತಿ. ಎಲ್ಲಾ ಶಾಲೆಗಳಲ್ಲಿ, ಸರ್ಕಾರಿ ಕಛೇರಿಗಳಲ್ಲಿ ಗಾಂಧಿಜಿಯವರ ಭಾವ ಚಿತ್ರವನ್ನು ಇಟ್ಟು ಪೂಜೆಯನ್ನು ಮಾಡುತ್ತಾರೆ. ಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲಿ ಅಂದು ಗಾಂಧಿಜಿಯವರ ಬಗ್ಗೆ ಮತ್ತು ಅವರ ಸಾದನೆಗಳ ಬಗ್ಗೆ ಜೊತೆಗೆ ಅವರ ಜೀವನ ಚರಿತ್ರೆಯನ್ನು ಮಕ್ಕಳಿಗೆ ಹೇಳುತ್ತಾರೆ. ಅದರ ಜೊತೆಗೆ ಅಂದು ವಿಶೇಷವಾಗಿ ಶ್ರಮದಾನವನ್ನು ಸಹ ಹಮ್ಮಿಕೊಂಡು ಆಯಾ ಗ್ರಾಮದಲ್ಲಿ ಶ್ರಮದಾನ ಮಾಡುತ್ತಾರೆ. ಶಾಲಾ ಮಕ್ಕಳು ಸಹ ಬೆಳಿಗ್ಗೆ ಬೇಗನೆ ಎದ್ದು ಜಳಕ ಮಾಡಿ, ರಾಷ್ಟ್ರ ಪಿತನಿಗೆ ನಮಿಸಿ, ಅವರ ತತ್ವಗಳನ್ನು ಜೀವನದಲ್ಲಿ ತೊಡಗಿಸಿಕೊಳ್ಳಲು ಸಿದ್ದರಾಗಿ ಶಾಲೆಗೆ ಬರುತ್ತಾರೆ. ಇಂತಾ ಮಹಾನ ವ್ಯಕ್ತಿಯ ಜನ್ಮ ದಿನವಾದ ಅಕ್ಟೋಬರ್ 2 ರಂದು ರಾಜ್ಯಾದ್ಯಂತ ಮದ್ಯಪಾನವನ್ನು ಸಹ ಸರ್ಕಾರ ನಿಷೇದಿಸಿರುವುದು ಹೆಮ್ಮೆಯ ಸಂಗತಿಯು ಹೌದು. ನಿಮಗೆ ತಿಳಿದ ಹಾಗೆ ಗಾಂಧೀಜಿ ಯವರ ಹುಟ್ಟಿದ ದಿನವನ್ನು ಗಾಂಧಿ ಜಯಂತಿ ಎಂದು ಆಚರಿಸಲಾಗುವುದು ಇವರ ಪೂರ್ಣ ಹೆಸರು ಮೋಹನದಾಸ್ ಕರಮ‍ಚಂದ್ ಗಾಂಧಿ ಅಕ್ಟೋಬರ್ 2, 1869 ರಲ್ಲಿ ಭಾರತದ ಗುಜರಾತ್ ರಾಜ್ಯದ ಪೋರಬಂದರ್ ನಲ್ಲಿ ಜನಿಸಿದರು. ಇವರ ತಂದೆ ಕರಮಚಂದ್ ಗಾಂಧಿ ,ತಾಯಿ ಪುತಲೀಬಾಯಿ. 13 ನೆಯ ವಯಸ್ಸಿನಲ್ಲಿ ಗಾಂಧೀಜಿ ಕಸ್ತೂರಿಬಾ ಅವರನ್ನು ವಿವಾಹವಾದರು. ನಂತರ ಇವರಿಗೆ ನಾಲ್ಕು ಮಕ್ಕಳು ಜನಿಸಿದರು : ಹರಿಲಾಲ್ ಗಾಂಧಿ, ಮಣಿಲಾಲ್ ಗಾಂಧಿ , ರಾಮದಾಸ್ ಗಾಂಧಿ ಮತ್ತು ದೇವದಾಸ್ ಗಾಂಧಿ . 19 ನೆಯ ವಯಸ್ಸಿನಲ್ಲಿ ಗಾಂಧೀಜಿ ಲಂಡನ್ ನಗರದ ಯೂನಿವರ್ಸಿಟಿ ಕಾಲೇಜಿನಲ್ಲಿ ವಕೀಲಿ ವೃತ್ತಿಗಾಗಿ ತರಬೇತಿ ಪಡೆಯಲು ತೆರಳಿ ತರಬೇತಿ ಯನ್ನು ಮುಗಿಸಿ ಬಂದು. ಮುಂಬೈ ನಗರದಲ್ಲಿ ವಕೀಲಿ ವೃತ್ತಿಯನ್ನು ಆರಂಭಿಸಲು ಬಹಳ ಪ್ರಯತ್ನಿಸಿದರು. ಆದರೆ ಹೆಚ್ಚು ಯಶಸ್ಸು ಕಾಣದಿದ್ದರಿಂದ ಎರಡು ವರ್ಷಗಳ ನಂತರ ದಕ್ಷಿಣ ಆಫ್ರಿಕಾ ಕ್ಕೆ ಕೆಲಸದ ಮೇಲೆ ತೆರಳಿದರು.ಅಲ್ಲಿ ಭಾರತೀಯ ನಿವಾಸಿಗಳಿಗೆ ಸಮಾನ ಹಕ್ಕುಗಳನ್ನು ನೀಡದ ಬ್ರಿಟಿಷ್ ಸರ್ಕಾರದ ವರ್ಣಭೇದ ನೀತಿಯನ್ನು ನೋಡಿ ಬೇಸರಗೊಂಡ ಗಾಂಧೀಜಿ ಅಲ್ಲಿನ ವರ್ಣಭೇದ ನೀತಿಯನ್ನು ಅಳಿಸಲು ಚಳುವಳಿಯನ್ನು ಆರಂಭಿಸಿದರು. ಅಲ್ಲಿನ ಪೀಟರ್ ಮ್ಯಾರಿಟ್ಸ್ ಬರ್ಗ್ ಎಂಬ ನಗರದಲ್ಲಿ ರೈಲಿನಲ್ಲಿ ಮೊದಲ ದರ್ಜೆ ಟಿಕೆಟ್ ತೆಗೆದುಕೊಂಡಿದ್ದರೂ ಅಲ್ಲಿ ಕೂರಲು ಬಿಡದೆ ರೈಲಿನಿಂದ ಹೊರಹಾಕಿದಾಗ ಅವರ ವರ್ಣಭೇದ ನೀತಿಯ ವಿರುದ್ಧ ಹೋರಾಡುವ ನಿಶ್ವಯ ಸ್ಥಿರವಾಯಿತು. ನವಂಬರ್ 6, 1913 ರಲ್ಲಿ ಭಾರತೀಯ ಗಣಿಗಾರರ ಒಂದು ಮೆರವಣಿಗೆಯಲ್ಲಿ ಹೋಗುತ್ತಿದ್ದಾಗ ಗಾಂಧೀಜಿ ಬಂಧಿತರಾದರು. ಗಾಂಧೀಜಿವರ ತತ್ವಗಳಿಗೆ ಮುಖ್ಯ ಸ್ಫೂರ್ತಿ ಭಗವದ್ಗೀತೆ, ಮತ್ತು ರಷ್ಯದ ಪ್ರಸಿದ್ಧ ಸಾಹಿತಿ ಲಿಯೋ ಟಾಲ್‍ಸ್ಟಾಯ್ ಅವರ ಬರಹಗಳು. ಗಾಂಧೀಜಿಯವರು ಅಮೆರಿಕನ್ಸಾಹಿತಿ ಹೆನ್ರಿ ಡೇವಿಡ್ ಥೋರ್ಯೂ ನ ಪ್ರಬಂಧಗಳಿಂದಲೂ ಪ್ರಭಾವಿತರಾಗಿದ್ದರು. ಮೊದಲನೆಯ ಮಹಾಯುದ್ಧದ ಸಮಯದಲ್ಲಿ ಗಾಂಧೀಜಿಯವರು ಭಾರತಕ್ಕೆ ಮರಳಿ ಭಾರತೀಯರು ಬ್ರಿಟಿಷರ ಪರವಾಗಿ ಯುದ್ಧದಲ್ಲಿ ಭಾಗವಹಿಸುವಂತೆ ಕೇಳಿಕೊಂಡು ಇದಕ್ಕಾಗಿ ಪ್ರಚಾರ ಮಾಡಿದರು.ಯುದ್ಧದ ನಂತರ ಗಾಂಧೀಜಿಯವರು ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ಜೊತೆ ಸ್ವಾತಂತ್ರ್ಯ ಚಳುವಳಿಗೆ ಧುಮುಕಿದರು. ಉಪವಾಸ ಸತ್ಯಾಗ್ರಹ ಮತ್ತು ಅಸಹಕಾರ ಚಳುವಳಿಗಳ ಮೂಲಕ ಪ್ರಪಂಚದಾದ್ಯಂತ ಖ್ಯಾತಿ ಗಳಿಸಿದರು. ಹಲವಾರು ಬಾರಿ ಬ್ರಿಟಿಷ್ ಸರ್ಕಾರ ಇವರನ್ನು ಬಂಧನದಲ್ಲಿರಿಸಿತು. ಗಾಂಧೀಜಿಯವರ ಯಶಸ್ವಿ ಸತ್ಯಾಗ್ರಹಗಳಲ್ಲಿ ಇನ್ನೊಂದೆಂದರೆ ಸ್ವದೇಶಿ ಚಳುವಳಿ – ಪರದೇಶಗಳಲ್ಲಿ ಉತ್ಪಾದಿತವಾದ ವಸ್ತುಗಳನ್ನು, ಅದರಲ್ಲಿ ಮುಖ್ಯವಾಗಿ ಬ್ರಿಟಿಷ್ ವಸ್ತುಗಳನ್ನು, ವರ್ಜಿಸಿ ಭಾರತದಲ್ಲಿ ಉತ್ಪಾದಿಸಲಾದ ವಸ್ತುಗಳನ್ನು ಮಾತ್ರ ಬಳಸುವಂತೆ ಕೇಳಿಕೊಂಡರು. ಈ ತತ್ವವೇ ಖಾದಿ ಉತ್ಪಾದಿಸಿ ಖಾದಿ ಬಟ್ಟೆಗಳನ್ನೇ ತೊಡುವ ಸಂಪ್ರದಾಯ ಜನಪ್ರಿಯವಾಯಿತು. ಭಾರತೀಯ ಮಹಿಳೆಯರಿಗೆ ಪ್ರತಿ ದಿನವೂ ಖಾದಿ ನೇಯುವಂತೆ ಕೇಳಿ ಗಾಂಧೀಜಿಯವರು ಮಹಿಳೆಯರಿಗೂ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸುವ ಅವಕಾಶ ಮಾಡಿಕೊಟ್ಟರು. 1920 ರಂದು ಅಮೃತಸರದಲ್ಲಿ ನಡೆದ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ನಂತರ ಗಾಂಧೀಜಿಯವರ ಸ್ವಾತಂತ್ರ್ಯ ಚಳುವಳಿ ಇನ್ನೂ ಹೆಚ್ಚು ವೇಗದಲ್ಲಿ ಸಾಗಲಾರಂಭಿಸಿತು. ಗಾಂಧೀಜಿಯವರ ಜೀವನದ ಪ್ರಸಿದ್ಧ ಕಾರ್ಯಗಳಲ್ಲಿ ಒಂದು ದಂಡಿ ಯಾತ್ರೆ. ಉಪ್ಪಿನ ಉತ್ಪಾದನೆಗೆ ಬ್ರಿಟಿಷ್ ಸರ್ಕಾರಕ್ಕೆ ಕರ ಕೊಡುವ ಬದಲು ಜನರು ತಾವಾಗಿಯೇ ಉಪ್ಪನ್ನು ಉತ್ಪಾದಿಸಲಿಕ್ಕಾಗಿ ಗಾಂಧೀಜಿ ಮಾರ್ಚ್ 12, 1930 ರಂದು ಸಹಸ್ರಾರು ಜನರೊಡನೆ ಸಮುದ್ರತೀರಕ್ಕೆ ನಡೆದು ಉಪ್ಪನ್ನು ಉತ್ಪಾದಿಸಿದರು. ಮೇ 8, 1933 ರಂದು ಆರಂಭಗೊಂಡು 21 ದಿನಗಳ ಕಾಲಬ್ರಿಟಿಷ್ ಆಡಳಿತವನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸಿದರು. ಮಾರ್ಚ್ 3, 1939 ರಂದು ಆರಂಭಗೊಂಡು ಇನ್ನೊಂದು ಉಪವಾಸವನ್ನು ನಡೆಸಿದರು. ಗಾಂಧೀಜಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾಗಿದ್ದರು.”ಭಾರತ ಬಿಟ್ಟು ತೊಲಗಿರಿ” ಚಳುವಳಿ 1942 ರಲ್ಲಿ ಆರಂಭವಾಯಿತು. ಆಗಸ್ಟ್ 9, 1942 ರಂದು ಬ್ರಿಟಿಷರು ಗಾಂಧೀಜಿಯನ್ನು ಮತ್ತೆ ಬಂಧಿಸಿ ಎರಡು ವರ್ಷಗಳ ಕಾಲ ಬಂಧನದಲ್ಲಿರಿಸಿದರು. ತತ್ವಗಳು: ಅವರ ಮುಖ್ಯ ತತ್ವಗಳು ಸತ್ಯ ಮತ್ತು ಅಹಿಂಸೆ. ಅಹಿಂಸೆಯ ತತ್ವ ಭಾರತೀಯ ಧಾರ್ಮಿಕ ವಿಚಾರದಲ್ಲಿ ಅನೇಕ ಶತಮಾನಗಳಿಂದ ಅಸ್ತಿತ್ವದಲ್ಲಿರುವ ತತ್ವ. ಗಾಂಧೀಜಿಯವರು ಕಟ್ಟಾ ಸಸ್ಯಾಹಾರಿಗಳು. ಲಂಡನ್ ನಲ್ಲಿ ಓದುತ್ತಿದ್ದಾಗ ಅವರು ಸಸ್ಯಾಹಾರದ ಬಗೆಗೆ ಪುಸ್ತಕಗಳನ್ನೂ ಬರೆದಿದ್ದರು. ಹಿಂದೂ ಮತ್ತು ಜೈನ ಸಮಾಜಗಳಲ್ಲಿ ಸಸ್ಯಾಹಾರದ ತತ್ವ ಶತಮಾನಗಳಿಂದಲೂ ಆಳವಾಗಿ ಬೇರೂರಿರುವುದು. ವಿವಿಧ ರೀತಿಯ ಆಹಾರ ಕ್ರಮಗಳೊಂದಿಗೆ ಪ್ರಯೋಗಗಳನ್ನು ಕೈಗೊಂಡ ಗಾಂಧೀಜಿಯವರ ನಂಬಿಕೆ ನಮ್ಮ ಆಹಾರ ಕ್ರಮ ನಮ್ಮ ಮೂಲಭೂತ ಅಗತ್ಯಗಳನ್ನು ಪೂರೈಸಬೇಕೇ ಹೊರತು ಅದಕ್ಕಿಂತ ಹೆಚ್ಚು ಆಹಾರವನ್ನು ಸೇವಿಸುವ ಅಗತ್ಯವಿಲ್ಲವೆಂಬುದು. ಕಾಲಕಾಲಕ್ಕೆ ಉಪವಾಸ ವ್ರತವನ್ನೂ ಕೈಗೊಳ್ಳುತ್ತಿದ್ದ ಗಾಂಧೀಜಿಯವರು ಉಪವಾಸ ಸತ್ಯಾಗ್ರಹವನ್ನು ಸ್ವಾತಂತ್ರ್ಯ ಚಳುವಳಿಯಲ್ಲೂ ಉಪಯೋಗಿಸಿದವರು. 36 ನೆಯ ವಯಸ್ಸಿನಲ್ಲಿ ಗಾಂಧೀಜಿಯವರು ಬ್ರಹ್ಮಚರ್ಯ ವ್ರತವನ್ನು ಸ್ವೀಕರಿಸಿದರು. ಹಾಗೆಯೇ ವಾರದಲ್ಲಿ ಒಂದು ದಿನ ಮೌನವ್ರತವನ್ನು ಆಚರಿಸುತ್ತಿದ್ದರು. ಇದರಿಂದ ಆತ್ಮಶಾಂತಿ ಸಿಕ್ಕುತ್ತದೆಂಬುದು ಗಾಂಧೀಜಿಯವರ ನಂಬಿಕೆ. ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಹಿಂದಿರುಗಿದ ಮೇಲೆ ಶ್ರೀಮಂತ ಉಡುಪುಗಳನ್ನು ಗಾಂಧೀಜಿ ಎಂದಿಗೂ ಧರಿಸಲಿಲ್ಲ. ಭಾರತದ ಅತ್ಯಂತ ಬಡ ಮನುಷ್ಯ ಒಪ್ಪಿಕೊಳ್ಳಬಹುದಾದ ಉಡುಪುಗಳನ್ನು ಮಾತ್ರ ಅವರು ಧರಿಸುತ್ತಿದ್ದರು. ಮನೆಯಲ್ಲಿಯೇ ನೇಯ್ದ ಖಾದಿ ಬಟ್ಟೆಗಳನ್ನು ಧರಿಸುವುದನ್ನು ಗಾಂಧೀಜಿ ಪ್ರೋತ್ಸಾಹಿಸುತ್ತಿದ್ದರು. ಗಾಂಧೀಜಿಯವರ ಚರಕ ನಂತರ ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ಬಾವುಟದಲ್ಲಿಯೂ ಸೇರಿತು. ಸತ್ಯದೊಂದಿಗೆ ನನ್ನ ಪ್ರಯೋಗಗಳು ಮಹಾತ್ಮ ಗಾಂಧಿಯವರ ಆತ್ಮ ಚರಿತ್ರೆ. ಜನಪ್ರಿಯವಾಗಿ ಮಹಾತ್ಮ ಗಾಂಧಿ, ಆಧುನಿಕ ಭಾರತ ದೇಶದ ಪಿತಾಮಹರಲ್ಲಿ ಒಬ್ಬರು, ಮತ್ತು ಭಾರತೀಯ ಸ್ವಾತಂತ್ರ್ಯ ಚಳುವಳಿಯ ಪ್ರಭಾವಶಾಲಿ ನಾಯಕರು ಮತ್ತು ಸತ್ಯಾಗ್ರಹಿಗಳು. ಬ್ರಿಟಿಷ್ ಆಡಳಿತದಿಂದ ಭಾರತ ಸ್ವಾತಂತ್ರ್ಯ ಪಡೆಯುವುದರಲ್ಲಿ ಮುಖ್ಯ ಪಾತ್ರ ವಹಿಸಿದರಲ್ಲದೆ, ಪರದೇಶದ ಆಡಳಿತಕ್ಕೆ ಒಳಗಾಗಿದ್ದ ಇತರ ದೇಶಗಳಲ್ಲಿಯೂ ಸ್ವಾತಂತ್ರ್ಯ ಚಳುವಳಿಗೆ ಸ್ಫೂರ್ತಿ ತಂದರು. ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಮೊದಲಾದ ಅಹಿಂಸಾವಾದಿ ಹೋರಾಟಗಾರರು ಗಾಂಧೀಜಿಯವರ ಸತ್ಯಾಗ್ರಹದ ತತ್ವದಿಂದ ಆಳವಾಗಿ ಪ್ರಭಾವಿತರಾದವರು. ಗಾಂಧೀಜಿಯವರ ಹೇಳಿಕೆಯಂತೆ, ಅವರ ಮೌಲ್ಯಗಳು ಸರಳ ಧಾರ್ಮಿಕ ನಂಬಿಕೆಗಳಿಂದ ಬಂದಂಥವು: ಸತ್ಯ ಮತ್ತು ಅಹಿಂಸೆ. ಬನ್ನಿ ಅವರ ಹಾದಿಯಲ್ಲಿ ನಾವೂ ಸಹ ಸಾಗಲು ಪ್ರಯತ್ನಿಸೋಣ.

ಲಾಲ ಬಹಾದ್ದೂರ ಶಾಸ್ತ್ರಿ ಜನ್ಮ ದಿನಾಚರಣೆ

 ಉತ್ತರ ಪ್ರದೇಶದ ವಾರಾಣಸಿಯಿಂದ ಏಳು ಕಿಲೋಮೀಟರ್ ದೂರದಲ್ಲಿರುವ ಪುಟ್ಟ ಹಳ್ಳಿ ಮುಗಲ್ಸರಾಯಿಯಲ್ಲಿ ಅಕ್ಟೋಬರ್ 2, 1901ರಂದು ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರಿ ಜನಿಸಿದರು. ಲಾಲ್ ಬಹಾದ್ದೂರ್ ಶಾಸ್ತ್ರಿಯವರ ತಂದೆ ಒಬ್ಬ ಶಾಲಾ ಶಿಕ್ಷಕರಾಗಿದ್ದರು ಮತ್ತು ಶಾಸ್ತ್ರಿಯವರು ಒಂದೂವರೆ ವರ್ಷದವರಾಗಿರುವಾಗಲೇ ಅವರು ತೀರಿಕೊಂಡರು. ಆಗ ಇಪ್ಪತ್ತು ವಯಸ್ಸಿನ ಅವರ ತಾಯಿ ತಮ್ಮ ಹದಿಮೂರು ಮಕ್ಕಳ ಜತೆ ತವರು ಮನೆ ಸೇರಿ ಅಲ್ಲೇ ಉಳಿದರು.

ಲಾಲ್ ಬಹಾದ್ದೂರ್ ಅವರ ಪುಟ್ಟ ಹಳ್ಳಿಯ ಶಿಕ್ಷಣ ಯಾವ ರೀತಿಯಲ್ಲೂ ಗಮನಾರ್ಹವಾಗಿಲಿಲ್ಲ. ಕಿತ್ತು ತಿನ್ನುವ ಬಡತನವೊಂದÀನ್ನು ಬಿಟ್ಟರೆ ಅವರ ಬಾಲ್ಯ ಸಂತಸಮಯವಾಗಿತ್ತು.
ಪ್ರೌಢ ಶಾಲೆಗೆ ದಾಖಲಿಸಲುಲಾಲ್ ಬಹಾದ್ದೂರ್ ಅವರನ್ನು ಅವರ ಮಾವನೊಡನೆ ವಾರಾಣಸಿಗೆ ಕಳುಹಿಸಲಾಯಿತು. ಅವರನ್ನು ಮನೆಯಲ್ಲಿ ನನ್ಹೆ ( ಪುಟ್ಟ) ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. ಉರಿ ಬಿಸಿಲಲ್ಲಿ ಕಾದ ರಸ್ತೆ ಮೇಲೆ ಚಪ್ಪಲಿಗಳಿಲ್ಲದೆ ಮೈಲುಗಟ್ಟಲೆ ನಡೆದು ಲಾಲ್ ಬಹಾದ್ದೂರ್ ಶಾಲೆ ಸೇರಬೇಕಾಗಿತ್ತು.
ಬೆಳೆಯುತ್ತಿದ್ದಂತೆ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರಿಗೆ ವಿದೇಶಿಯರ ಹಿಡಿತದಲ್ಲಿರುವ ದೇಶದ ಸ್ವಾತಂತ್ರ್ಯ ಹೋರಾಟದ ಕುರಿತು ಆಸಕ್ತಿ ಹೆಚ್ಚತೊಡಗಿತು. ಭಾರತದಲ್ಲಿ ಬ್ರಿಟಿಷ್ ಆಡಳಿತವನ್ನು ಬೆಂಬಲಿಸಿದ ದೇಶದ ರಾಜರುಗಳ ವಿರುದ್ಧ ಮಹಾತ್ಮಾ ಗಾಂಧಿ ಅವರ ಖಂಡನೆಯಿಂದ ಲಾಲ್ ಬಹಾದ್ದೂರ್ ಅತ್ಯಂತ ಪ್ರಭಾವಿತರಾದರು. ಈ ವೇಳೆ ಲಾಲ್ ಬಹಾದ್ದೂರ್ ಕೇವಲ ಹನ್ನೊಂದು ವರುಷ ವಯಸ್ಸಿನವರಾಗಿದ್ದರು.
ಗಾಂಧೀಜಿ ತನ್ನ ದೇಶದ ನಾಗರಿಕರನ್ನು ಅಸಹಕಾರ ಚಳುವಳಿಗೆ ಸೇರಲು ಕರೆ ನೀಡಿದ ಸಂದರ್ಭದಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರಿಗೆ ಕೇವಲ ಹದಿನಾರು ವರುಷ ವಯಸ್ಸು. ಮಹಾತ್ಮಾ ಅವರ ಕರೆಗೆ ಪ್ರತಿಕ್ರಿಯೆಯಾಗಿ ತನ್ನ ಓದನ್ನು ಬಿಟ್ಟು ಚಳುವಳಿಗೆ ಸೇರಲು ಶಾಸ್ತ್ರಿ ಅವರು ಒಂದೇ ಬಾರಿಗೆ ನಿರ್ಧರಿಸಿದರು. ಅವರ ನಿರ್ಧಾರ ತಾಯಿಯ ನಿರೀಕ್ಷೆಗಳನ್ನು ನುಚ್ಚುನೂರಾಗಿಸಿತು. ಲಾಲ್ ಬಹಾದ್ದೂರ್ ತನ್ನ ನಿರ್ಣಯವನ್ನು ತೆಗೆದುಕೊಂಡಿದ್ದರು. ಶಾಸ್ತ್ರಿ ಅವರಿಗೆ ಆತ್ಮೀಯರಾದವರಿಗೆಲ್ಲ ಅವರು ಒಮ್ಮೆ ನಿರ್ಣಯ ತೆಗೆದುಕೊಂಡ ಬಳಿಕ ಅವರ ಮನಸ್ಸನ್ನು ಬದಲಾಯಿಸಲು ಸಾಧ್ಯವಿಲ್ಲ, ಅವರ ಮೃದು ಬಾಹ್ಯದ ಒಳಗಿರುವುದು ಕಲ್ಲಿನಂತಹ ದೃಢ ಮನಸ್ಸು ಎಂಬುದರ ಅರಿವಿತ್ತು.
ಬ್ರಿಟಷ್ ಆಡಳಿತಕ್ಕೆ ವಿರೋಧವಾಗಿ ಸ್ಥಾಪಿಸಲಾದ ಹಲವಾರು ರಾಷ್ಟ್ರೀಯ ಸಂಸ್ಥೆಗಳಲ್ಲೊಂದಾದ ವಾರಣಾಸಿಯ ಕಾಶಿ ವಿದ್ಯಾ ಪೀಠವನ್ನು ಲಾಲ್ ಬಹಾದ್ದೂರ ಶಾಸ್ತ್ರಿ ಸೇರಿದರು. ಅಲ್ಲಿ ಅವರು ದೇಶದ ಶ್ರೇಷ್ಠ ಬುದ್ಧೀವಿಗಳು ಮತ್ತು ರಾಷ್ಟ್ರೀಯವಾದಿಗಳ ಪ್ರಭಾವಕ್ಕೆ ಒಳಗಾದರು. ‘ಶಾಸ್ತ್ರಿ’ ಎಂಬುದು ವಿದ್ಯಾಪೀಠದಿಂದ ಲಾಲ್ ಬಹದ್ದೂರರಿಗೆ ನೀಡಿದ ಪದವಿ. ಆದರೆ, ಅದು ಅವರ ಹೆಸರಿನ ಭಾಗವಾಗಿ ಜನಮನದಲ್ಲಿ ಉಳಿದುಕೊಂಡಿದೆ.
1927ರಲ್ಲಿ ಅವರು ವಿವಾಹವಾದರು. ಅವರ ಪತ್ನಿ ಅವರ ಹಳ್ಳಿಯ ಪಕ್ಕದ ಮಿರ್ಜಾಪುರದ ಲಲಿತಾ ದೇವಿ. ಒಂದು ವಿಚಾರವನ್ನು ಹೊರತುಪಡಿಸಿ ಉಳಿದೆಲ್ಲಾ ವಿಚಾರಗಳಲ್ಲಿ ವಿವಾಹ ಸಾಂಪ್ರದಾಯಿಕವಾಗಿತ್ತು. ಅದೇನೆಂದರೆ ವರದಕ್ಷಿಣೆಯಾಗಿ ಕೈಮಗ್ಗದ ಕೆಲವು ಬಟ್ಟೆ ಮತ್ತು ಚರಕವನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು. ವರ ಇದಕ್ಕಿಂತ ಹೆಚ್ಚಿನದೇನನ್ನು ಸ್ವೀಕರಿಸಲಿಲ್ಲ
1930ರಲ್ಲಿ ಮಹಾತ್ಮಾ ಗಾಂಧಿ ದಂಡಿ ಸಮುದ್ರ ತೀರದಲ್ಲಿ ನಡೆದು sಉಪ್ಪಿನ ಸಾರ್ವಭೌಮ ಕಾನೂನನ್ನು ಮುರಿದರು. ಈ ಸಾಂಕೇತಿಕ ಕಾರ್ಯ ಇಡೀ ದೇಶವನ್ನೇ ಬೆರಗುಗೊಳಿಸಿತು. ಲಾಲ್ ಬಹಾದ್ದೂರ್ ಶಾಸ್ತ್ರಿ ತಮ್ಮ ಅಗಾಧ ಶಕ್ತಿಯೊಂದಿಗೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದರು. ಅವರು ಹಲವಾರು ಬ್ರಿಟಿಷ್ ವಿರೋಧಿ ಆಂದೋಲನಗಳ ನಾಯಕತ್ವ ವಹಿಸಿ ಒಟ್ಟು ಏಳು ವರುಷಗಳನ್ನು ಬ್ರಿಟಷ್ ಕಾರಾಗೃಹಗಳಲ್ಲಿ ಕಳೆದರು. ಹೋರಾಟದ ಉರಿಯಲ್ಲಿ ಬೆಂದು ಇನ್ನಷ್ಟು ಪ್ರೌಢರಾದರು.
ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ, ಸೌಮ್ಯ ಮತ್ತು ನಿರ್ಗವಿಯಾಗಿದ್ದ ಲಾಲ್ ಬಹಾದ್ದೂರ್ ಶಾಸ್ತ್ರಿ ಸ್ವಾತಂತ್ರ್ಯ ಹೋರಾಟದ ನಾಯಕರುಗಳಿಂದ ಅದಾಗಲೇ ಗುರುತಿಸಿಕೊಳ್ಳಲು ಶುರುವಾದರು. 1946ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗ ಈ ‘ಡೈನಮೊ ವ್ಯಕ್ತಿ’ಯನ್ನು ಆಡಳಿತದಲ್ಲಿ ರಚನಾತ್ಮಕ ಪಾತ್ರ ನಿರ್ವಹಿಸಲು ಕರೆಸಲಾಯಿತು. ಶಾಸ್ತ್ರಿ ಅವರನ್ನು ಅವರ ಸ್ಥಳಿಯ ರಾಜ್ಯ ಉತ್ತರ ಪ್ರದೇಶದ ಸಂಸದೀಯ ಕಾಯದರ್ಶಿಯಾಗಿ ನೇಮಿಸಲಾಯಿತು. ಶೀಘ್ರದಲ್ಲೇ ಅವರು ಗೃಹ ಸಚಿವ ಸ್ಥಾನಕ್ಕೇರಿದರು. ಅವರ ಸಾಮಥ್ರ್ಯ ಮತ್ತು ಕಠಿಣ ಪರಿಶ್ರಮ ಉತ್ತರ ಪ್ರದೇಶದಲ್ಲಿ ಮನೆಮಾತಾಯಿತು. 1951ರಲ್ಲಿ ಅವರು ನವದೆಹಲಿಗೆ ತೆರಳಿದರು. ಕೇಂದ್ರ ಮಂತ್ರಿಮಂಡಲದ ವಿವಿಧ ಖಾತೆಗಳಲ್ಲಿ ಅಧಿಕಾರ ವಹಿಸಿಕೊಂಡರು- ರೈಲ್ವೆ ಸಚಿವ, ಸಾರಿಗೆ ಮತ್ತು ಸಂಪರ್ಕ ಸಚಿವ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ, ಗೃಹ ಸಚಿವ-ನೆಹರು ಅವರ ಅನಾರೋಗ್ಯದ ಸಂದರ್ಭದಲ್ಲಿ ಖಾತೆಯಿಲ್ಲದೆ ಸಚಿವರಾಗಿದ್ದರು. ಶಾಸ್ತ್ರಿ ಅವರು ನಿರಂತರವಾಗಿ ಜನಪ್ರಿಯರಾಗುತ್ತಿದ್ದರು. ಹಲವಾರು ಜನರನ್ನು ಬಲಿ ತೆಗೆದುಕೊಂಡ ರೈಲ್ವೆ ಅಪಘಾತವೊಂದ್ಕಕೆ ತಾನು ಜವಾಬ್ಧಾರಿಯೆಂದು ಅನಿಸಿದ್ದರಿಂದ ಅವರು ತಮ್ಮ ರೈಲೆ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದರು. ಅವರ ಈ ನಿರ್ಧಾರ ಸಂಸತ್ತು ಮತ್ತು ಇಡೀ ರಾಷ್ಟ್ರದಲ್ಲೇ ಪ್ರಶಂಸೆಗೆ ಪಾತ್ರವಾಯಿತು. ಆಗಿನ ಪ್ರಧಾನಮಂತ್ರಿ ಶ್ರೀ ಜವಾಹರ್ ಲಾಲ್ ನೆಹರು ಘಟನೆಯ ಕುರಿತು ಸಂಸತ್ತಿನಲ್ಲಿ ಮಾತನಾಡುತ್ತಾ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಉನ್ನತ ಆದರ್ಶಗಳು ಮತ್ತು ದೃಢನಿಷ್ಠೆಯನ್ನು ಪ್ರಶಂಸಿಸಿದರು. ರಾಜಿನಾಮೆಯನ್ನು ಸ್ವೀಕರಿಸಿದ ನೆಹರು ಅವರು ತಾನು ಈ ರಾಜೀನಾಮೆಯನ್ನು ಸ್ವೀಕರಿಸುತ್ತಿರುವುದು ಏಕೆಂದರೆ ಈ ರಾಜೀನಾಮೆ ಸಾಂವಿಧಾನಿಕ ಔಚಿತ್ಯಕ್ಕೆ ಉದಾಹರಣೆಯಾಗಲಿದೆ ಎಂದು ವಿನಹಃ ಶಾಸ್ತ್ರಿ ಅವರು ಈ ಅವಘಢಕ್ಕೆ ಜವಾಬ್ಧಾರರೆಂದಲ್ಲ ಎಂದು ಆ ಸಂದರ್ಭದಲ್ಲಿ ಹೇಳಿದರು. ರೈಲು ದುರಂತದ ಕುರಿತು ನಡದ ದೀರ್ಘ ಚರ್ಚೆಗೆ ಪ್ರತಿಕ್ರಿಯಿಸಿದ ಶಾಸ್ತ್ರಿ ಅವರು ” ನಾನು ಗಾತ್ರದಲ್ಲಿ ಸಣ್ಣ ಮತ್ತು ಮೃದು ನಾಲಿಗೆ ಉಳ್ಳವನಾದುದರಿಂದ ಜನರು ನನಗೆ ಸ್ಥಿರವಾಗಿರಲು ಸಾಧ್ಯವಾಗುತ್ತಿಲ್ಲ ಎಂದು ನಂಬಿದ್ದಾರೆ. ದೈಹಿಕವಾಗಿ ನಾನು ಸದೃಢನಲ್ಲದಿದ್ದರೂ, ಆಂತರಿಕವಾಗಿ ಅಷ್ಟೊಂದು ನಿಶಕ್ತನಲ್ಲ ಅಂದೊಕೊಂಡಿದ್ದೇನೆ’. ಎಂದರು.
ಮೂವತ್ತು ವರುಷಗಳ ಸಮರ್ಪಣಾ ಸೇವೆ ಲಾಲ್ ಬಹದ್ದೂರ್ ಶಾಸ್ತ್ರಿಯವರ ಹಿಂದಿತ್ತು. ಈ ಅವಧಿಯಲ್ಲಿ ಅವರೊಬ್ಬ ಪ್ರಮಾಣಿಕ ಮತ್ತು ಅತ್ಯಂತ ಸಾಮಥ್ರ್ಯವಿರುವ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು. ಶಾಸ್ತ್ರಿ ಅವರು ವಿನಮ್ರತೆ, ಸಹಿಷ್ಣುತೆ, ಮಹಾನ್ ಆಂತರಿಕ ಶಕ್ತಿಯುಳ್ಳ ಮತ್ತು ದೃಢನಿಶ್ಚಯವುಳ್ಳ, ಜನರ ಭಾಷೆಯನ್ನು ಅರ್ಥೈಸಿಕೊಂಡ ಜನರ ವ್ಯಕ್ತಿಯಾದರು. ಪ್ರಗತಿಯೆಡೆಗೆ ರಾಷ್ಟ್ರವನ್ನು ಮುನ್ನಡೆಸಿದ ದೂರದೃಷ್ಠಿಯುಳ್ಳ ವ್ಯಕ್ತಿ ಅವರಾಗಿದ್ದರು. ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಮಹಾತ್ಮಾ ಗಾಂಧಿ ಅವರ ರಾಜಕೀಯ ಚಿಂತನೆಗಳಿಂದ ಅತ್ಯಂತ ಪ್ರಭಾವಿತರಾಗಿದ್ದರು. ‘ ಕಠಿಣ ಪರಿಶ್ರಮ ಪ್ರಾರ್ಥನೆಗೆ ಸಮನಾದುದು’ ಎಂದು ಒಮ್ಮೆ ಅವರು ತಮ್ಮ ಗುರುವನ್ನು ಸ್ಮರಿಸುತ್ತಾ ಹೇಳಿದರು. ಮಹಾತ್ಮಾ ಗಾಂಧಿ ಅವರ ನೇರ ಸಂಪ್ರದಾಯದಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಭಾರತೀಯ ಸಂಸ್ಕøತಿಯನ್ನು ಪ್ರಾತಿನಿಧಿಸಿದರು.

ವಾಲ್ಮೀಕಿಯಾದ ಕಿರಾತ ರತ್ನಾಕರ

 ವಾಲ್ಮೀಕಿಯಾದ ಕಿರಾತ ರತ್ನಾಕರ





ವೈವಿಧ್ಯ ಕಿರಾತ ಅಂದರೆ ಬೇಡ ಜಾತಿಯ ರತ್ನಾಕರ ಚ್ಯವನ ಋಷಿಯ ಮಗನಾಗಿದ್ದ. ಗಂಗಾ ತೀರದ ಕ್ರೌಂಚವೆಂಬ ದಟ್ಟಾರಣ್ಯದಲ್ಲಿ ತನ್ನ ಕುಟುಂಬದವರೊಂದಿಗೆ ಇವನು ವಾಸವಾಗಿದ್ದ. ಈ ಅರಣ್ಯದಲ್ಲಿ ಪ್ರಾಣಿ ಪಕ್ಷಿಗಳ ಬೇಟೆಯಾಡುವುದು ದಾರಿಹೋಕರನ್ನು ಕಾಡಿಸಿ ಪೀಡಿಸಿ ಅವರ ತಲೆ ಹೊಡೆದು ಅವರಲ್ಲಿದ್ದುದೆಲ್ಲವನ್ನು ಸುಲಿಗೆ ಮಾಡುವುದು, ವಿರೋಧಿಸಿದರೇ ಹತ್ಯೆ ಮಾಡುವುದು ಈ ಬೇಡನ ನಿತ್ಯದ ಕಾರ್ಯಕ್ರಮಾವಾಗಿತ್ತು. ಇವನ ಧೈರ್ಯ ಸಾಹಸ ಎಂತವರ ಗುಂಡುಗೆಯನ್ನು ಗಡಗಡ ನಡುಗುವಂತೆ ಮಾಡಿತ್ತು. ಈ ಕಾಯಕದಿಂದಲೇ ತನ್ನ ಸಂಸಾರದ ಬಂಡಿ ಸುಖವಾಗಿ ಸಾಗುತಿತ್ತು.

ಅದೊಂದು ದಿನ ಈ ಕಿರಾತ ಬೇಟೆಗಾಗಿ ಕಾಡಿಗೆ ಹೊರಟನು. ಅರಣ್ಯದಲ್ಲೆಲ್ಲ ತಿರುಗಾಡಿದರೂ ಒಂದು ಬೇಟೆಯೂ ಇವನಿಗೆ ಸಿಗಲಿಲ್ಲ. ಅಗ ದಟ್ಟಾರಣ್ಯದ ದಾರಿಯಲ್ಲಿ ಸಪ್ತರ್ಷಿಗಳ ಗುಂಪಿನ ದರ್ಶನವಾಯಿತು. ಅವರಲ್ಲಿರುವ ವಸ್ತುಗಳನ್ನು ಕೊಡುವಂತೆ ಪೀಡಿಸಿದ ಕಿರಾತ. ನೋಡು ಕಿರಾತ ಕುಟುಂಬದ ಪೋಷಣೆ ಮಾಡುವುದು ಗೃಹಸ್ಥನ ಕರ್ತವ್ಯವೆಂಬುದೇನೋ ನಿಜ.

ಆದರೆ ಮುಗ್ದ ಜನರನ್ನು ಹಿಂಸಿಸಿ ಅವರ ಕೊಲೆ ಸುಲಿಗೆ ಮಾಡಿ ನೀನು ದ್ರವ್ಯಾರ್ಜನೆ ಮಾಡುವುದು ಮಹಾ ಪಾಪಕರ ಕೆಲಸ ಪರರನ್ನು ಹಿಂಸಿಸದೇ ಸತ್ಯದ ಹಾದಿಯಲ್ಲಿ ನಡೆದು ದುಡಿತದ ಶ್ರಮದಿಂದ ಉಪ ಜೀವನ ನಡೆಸಿದರೆ ನಿನಗೆ ಪುಣ್ಯ ಪ್ರಾಪ್ತಿಯಾಗುತ್ತದೆ. ಕೆಟ್ಟ ಕೆಲಸ ಮಾಡುವುದನ್ನು ಬಿಟ್ಟು ಪುಣ್ಯದ ಹಾದಿಯಲ್ಲಿ ಇಂದಿನಿಂದಲೇ ನೀನು ಸಾಗು. ನಿನ್ನ ತಂದೆ ತಾಯಿ ಹೆಂಡತಿ ಮಕ್ಕಳು ಇವರ್ಯಾರೂ ನಿನ್ನ ಪಾಪದಲ್ಲಿ ಪಾಲುದಾರರಾಗುವುದಿಲ್ಲ ಎಂದು ಸಪ್ತರ್ಷಿಗಳು ಬುದ್ದಿವಾದ ಹೇಳಿದರು. ನಮ್ಮ ಬಳಿ ಪವಿತ್ರಗೊಳಿಸುವ ರಾಮನಾಮವಿದೆ. ಈ ರಾಮನಾಮ-ತೀರ್ಥಗಳು, ಬೆಳ್ಳಿ-ಬಂಗಾರದ ಒಡವೆಗಳಲ್ಲಿ . ನಿನ್ನ ಪಾಪದ ರಾಶಿಯನ್ನು ನಾಶ ಮಾಡುವಂತಹ ಅಮೋಘ ಸಾಧನಗಳಿವು. ಇವುಗಳನ್ನು ನಮ್ಮಿಂದ ಸ್ವೀಕರಿಸಿದರೇ ಮಾತ್ರ ನೀನು ಪಾಪದಿಂದ ಮುಕ್ತಿ ಹೊಂದಿ ಉದ್ದಾರವಾಗುವೆ. ಈಗ ನೀನು ಪಕ್ಕದ ಗಂಗೆಯಲ್ಲಿ ಮಿಂದು ಬಾ ಹೋಗು ಎಂದರು ಸಪ್ತರ್ಷಿಗಳು. ಭಕ್ತಿ ಭಾವದಿಂದ ಸಪ್ತರ್ಷಿಗಳ ಸ್ಮರಣೆ ಮಾಡುತ್ತಾ ಗಂಗೆ ಕಡೆಗೆ ಕಿರಾತನಿಗೆ ಕಮಂಡಲದೊಲಗಿನ ತೀರ್ಥ ಕೊಟ್ಟು ಪಾವನಕರವಾದ ರಾಮನಾಮವನ್ನು ಉಪದೇಶಿಸಿದರು.

ನೋಡು ಕಿರಾತ ನೀನು ಪಾಪವನ್ನು ನಾಶಗೊಳಿಸುವಂಥ ಪಾವನಕರ ರಾಮನಾಮವನ್ನು ಜಪಿಸುತ್ತ ಕುಳಿತುಕೋ. ಮನಸ್ಸನ್ನು ಅತ್ತಿತ್ತ ಹರಿದಾಡಗೊಡಗಬೇಡ. ತಂದೆ-ತಾಯಿ, ಹೆಂಡತಿ-ಮಕ್ಕಳ ವ್ಯಾಮೋಹಕ್ಕೆ ಒಳಗಾಗಬೇಡ. ನೀನು ನಮ್ಮಂತೆ ರಾಮನಾಮದ ತಪಸ್ಸನ್ನಾಚರಿಸಿದರೆ ನಿನ್ನ ಪಾಪರಾಶಿಯು ನಾಶವಾಗಿ ನಮ್ಮಂತೆ ತಪಸ್ವಿಯಾಗುವೆ. ಇವರ ಉಪದೇಶ, ಆಶೀರ್ವಾದ ಪಡೆದು ಕಿರಾತ ಹರ್ಷಿತನಾದ ಅಲ್ಲಿಯೇ ಮರದಡಿಯಲ್ಲಿ ಕುಳಿತು ಏಕಚಿತ್ತದಿಂದ ರಾಮ-ರಾಮ ಎಂದು ಪರಮಾತ್ಮನ ನಾಮಸ್ಮರಣೆ ಮಾಡತೊಡಗಿದನು.

ಹಗಲು ರಾತ್ರಿ ಕೆವಲ ರಾಮನಾಮ ಜಪದಲ್ಲಿ ನಿರತನಾದ ಕಿರಾತ ಧ್ಯಾನದಲ್ಲಿ ಮೈಮರೆತ ಇವನ ಮೇಲೆ ದೊಡ್ಡ ಹುತ್ತವೇ ಬೆಳೆಯಿತು. ಆನೇಕ ವರ್ಷಗಳ ನಂತರ ಸಪ್ತರ್ಷಿಗಳು ಮತ್ತೇ ಅದೇ ಅರಣ್ಯದ ಮಾರ್ಗದಲ್ಲಿಯೇ ಬಂದಾಗ ಹಿಂದೆ ತಾವು ಉಪದೇಶಿಸಿದ್ದ ಕಿರಾತನ (ಬೇಡ) ನೆನಪಾಯಿತು. ಸಪ್ತರ್ಷಿಗಳು ಏ ಕಿರಾತ ಎಂದು ಜೋರಗಿ ಕೂಗಿದರು. ಇವರ ಕೂಗನ್ನು ಕೇಳಿ ಧ್ಯಾನದಿಂದ ಎಚ್ಚರಗೊಂಡ ಕಿರಾತ ಹುತ್ತವನ್ನು ಒಡೆದುಕೊಂಡು ಹೊರ ಬಂದನು. ಇವನನ್ನು ಕಂಡ ಸಪ್ತರ್ಷಿಗಳು ಹರ್ಷಗೊಂಡು ನಿಂತು ಕೈಗಳನ್ನೆತ್ತಿ ಆಶೀರ್ವದಿಸಿದರು. ಕಿರಾತನು ಅವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿ ಕೈ ಜೋಡಿಸಿ ಪ್ರಾರ್ಥಿಸತೊಡಗಿದನು. ಸಪ್ತರ್ಷಿಗಳು ಪರಮಾನಂದದಿಂದ ನೀನು ಮೈಮೇಲೆ ವಲ್ಮೀಕ ಬೆಳೆಯುವವರೆಗೂ ತಪಶ್ಚರ್ಯ ಮಾಡಿದ್ದರಿಂದ ನಿನಗೆ ಲೋಕದಲ್ಲಿ ವಾಲ್ಮೀಕಿ ಎಂಬ ಹೆಸರಿನಿಂದ ನಾಮಕರಣ ಮಾಡಿರುವೆವು, ನಿನ್ನ ಪರ್ವತಪ್ರಾಯವದ ಪಾಪರಾಶಿಯೆಲ್ಲವೂ ರಾಮಮಂತ್ರ ಜಪದಿಂದ ನಾಶವಾಗಿ ಅಮೋಘವಾದ ಪುಣ್ಯ ಸಂಚಯ ಮಾಡಿಕೊಂಡಿರುವೆ ನೀನು ಪರಮಜ್ಞಾನಿಯಾದ ಮಹರ್ಷಿಯಾಗುವೆ. ನಿನ್ನಿಂದ ಲೋಕಕಲ್ಯಾಣವಾದ ಕಾರ್ಯವಾಗಲಿ. ವಾಲ್ಮೀಕಿ ಮಹರ್ಷಿಯೇ ನೀನು ವಿಧಿವಸದಿಂದ ಕಿರಾತನಾಗಿ ಜನಿಸಿ ಅದೇ ಸಂಸ್ಕಾರದಿಂದ ಕುಕರ್ಮವನ್ನಾಚರಿಸಿದೆ. ಅದರೆ ಪರಿಪಕ್ವ ಕಾವೊದಗಿದೊಡನೆಯೇ ನಿನಗೆ ನಮ್ಮ ದರ್ಶನವಾಯಿತು. ನೀನು ವಿದ್ಯಾದಾನ ಮಾಡು ಮುಂದೆ ನಿನಗೆ ನಾರದ ಮಹರ್ಷಿಗಳು ಭೇಟಿಯಾಗುವರು ಅವರ ಆಜ್ಞೆಯಂತೆ ನೀನು ನಡೆಯಬೇಕು ಎಂದು ಆಶೀರ್ವದಿಸಿದರು. ಸಪ್ತರ್ಷಿಗಳ ಆಶೀರ್ವಚನದಿಂದ ವಾಲ್ಮೀಕಿ ಋಷಿಯು ಸಂತುಷ್ಠನಾದನು. ಭಕ್ತಿ ವಿನಯದಿಂದ ಸಪ್ತರ್ಷಿಗಳು ಕುರಿತು ಮಹಾತ್ಮರೇ ನಿಮ್ಮಂದಲೇ ನಾನು ಪುನರ್ಜನ್ಮ ಪಡೆದಿರುವೆ ದುಷ್ಟನಾಗಿದ್ದ ನನ್ನನ್ನು ನೀವು ಉದ್ದರಿಸಿದಿರಿ ನಿಮ್ಮ ಉಪಕರವನ್ನು ನಾನೆಂದು ಮರೆಯಲಾರೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

ವಾಲ್ಮೀಕಿ ಮಹರ್ಷಿಯೇ ನಾವು ನಿಮಿತ್ತ ಮಾತ್ರರು. ನಿನ್ನನ್ನು ನೀನೇ ಉದ್ದರಿಸಿಕೊಂಡೆ ಏಕನಿಷ್ಠಿಯಿಂದ ರಾಮ ಮಂತ್ರ ಪುರಸ್ಚರನ ಮಾಡಿ ಪಾವನನಾದೆ, ಸರ್ವಸಂಗ ಪರಿತ್ಯಾಗ ಮಾಡಿ ಮನೋನಿಗ್ರಹಗಳಿಂದ ಯೋಗರುಢನಾಗಿ ಮೈಮೇಲೆ ವಲ್ಮೀಕಿ (ಹುತ್ತ) ಬೆಳೆಯುವವರೆಗೆ ಮಾಡಿದ ತಪಸ್ಸು ಸಾಮನ್ಯವಾದುದಲ್ಲ ನಿನ್ನ ನಿಷ್ಠೆಯೇ ನಿನ್ನನ್ನು ಉದ್ದರಿಸಿದೆ. ನೀನು ಪುರಸ್ಚರಣ ಮಾಡಿದ ರಾಮಮಂತ್ರದ ಮಹಿಮೆಯನ್ನು ಚೆನ್ನಾಗಿ ಅರಿತಿರುವೆ ಮುಂದೆ ದೇವರ್ಷಿ ನಾರದರು ಮಹಾಮಹಿಮನಾದ ರಾಮನ ಚರಿತ್ರೆಯನ್ನು ನಿನಗೆ ತಿಳಿಸುವರು ಶ್ರೀ ರಾಮ ಚರಿತೆಯ ಶ್ರವಣದಿಂದ ನಿನಗೆ ಒಳ್ಳೆಯ ಪ್ರಯೋಜನವಾಗುವುದೆಂದು ಶುಭಾಶೀರ್ವದಿಸಿದರು.

ಸಪ್ತಷಿಗಳ ಅದೇಶದಂತೆ ನಾರದಮುನಿಗಳು ವಾಲ್ಮಿಕಿ ಮಹರ್ಷಿಯ ಆಶ್ರಮಕ್ಕೆ ಭೇಟಿ ಕೊಟ್ಟರು. ಸಜ್ಜನರ ರಕ್ಷಣೆಗೆ ಮತ್ತು ದುರ್ಜನರ ನಾಶಕ್ಕಾಗಿ ಈ ಭೂಮಿಯಲ್ಲಿ ಅವತರಿಸಿದ ಶ್ರೀರಾಮ ಚರಿತ್ರೆಯನ್ನು ಬರೆಯುವಂತೆ ನಾರದಮುನಿಗಳು ತಿಳಿಸಿದರು. ಒಮ್ಮೆ ಶಿಷ್ಯನೊಂದಿಗೆ ಗಂಗಾ ಸ್ನಾನಕ್ಕೆ ಹೊರಟ ವಾಲ್ಮೀಕಿಗೆ ಸರಸಸಲ್ಲಾಪದಲ್ಲಿದ್ದ ಕ್ರೌಂಚ ಪಕ್ಷಿ ದಂಪತಿಯನ್ನು ನೋಡಿದರು. ಅವರ ಕಣ್ಣಿದುರಿಗೆ ಬೇಡನ ಬಾಣಕ್ಕೆ ಬಲಿಯಾದ ಗಂಡು ಕ್ರೌಂಚ ಪಕ್ಷಿ ಕಂಡು ಮರುಗಿದ ವಾಲ್ಮೀಕಿ ಈ ಪಕ್ಷಿಯ ಸಾವಿಗೆ ಕಾರಣನಾದ ಬೇಡನಿಗೆ ಎಂದು ಏಳಿಗೆಯಾಗದಿರಲೆಂದು ಶಾಪ ಕೊಟ್ಟರು. ನಂತರ ಬೇಡ ತನ್ನ ಕಾಯಕದ ಬಗ್ಗೆ ವಾಲ್ಮೀಕಿಗೆ ಮನವರಿಕೆ ಮಾಡಿಕೊಟ್ಟಾಗ ಸತ್ಯ ತಿಳಿಯದೇ ಶಾಪ ಕೊಟ್ಟದ್ದು ತಪ್ಪಾಯಿತೆಂದು ವಾಲ್ಮೀಕಿ ಋಷಿಯೂ ಪಶ್ಚಾತ್ತಾಪ ಪಟ್ಟು ಮನಶಾಂತಿಗಾಗಿ ಪರಮಾತ್ಮನ ದರ್ಶನಕ್ಕೆ ತಪಶ್ಚರ್ಯ ಮಾಡಿದರು. ತಪಸ್ಸಿಗೆ ಲೋಕಕರ್ತನಾದ ಬ್ರಹ್ಮದೇವನು ಮೆಚ್ಚಿ ಇವನ ತಪೋವನಕ್ಕೆ ದರ್ಶನವಿತ್ತನು.

ಆಗ ಪರಮಾತ್ಮನು ವಾಲ್ಮೀಕಿಯನ್ನು ಕುರಿತು ಪುಣ್ಯ ಶ್ಲೋಕಿಯಾದ ಮಹರ್ಷಿಯೇ ನಿನ್ನಿಂದ ಲೋಕಕಲ್ಯಾಣ ಮಹಾಕಾರ್ಯವು ಜರುಗಬೇಕಾಗಿದೆ. ಅದಕ್ಕಾಗಿಯೇ ಕ್ರೌಂಚವಧೆಯ ಘಟನೆಯು ನಿನ್ನ ಕಣ್ಮಂದೆ ನಡೆಯಿತು. ದೇವರ್ಷಿ ನಾರದರು ಕೇಳಿದ ಶ್ರೀರಾಮ ಚರಿತೆಯು ನಿನಗೆ ಪೂರ್ಣವಾಗಿ ಕರಗತವಾಗಿದೆ. ಈ ಪುಣ್ಯಪುರುಷನ ಚರಿತ್ರೆಯನ್ನು ನೀನು ಕಾವ್ಯರೂಪದಲ್ಲಿ ಬರೆಯಬೇಕು ಪೃಥ್ವಿಯಲ್ಲಿ ಎಲ್ಲಿಯವರೆಗೆ ಗಿರಿಶಿಖರಗಳು, ನದಿ ಸಮುದ್ರಗಳಿರುವವೋ ಅಲ್ಲಿಯವರೆಗೆ ಈ ಲೋಕದಲ್ಲಿ ರಾಮಾಯನ ಕಥೆಯು ಪ್ರಚಲಿತವಾಗಿರುತ್ತದೆ. ನಿನ್ನ ಶ್ರೀರಾಮಚರಿತ ಮಹಾಕಾವ್ಯದ ದಿವ್ಯಕೃತಿಯಿಂದ ಲೋಕೋಪಕಾರವಾಗುವುದು. ನಿನ್ನ ಕಾವ್ಯವು ತನ್ನ ಘನತೆಯಿಂದ ವೇದ ಪಟ್ಟಕ್ಕೇರುವುದು, ಕಾವ್ಯ ರಚನೆಯ ಕಾರ್ಯದಲ್ಲಿ ನೀನೇ ಮೊದಲಿಗನಾಗುವುದರಿಂದ ಆದಿಕವಿ ಎಂಬ ಖ್ಯಾತಿ ಕೂಡ ನಿನಗೆ ಸಲ್ಲತ್ತದೆ ಎಂದ ಬ್ರಹ್ಮದೇವ ವಾಲ್ಮೀಕಿ ಮಹರ್ಷಿಯೇ ಉಪದೇಶ ಮಾಡಿ ಕಣ್ಮರೆ ಹೊಂದಿದನು. ಮರು ಕ್ಷಣವೇ ಮಹರ್ಷಿಯಲ್ಲಿ ರಾಮಾಯಣ ಕಾವ್ಯ ರಚನೆಯ ಸ್ಪೂರ್ತಿಯ ಉದಯವಾಯಿತು.

ವಾಲ್ಮೀಕಿ ಮಹರ್ಷಿ ಪಾವನಕರವಾದ ಶ್ರೀರಾಮಚರಿತೆಯನ್ನು ಕಾವ್ಯರೂಪದಲ್ಲಿ ಶ್ರೀರಾಮ ಜನನದಿಂದ ಹಿಡಿದು ಅವನ ಪಟ್ಟಾಭೀಷೇಕದವರೆಗೆ ಬಾಲಕಾಂಡ, ಅಯೋಧ್ಯಾಕಾಂಡ, ಅರಣ್ಯಕಾಂಡ, ಕಿಷ್ಕಿಂಧಾಕಾಂಡ, ಸುಂದರಕಾಂಡ, ಯುದ್ದಕಾಂಡಗಳೆಂಬ ಆರು ಕಾಂಡಗಲಲ್ಲಿ ಶ್ರೀರಾಮ ಚರಿತೆಯನ್ನು ರಚಿಸಿ ಹಾಡಿದ್ದಾನೆ. ಇದನ್ನೇ ನಾವು ವಾಲ್ಮೀಕಿ ವಿರಚಿರ ರಾಮಾಯಣವೆಮದು ಕರೆಯುತ್ತೇವೆ.

ಆದಿಕವಿ ಮಹರ್ಷಿ ವಾಲ್ಮೀಕಿ ಕೇವಲ ವಾಲ್ಮೀಕಿ ನಾಯಕ ಜನಾಂಗದ ಸ್ವತ್ತಲ್ಲ. ಅವರೊಬ್ಬ ಪುಣ್ಯಪುರುಷರಾಗಿದ್ದಾರೆ. ಬೇಟೆಗಾರ, ದರೋಡೆಕೋರ ಪರಾವಲಂಬಿಯಾಗಿದ್ದ ಕಿರಾತ ರತ್ನಾಕರ ಸಪ್ತರ್ಷಿಗಳ ಉಪದೇಶದಿಂದ ಜ್ಞಾನೋದಯವಾಗಿ ರಾಮನಾಮ ಜಪಿಸಿ ಮಹರ್ಷಿ ವಾಲ್ಮೀಕಿಯಾಗಿ ಜಗತ್ಪ್ರಸಿದ್ದ ರಾಮಾಯಾಣ ರಚಿಸಿ ಆದಿಕವಿಯಾದ. ಇವರ ರಾಮಾಯಣ ಮಹಾಕಾವ್ಯ ಇಡೀ ಜಗತ್ತಿಗೆ ದಾರಿದೀಪವಾಗಿದೆ ಎವರ ವಿಚಾರಧಾರೆಗಳು ಇಂದಿನ ತಪ್ಪು ದಾರಿ ತುಳಿಉವ ಪ್ರತಿಯೊಬ್ಬರಿಗೆ ದಾರಿದೀಪವಾಗಬೇಕು. ಇವರ ಚಿಂತನೆಗಳು ಜನ ಸಾಮಾನ್ಯರ ಮನ ತಲುಪಿ ಸನ್ಮಾರ್ಗದಲ್ಲಿ ನಡೆಯಬೇಕು.

ಸಮಾಜದ ಕೆಳ ವರ್ಗದಲ್ಲಿ ಜನಿಸಿದ ಎಷ್ಟೋ ವ್ಯಕ್ತಿಗಳು ಅವರ ಸಾಧನೆಯಿಂದ ಉತ್ತುಂಗಕ್ಕೇರಿ ಇತಿಹಾಸದ ಪುಟಗಳಲ್ಲಿ ಅಜರಾಮರರಾಗಿದ್ದಾರೆ. ಯಾವುದೇ ವ್ಯಕ್ತಿಯನ್ನು ಅವನ ಹುಟ್ಟಿನ ಜಾತಿಯಿಂದ, ಉದ್ಯೋಗದಿಂದ, ನಡುವಳಿಕೆಯಿಂದ, ಪರಿಸರದಿಂದ, ಅಳೆಯುವುದು ಕಷ್ಟವೆನಿಸುತ್ತದೆ. ಯಾವ ಜಾತಿಯವನೆ ಇರಲಿ, ಅವನಿಗೆ ಸತ್ಯದ ಹಾದಿಯಲ್ಲಿ ಕೊಂಡೊಯ್ಯುವ ಉತ್ತಮ ಸಂಸ್ಕಾರ, ಒಳ್ಳೆಯ ಪರಿಸರ, ವಿದ್ಯೆ ಬುದ್ದಿ, ಗುರು ದೀಕ್ಷೆ, ಮಾರ್ಗದರ್ಶನ ಸಿಕ್ಕಿದ್ದೇಯಾದರೆ ಅವನು ಏನೆಲ್ಲ ಸಾಧಿಸಿ ತೋರಿಸುವುದರೊಂದಿಗೆ ಜನಮನದಲ್ಲಿ ಅಚ್ಚಳಿಯದೇ ಶಾಶ್ವತವಾಗಿ ಉಳಿಯಬಲ್ಲ ಎನ್ನುವುದಕ್ಕೆ ಬೇಡರ ಜಾತಿಯಲ್ಲಿ ಹುಟ್ಟಿದ ಕಿರಾತ ರತ್ನಾಕರ ಅಂದರೆ ವಾಲ್ಮೀಕಿ ಮಹರ್ಷಿಯೇ ನಿದರ್ಶನರಾಗಿದ್ದಾರೆ.

ಪೌರಾಣಿಕ ಕಥೆಗಳು – ರತ್ನಾಕರನು ವಾಲ್ಮೀಕಿ ಆಗಿ ರೂಪಾಂತರಗೊಂಡ ಕಥೆ





ಪವಿತ್ರ ಮಹಾಕಾವ್ಯವಾದ ರಾಮಾಯಣದ ಲೇಖಕ, ವಾಲ್ಮೀಕಿ. ಇವರು ಮಹರ್ಷಿಯಾದ ಕಥೆ, ಇವರೇ ರಚಿಸಿದ ಮಹಾಕಾವ್ಯದಷ್ಟೆ ಕುತೂಹಲಕಾರಿ ಆಗಿದೆ.

ವಾಲ್ಮೀಕಿ, ಪ್ರಚೇತಸ ಎಂಬ ಋಷಿಯ ಮಗನಾಗಿ ಜನಿಸಿದರು. ಆಗ ಆ ಬಾಲಕನ ಹೆಸರು ರತ್ನಾಕರ ಎಂದಾಗಿತ್ತು. ಈ ಚಿಕ್ಕ ಹುಡುಗನಾದ ರತ್ನಾಕರ ಒಮ್ಮೆ ದಟ್ಟ ಅರಣ್ಯದಲ್ಲಿ ಹೊಕ್ಕಿ ದಾರಿ ತಪ್ಪಿದನು. ಒಬ್ಬ ಬೇಟೆಗಾರ ಈ ಬಾಲಕನನ್ನು ಕಂಡು ತನ್ನಡಿ ಆಶ್ರಯ ನೀಡಿದನು. ಸಾಕು ತಂದೆ-ತಾಯಿಯ ಪ್ರೀತಿ ಮತ್ತು ವಾತ್ಸಲ್ಯದಲ್ಲಿ, ರತ್ನಾಕರ ಶೀಘ್ರದಲ್ಲೇ ತನ್ನ ಹೆತ್ತವರನ್ನು ಮರೆತುಹೋದ. ನಂತರ ರತ್ನಾಕರನು ಅತ್ಯುತ್ತಮ ಬೇಟೆಗಾರನಾಗಿ ಬೆಳೆದನು. ಮದುವೆಯಾಗಬಲ್ಲ ವಯಸ್ಸು ಸಮೀಪಿಸುತ್ತಿದ್ದಂತೆ, ಅಲ್ಲೇ ಒಂದು ಬೇಟೆಗಾರರ ಕುಟುಂಬದ ಸುಂದರ ಯುವತಿಯೊಂದಿಗೆ ವಿವಾಹವಾದನು.

ರತ್ನಾಕರನ ಕುಟುಂಬ ದೊಡ್ಡದಾಗಿ ಬೆಳೆಯುತ್ತಾ ಹೋದಂತೆ ಎಲ್ಲರಿಗೂ ಆಹಾರ ಒದಗಿಸುವುದು ಆತನಿಗೆ ಕಷ್ಟವಾಯಿತು. ಬೇಸತ್ತು ಆತನು ಅಂತಿಮವಾಗಿ ಕಾಡಿನಲ್ಲಿ ಹಾದುಹೋಗುವ ಜನರನ್ನು ಲೂಟಿ ಮಾಡಿ, ಬೆಲೆಬಾಳುವ ವಸ್ತುಗಳನ್ನು ದರೋಡೆ ಮಾಡಲು ಆರಂಭಿಸಿದ.

ಒಂದು ದಿನ, ನಾರದ ಮುನಿ ಈ ಕಾಡಿನಲ್ಲಿ ಹಾದು ಹೋಗುವಾಗ ರತ್ನಾಕರನ ದಾಳಿಗೆ ಒಳಪಟ್ಟರು. ನಾರದ ಭಯ ಪಡದೆ, ತನ್ನ ವೀಣೆ ಹಿಡಿದು ದೇವರ ಗುಣಗಾನ ಮಾಡಿ ಹಾಡುತ್ತಿರುವುದನ್ನು ಕಂಡು ಒಂದು ಗೋಚರವಾದ ಪರಿವರ್ತನೆ ರತ್ನಾಕರನಲ್ಲಿ ಆಗ ತೊಡಗಿತು. ನಾರದ ಅವರಿಗೆ ‘ರಾಮ’ ನಾಮದ ಪವಿತ್ರ ಹೆಸರು ಕಲಿಸಿದರು. ಅವರು ಮರಳಿ ಬರುವ ತನಕ ಆ ಹೆಸರನ್ನು ಪಠಣ ಮಾಡುತ್ತ ಧ್ಯಾನ ಮಾಡುವಂತೆ ಕೇಳಿಕೊಂಡರು. ರತ್ನಾಕರ ಇದನ್ನು ಪಾಲಿಸಿದರು. ತನ್ನ ಇಡೀ ದೇಹ ಹುತ್ತದೊಳಗೆ ಮುಳುಗಿದರೂ ರತ್ನಾಕರ ಧ್ಯಾನದಲ್ಲಿ ತಲ್ಲೀನನಾಗಿದ್ದ. ವರ್ಷಗಳು ಕಳೆದ ನಂತರ ನಾರದ ಮುನಿ ಮರಳಿದರು. ಆತನ ದೇಹದ ಸುತ್ತಾ ಇದ್ದ ಹುತ್ತ ತೆಗೆದುಹಾಕಿದರು. ಆತನ ತಪಸ್ಸನ್ನು ಮೆಚ್ಚಿದ ಬ್ರಹ್ಮರ್ಷಿ, ಗೌರವಾರ್ಥವಾಗಿ ದಯಪಾಲಿಸಲ್ಪಟ್ಟ ಹೆಸರೇ, ವಾಲ್ಮೀಕಿ. ಇದರ ಮೂಲ ‘ವಾಲ್ಮೀಕ’ವಾಗಿದ್ದು, ಅದರ ಅರ್ಥ ಹುತ್ತ ಎಂದಾಗಿದೆ.

ಬ್ರಹ್ಮರ್ಷಿ ವಾಲ್ಮೀಕಿ ನಂತರ ಗಂಗಾ ನದಿಯ ತೀರದಲ್ಲಿ ತಮ್ಮ ಆಶ್ರಮವನ್ನು ನಿರ್ಮಿಸಿದರು. ಹಾಗೆ ಒಂದು ದಿನ ನಾರದ ಮುನಿಗಳು ಅವರ ಆಶ್ರಮಕ್ಕೆ ಭೇಟಿ ನೀಡಿ ಅವರಿಗೆ ಶ್ರೀ ರಾಮನ ಕಥೆಯನ್ನು ತಿಳಿಸಿದರು. ನಂತರ, ವಾಲ್ಮೀಕಿ ಬ್ರಹ್ಮ ದೇವನಿಂದ ದಿವ್ಯ ದೃಷ್ಟಿ ಪಡೆದು, ರಾಮಾಯಣದ ಕಥೆಯನ್ನು ತಿಳಿಸತೊಡಗಿದರು, ಇದನ್ನು ಪರಿಪಾಲಿಸುತ್ತ ವಾಲ್ಮೀಕಿ ಪ್ರೇರಣೆ ಪಡೆದು ಸುಲಭವಾಗಿ ಶ್ಲೋಕಗಳನ್ನು ರಚಿಸುತ್ತ, ನಮಗೆಲ್ಲಾ ರಾಮಾಯಣವನ್ನು ನೀಡಿದರು.

ವಿಶ್ವ ಶಿಕ್ಷಕರ ದಿನಾಚರಣೆ

 


1994ರಿಂದ ಅಕ್ಟೋಬರ್‌ 5 ರಂದು ವಿಶ್ವ ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ. ಶಿಕ್ಷಕರಿಗೆ ಬೆಂಬಲ ನೀಡುವುದೇ ಇದರ ಹಿಂದಿನ ಉದ್ದೇಶ ಹಾಗೂ ಭವಿಷ್ಯದ ಪೀಳಿಗೆಗೆ ಕೂಡ ಶಿಕ್ಷಕರ ಅಗತ್ಯವಿರುವುದನ್ನು ತಿಳಿಯಪಡಿಸುವುದಕ್ಕಾಗಿ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ.

ಯುನೆಸ್ಕೋ ಪ್ರಕಾರ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕೊಟ್ಟು ಅವರ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಶಿಕ್ಷಕರ ಈ ಸೇವೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದೇ ವಿಶ್ವ ಶಿಕ್ಷಕರ ದಿನದ ಆಚರಣೆಯ ಉದ್ದೇಶವಾಗಿದೆ. ವಿಶ್ವ ಶಿಕ್ಷಕರ ದಿನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲಾಗುತ್ತದೆ ಹಾಗೂ ಜಗತ್ತಿನಾದ್ಯಂತ ಆಚರಿಸಲಾಗುತ್ತದೆ.

ವಿಶ್ವ ಶಿಕ್ಷಕರ ದಿನಾಚರಣೆಯ ಬಗ್ಗೆ ಎಜುಕೇಷನ್‌ ಇಂಟರ್‌ನ್ಯಾಷನಲ್‌ಗೆ ಬಲವಾದ ನಂಬಿಕೆ ಇದೆ. ಶಿಕ್ಷಕರ ದಿನವು ಅಂತಾರಾಷ್ಟ್ರೀಯಮಟ್ಟದಲ್ಲಿ ಗುರುತಿಸಲ್ಪಡಬೇಕು ಹಾಗೂ ಜಗತ್ತಿನಾದ್ಯಂತ ಆಚರಣೆ ಮಾಡಬೇಕೆಂಬುದು ಎಜುಕೇಷನ್‌ ಇಂಟರ್‌ನ್ಯಾಷನಲ್‌ ಬಯಕೆಯಾಗಿದೆ.

ಭವಿಷ್ಯದ ಪೀಳಿಗೆಗೆ ಶಿಕ್ಷಣ ನೀಡುವ ಜವಾಬ್ದಾರಿಯು ಸಾಮಾನ್ಯವಾದುದಲ್ಲ. ಆದ್ದರಿಂದ ಇಂಥ ಜವಾಬ್ದಾರಿಯುತ ಕೆಲಸವನ್ನು ಮಾಡುತ್ತಿರುವ ಶಿಕ್ಷಕರನ್ನು ವಿಶ್ವ ಶಿಕ್ಷಕರ ದಿನಾಚರಣೆಯಂದು ಮಾತ್ರ ಸ್ಮರಿಸುವುದಲ್ಲ. ವರ್ಷ ಪೂರ್ತಿ ನೆನಪಿಸಿಕೊಳ್ಳಬೇಕು.

ಕರ್ನಾಟದ ಏಕೀಕರಣ

 

ಮೈಸೂರು ಕರ್ನಾಟಕವಾದ ಕಥೆ
ಇವತ್ತು ಯಾವುದನ್ನು ನಾವು ವಿಶಾಲ ಕರ್ನಾಟಕ, ಅಖಂಡ ಕರ್ನಾಟಕ ಎಂದು ಕರೆಯುತ್ತೇವೆಯೋ ಅದು ಆರು ದಶಕಗಳ ಹಿಂದೆ ಸುಮಾರು 20 ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿತ್ತು. ಕನ್ನಡಿಗರ ಒಂದು ಪ್ರತ್ಯೇಕ ರಾಜ್ಯವೆಂಬುದು ಅಸ್ತಿತ್ವದಲ್ಲೇ ಇರಲಿಲ್ಲ ಎಂದರೆ ಅಚ್ಚರಿಯಾಗುತ್ತಿದೆಯೇ? ಸ್ವಂತ ರಾಜ್ಯ ಹೊಂದುವ ಕನಸು ಮೊಳೆತು, ಚಿಗುರಿ, ಹಬ್ಬಿ, ಹೂವಾಗಿ, ಕಾಯಾಗಿ, ಹಣ್ಣಾದ ಘಟನೆಗಳ ಹಿಂದಿನ ಸಂಕ್ಷಿಪ್ತ ಚಿತ್ರಣ ಇಲ್ಲಿದೆ:

ಅದೊಂದು ಸಮೃದ್ಧ ಕನಸು
ಕನ್ನಡ ಮಾತನಾಡುವ ಜನರೆಲ್ಲ ಒಂದೇ ಪ್ರದೇಶಕ್ಕೆ ಸೇರಬೇಕೆಂಬ ಕನಸು ಮೊಳೆತಾಗ ಇದು ನಮ್ಮ ನೆಲ ಎಂದು ಹೇಳಿಕೊಳ್ಳಲು ಮೈಸೂರು ಸಂಸ್ಥಾನ ಹೊರತುಪಡಿಸಿ ಬೇರೆ ನಿರ್ದಿಷ್ಟ ಪ್ರದೇಶವೇ ಇದ್ದಿಲ್ಲ. ಉಳಿದ ಪ್ರಾಂತ್ಯಗಳ ಆಡಳಿತದಲ್ಲಿ ಕನ್ನಡ, ಕನ್ನಡಿಗರಿಗೆ ಪ್ರಾಧಾನ್ಯತೆ ಇರಲಿಲ್ಲ.

ಈ ಸಂದರ್ಭದಲ್ಲಿ ಕನ್ನಡದ ಪರವಾಗಿ ಕೆಲಸ ಮಾಡಿದ ಕೆಲ ಮಹನೀಯರನ್ನು ನೆನೆಯಲೇಬೇಕು. ಸರ್ ವಾಲ್ಟರ್ ಎಲಿಯಟ್, ಸರ್ ಥಾಮಸ್ ಮನ್ರೋ, ಜಾನ್ ಎ. ಡನ್‌ಲಪ್, ಗ್ರೀನ್ ಹಿಲ್ ಆರ್. ಗ್ರಾಂಟ್, ಡಬ್ಲ್ಯು. ಎ. ರಸೆಲ್, ಜೆ. ಎಫ್. ಫ್ಲೀಟ್‌ರಂತಹ ಬ್ರಿಟಿಷ್ ಅಧಿಕಾರಿಗಳು ಕನ್ನಡ ಕಟ್ಟುವ ಕೆಲಸ ಮಾಡಿದರು. ಅವರಿಗೆ ಕೈ ಜೋಡಿಸಿದ್ದು ಚೆನ್ನಬಸಪ್ಪನವರಂತಹ ಕನ್ನಡಿಗ ಅಧಿಕಾರಿ. ಜೊತೆಗೆ, ರಾ. ಹ. ದೇಶಪಾಂಡೆ, ರೊದ್ದ ಶ್ರೀನಿವಾಸರಾವ್, ಆಲೂರು ವೆಂಕಟರಾವ್ ಮುಂತಾದ ಹಿರಿಯರು ಕನ್ನಡ ಮಾತನಾಡುವ ಜನರೆಲ್ಲರನ್ನೂ ಹೊಂದಿರುವ ಒಂದು ಪ್ರಾಂತ್ಯ ರಚನೆಯಾಗಬೇಕೆಂದು ಕನಸು ಕಂಡರು. 

ಕರ್ನಾಟಕ ಏಕೀಕರಣದ ಕನಸು ಮೊಳೆತಿದ್ದು ಹೀಗೆ. ಜೊತೆಗೆ, ಇಂಥದೊಂದು ಕನಸು ಮೊಳೆಯಲು ಕೆಲ ಐತಿಹಾಸಿಕ ಘಟನೆಗಳೂ ಕಾರಣವಾಗಿವೆ.

1905ರಲ್ಲಿ ಬ್ರಿಟಿಷ್ ಸರ್ಕಾರ ಪ್ರಸ್ತಾಪಿಸಿದ್ದ ಬಂಗಾಳ ರಾಜ್ಯದ ವಿಭಜನೆ. ಇದನ್ನು ಪ್ರತಿಭಟಿಸಿದ ಬಂಗಾಳಿಗಳು 'ವಂಗಭಂಗ' ಎಂದು ದೊಡ್ಡ ಚಳವಳಿಯನ್ನೇ ರೂಪಿಸಿದರು. ಹೋರಾಟ ತೀವ್ರಗೊಂಡಾಗ, ಮಣಿದ ಬ್ರಿಟಿಷ್ ಸರ್ಕಾರ 1912ರಲ್ಲಿ ಬಂಗಾಳವನ್ನು ಪುನಃ ಒಂದು ಮಾಡಿತು. ಕನ್ನಡಿಗರನ್ನು ಒಂದೆಡೆ ಸೇರಿಸುವ ಕನಸು ಹೊತ್ತಿದ್ದವರಿಗೆ ಈ ಘಟನೆ ದೊಡ್ಡ ಪ್ರೇರಣೆಯಾಯಿತು. 

ಕರ್ನಾಟಕ ವಿದ್ಯಾವರ್ಧಕ ಸಂಘ
ಕರ್ನಾಟಕ ರೂಪುಗೊಳ್ಳಲು ಕಾರಣರಾದವರ ಪೈಕಿ ಒಬ್ಬರಾದ ರಾ. ಹ. ದೇಶಪಾಂಡೆ ಹಾಗೂ ಕೆಲವು ಸಮಾನ ಮನಸ್ಕರು ಒಂದೆಡೆ ಸೇರಿದರು. ಕನ್ನಡ ಭಾಷೆಯ ದುಃಸ್ಥಿತಿ ದೂರ ಮಾಡಲೆಂದು 1890ರಲ್ಲೇ ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ಧಾರವಾಡದಲ್ಲಿ ಸ್ಥಾಪಿಸಿದ್ದರು. ಕನ್ನಡದಲ್ಲಿ ಶಿಕ್ಷಣ ಪ್ರಸಾರಕ್ಕೆ ಪ್ರೋತ್ಸಾಹ, ಪ್ರಾಚೀನ ಕನ್ನಡ ಕೃತಿಗಳ ಸಂಪಾದನೆ ಮತ್ತು ಪ್ರಕಟಣೆ, ಕನ್ನಡದಲ್ಲಿ ಸ್ವತಂತ್ರ ಕೃತಿಗಳ ರಚನೆ, ಉತ್ತಮ ಮತ್ತು ಉಪಯುಕ್ತ ಕೃತಿಗಳ ಅನುವಾದ ಹಾಗೂ ಪ್ರಕಟಣೆಗೆ ಪ್ರೋತ್ಸಾಹ, ಗ್ರಂಥ ಭಂಡಾರಗಳ ಸ್ಥಾಪನೆ ಮತ್ತು ನಿರ್ವಹಣೆಗೆ ನೆರವು ನೀಡುವುದು ಈ ಸಂಸ್ಥೆಯ ಮೂಲ ಉದ್ದೇಶವಾಗಿತ್ತು. ಲೇಖಕರನ್ನು ಬೆಳೆಸಿದ ಸಂಘ, ಕನ್ನಡ ಗ್ರಂಥಗಳ ಭಾಷೆಯಲ್ಲಿ ಏಕರೂಪತೆ ಇರಬೇಕೆಂಬ ಕಾರಣದಿಂದ 1907ರ ಜೂನ್ ತಿಂಗಳ ಮೊದಲ ವಾರದಲ್ಲಿ ಧಾರವಾಡದಲ್ಲಿ ಅಖಿಲ ಕರ್ನಾಟಕ ಗ್ರಂಥಕರ್ತರ ಮೊದಲ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿತು.

ಕನ್ನಡ ಸಾಹಿತ್ಯ ಪರಿಷತ್ತು
ನಂತರದ ಸಮ್ಮೇಳನವನ್ನು ಬೆಂಗಳೂರಿನಲ್ಲಿ ನಡೆಸಬೇಕು ಎಂಬ ಪ್ರಯತ್ನದ ಫಲವಾಗಿ 1915ರಲ್ಲಿ ಸ್ಥಾಪನೆಯಾದದ್ದು ಕರ್ನಾಟಕ ಸಾಹಿತ್ಯ ಪರಿಷತ್ತು. ಮುಂದೆ ಇದು ಕನ್ನಡ ಸಾಹಿತ್ಯ ಪರಿಷತ್ತು ಎಂದು ಹೆಸರು ಬದಲಾಯಿಸಿಕೊಂಡಿತು. ಸಾಹಿತ್ಯ ಸಮ್ಮೇಳನಗಳ ಸಂದರ್ಭದಲ್ಲಿ ಕರ್ನಾಟಕ ಏಕೀಕರಣದ ಪರವಾಗಿ ದನಿ ಎತ್ತುವ ಮೂಲಕ ಏಕೀಕರಣದ ಬೇಡಿಕೆಗೆ ಪರಿಷತ್ತು ವೇದಿಕೆ ಕಲ್ಪಿಸಿತು. 

ಕರ್ನಾಟಕ ಕುಲ ಪುರೋಹಿತ
ಎಲ್ಲರಿಗಿಂತ ಪ್ರಮುಖ ಸ್ಥಾನದಲ್ಲಿ ನಿಲ್ಲುವ ವ್ಯಕ್ತಿ ಎಂದರೆ 'ಕರ್ನಾಟಕದ ಗತವೈಭವ' ಗ್ರಂಥ ರಚಿಸಿದ ಕರ್ನಾಟಕ 'ಕುಲ ಪುರೋಹಿತ' ಆಲೂರು ವೆಂಕಟರಾಯರು. ಕರ್ನಾಟಕ ಏಕೀಕರಣದ ಬಗ್ಗೆ ಕನಸು ಕಂಡಿದ್ದಲ್ಲದೇ ಅದರ ಸಾಕಾರಕ್ಕೆ ದುಡಿದ ಹಿರಿಯ ಜೀವ ಇದು. ಆಲೂರು ವೆಂಕಟರಾಯರು, ಗದಿಗೆಯ್ಯ ಹೊನ್ನಾಪುರಮಠ ಮತ್ತು ಕಡಪಾ ರಾಘವೇಂದ್ರರಾಯರು ಸೇರಿ 1916ರಲ್ಲಿ ಸ್ಥಾಪಿಸಿದ 'ಕರ್ನಾಟಕ ಸಭೆ' ಕರ್ನಾಟಕ ಏಕೀಕರಣದ ಬೇಡಿಕೆಗೆ ಇಂಬು ಕೊಟ್ಟಿತು. ರಾಜಕೀಯ ಬೆಂಬಲವನ್ನೂ ಪಡೆದಿದ್ದ ಕರ್ನಾಟಕ ಸಭೆಯು ಏಕೀಕರಣದ ವಿಷಯದಲ್ಲಿ ಹಲವಾರು ಹೋರಾಟಗಳನ್ನು ನಡೆಸಿತು. ಇದರ ಪ್ರೇರಣೆಯಿಂದ ನಾಡಹಬ್ಬಗಳು ನಡೆದವು. ಸಕ್ಕರಿ ಬಾಳಾಚಾರ್ಯ, ಡಾ. ಯು. ರಾಮರಾವ್, ಮುದವೀಡು ಕೃಷ್ಣರಾವ್, ಕಡಪಾ ರಾಘವೇಂದ್ರ ರಾವ್, ಮಂಗಳವೇಡೆ ಶ್ರೀನಿವಾಸರಾವ್ ಮುಂತಾದ ಹಿರಿಯರು ಸಭೆಯ ಜೊತೆ ಗುರುತಿಸಿಕೊಂಡಿದ್ದರು.

ಬ್ರಿಟಿಷರೂ ಬಯಸಿದ್ದರು
1918ರಲ್ಲೇ ಭಾರತದಲ್ಲಿ ಭಾಷಾವಾರು ಪ್ರಾಂತ ರಚನೆಯ ಸಂಬಂಧ ಮಾಂಟೆಗ್ಯೂ-ಚೆಲ್ಮ್ಸ್‌ಫರ್ಡ್ ಸಮಿತಿ ನೇಮಕಗೊಂಡಿತ್ತು. ಆ ಸಮಿತಿಯು ದೇಶವನ್ನು ಭಾಷಾವಾರು ಪ್ರಾಂತ್ಯಗಳನ್ನಾಗಿ ವಿಭಾಗಿಸುವುದು ಅಗತ್ಯ ಎಂದು ಶಿಫಾರಸು ಮಾಡಿತು. ಇದನ್ನು ಆಗಿನ ಬ್ರಿಟಿಷ್ ಸರ್ಕಾರ ಕೂಡ ಒಪ್ಪಿಕೊಂಡಿತ್ತು. 1920ರಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದ ಕಾಂಗ್ರೆಸ್ ಮಹಾಧಿವೇಶನ ಏಕೀಕರಣದ ನಿಟ್ಟಿನಲ್ಲಿ ಒಂದು ಮಹತ್ವದ ವೇದಿಕೆ. ಕರ್ನಾಟಕ ಪ್ರತಿನಿಧಿಗಳ ಒತ್ತಡಕ್ಕೆ ಮಣಿದು, ಬ್ರಿಟಿಷ್ ಆಳ್ವಿಕೆಗೆ ಸೇರಿದ್ದ ಕನ್ನಡ ಭಾಷಿಕ ಪ್ರದೇಶಗಳನ್ನು ಕರ್ನಾಟಕ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಸೇರಿಸಲಾಯಿತು. 

ಏಕೀಕರಣಕ್ಕೆ ವೇದಿಕೆಯಾದ ಬೆಳಗಾವಿ ಅಧಿವೇಶನ
ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್‌ನ ಮಹಾಧಿವೇಶನದ ಸಂದರ್ಭದಲ್ಲಿ ಕರ್ನಾಟಕ ಏಕೀಕರಣಕ್ಕೆ ವಿಶೇಷ ಚಾಲನೆ ದೊರೆಯಿತು. ಕರ್ನಾಟಕ ಸಭೆಯ ಮೊದಲ ಪರಿಷತ್ತು ಬೆಳಗಾವಿಯಲ್ಲಿ 25-12-1924ರಂದು, ಸರ್ ಸಿದ್ದಪ್ಪ ಕಂಬಳಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಆ ಸಂದರ್ಭದಲ್ಲಿ ಹುಯಿಲಗೋಳ ನಾರಾಯಣರಾಯರು ರಚಿಸಿದ 'ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು' ಗೀತೆಯನ್ನು ಮೊದಲ ಬಾರಿಗೆ ಹಾಡಲಾಯಿತು.

ಮದ್ರಾಸ್ ಮತ್ತು ಮುಂಬಯಿ ಆಧಿಪತ್ಯದ ವಿಧಾನ ಸಭೆಗಳಲ್ಲೂ ಕರ್ನಾಟಕ ಏಕೀಕರಣದ ವಿಷಯ ಪ್ರಸ್ತಾಪಿತಗೊಂಡಿತು. ಮದ್ರಾಸ್ ವಿಧಾನ ಸಭೆಯಲ್ಲಿ ಎ. ರಂಗನಾಥ ಮೊದಲಿಯಾರ್, ಜೆ. ಎ. ಸಲ್ಡಾನ, ಎ. ಬಿ. ಶೆಟ್ಟಿ, ಡಾ. ನಾಗನಗೌಡ ಮುಂತಾದ ಸದಸ್ಯರು ಕರ್ನಾಟಕ ಏಕೀಕರಣವನ್ನು ಬೆಂಬಲಿಸಿದರೂ ಸರ್ಕಾರ ಅದನ್ನು ತಿರಸ್ಕರಿಸಿತು. ಮುಂಬಯಿ ವಿಧಾನ ಸಭೆಯಲ್ಲಿ 1919ರಲ್ಲಿ ವಿ. ಎನ್. ಜೋಗ್ ಕರ್ನಾಟಕ ಪ್ರಾಂತ ರಚನೆಗೆ ಕೋರಿ ಠರಾವು ಮಂಡಿಸಿದ್ದರು. ಆದರೆ, ಅದೂ ತಿರಸ್ಕೃತವಾಯಿತು. 1926ರಲ್ಲಿ ಸರ್ ಸಿದ್ದಪ್ಪ ಕಂಬಳಿ ಪುನಃ ಕರ್ನಾಟಕ ಪ್ರಾಂತ ರಚನೆಗೆ ಠರಾವು ಮಂಡಿಸಿದರಾದರೂ, ಏಕೀಕರಣಕ್ಕೆ ಕನ್ನಡಿಗರ ಬೆಂಬಲವಿಲ್ಲ ಎಂಬ ಕಾರಣ ನೀಡಿ ಸರ್ಕಾರ ಠರಾವನ್ನು ತಿರಸ್ಕರಿಸಿತು.

ಕೊನೆಗೆ ಮುಹೂರ್ತ ಕೂಡಿ ಬಂದಿದ್ದು 1938ರ ಮೇ ತಿಂಗಳ ಮೊದಲ ವಾರ. ಆಗ ನಡೆದ ಮುಂಬಯಿ ಶಾಸನ ಸಭೆ ಕರ್ನಾಟಕ ಏಕೀಕರಣ ಗೊತ್ತುವಳಿಯನ್ನು ಸ್ವೀಕರಿಸಿತು. ಚರ್ಚೆಯಲ್ಲಿ ಪಾಲ್ಗೊಂಡಿದ್ದ ಬಿ. ಜಿ. ಖೇರ್, ಸರ್ ಸಿದ್ದಪ್ಪ ಕಂಬಳಿ, ವಿ. ಎನ್. ಜೋಗ್ ಗೊತ್ತುವಳಿಯನ್ನು ಅನುಮೋದಿಸಿದರು. ಆದರೆ, ಎರಡನೇ ಜಾಗತಿಕ ಯುದ್ಧ ಪ್ರಾರಂಭವಾಗಿದ್ದರಿಂದ ಭಾಷಾವಾರು ಪ್ರಾಂತ ರಚನೆ ಆಗಲಿಲ್ಲ.

ಸಮಗ್ರ ಕರ್ನಾಟಕದ ಕನಸು
1944ರಲ್ಲಿ ಧಾರವಾಡದಲ್ಲಿ ನಡೆದ 9ನೆಯ ಕರ್ನಾಟಕ ಏಕೀಕರಣ ಪರಿಷತ್ತು ಸಮಾವೇಶದಲ್ಲಿ ಸ್ವಾಗತಾಧ್ಯಕ್ಷರಾಗಿದ್ದ ಎಸ್. ಎಸ್. ಮಳೀಮಠ್, ಕರ್ನಾಟಕ ಏಕೀಕರಣವೆಂದರೆ, ಬ್ರಿಟಿಷ್ ಕರ್ನಾಟಕ ಪ್ರಾಂತಗಳಷ್ಟೇ ಅಲ್ಲ, ಸಂಸ್ಥಾನಗಳೂ ಸೇರಿದಂತೆ ಸಮಗ್ರ ಕರ್ನಾಟಕದ ಏಕೀಕರಣ ಎಂದು ಸಾರಿದರು.

1946ರಲ್ಲಿ ದಾವಣಗೆರೆಯಲ್ಲಿ ನಡೆದ ಕರ್ನಾಟಕಸ್ಥರ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಮುಂಬಯಿ ಆಧಿಪತ್ಯದ ಕೃಷಿ ಮಂತ್ರಿ ಎಂ. ಪಿ. ಪಾಟೀಲರು 'ಭಾರತಕ್ಕೆ ಸ್ವಾತಂತ್ರ್ಯವು ಹೇಗೋ ಹಾಗೆ ಕರ್ನಾಟಕಕ್ಕೆ ಸ್ವಾಯತ್ತತೆ' ಎಂದು ಘೋಷಿಸಿದರು. ಕರ್ನಾಟಕ ಏಕೀಕರಣಕ್ಕೆ ಕೆಲವು ಸಂಸ್ಥಾನಿಕರು ಅಡ್ಡಿಯಾಗಿದ್ದಾರೆ ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಬಳ್ಳಾರಿಯ ಕೋ. ಚೆನ್ನಬಸಪ್ಪ 'ಸಾಧ್ಯವಾದರೆ ಮೈಸೂರನ್ನು ಒಳಗೊಂಡು, ಅಗತ್ಯವಾದರೆ ಅದನ್ನು ಬಿಟ್ಟು ಕರ್ನಾಟಕ ಏಕೀಕರಣವಾಗಬೇಕು' ಎಂಬ ಗೊತ್ತುವಳಿ ಮಂಡಿಸಿದರು. 

ಆದರೆ, ಕೆಂಗಲ್ ಹನುಮಂತಯ್ಯನವರು 'ಮೈಸೂರನ್ನು ಒಳಗೊಂಡು ಕರ್ನಾಟಕ ರಾಜ್ಯ ನಿರ್ಮಾಣವಾಗಬೇಕು' ಎಂದು ಗೊತ್ತುವಳಿಗೆ ತಿದ್ದುಪಡಿ ತಂದರು. ಗೊತ್ತುವಳಿಯನ್ನು ಜಾರಿಗೆ ತರಲು ಎಂ. ಪಿ. ಪಾಟೀಲ, ಎಸ್. ನಿಜಲಿಂಗಪ್ಪ ಮತ್ತು ಕೆ. ಬಿ. ಜಿನರಾಜ ಹೆಗ್ಗಡೆ ಅವರಿದ್ದ ಸಮಿತಿ ರಚನೆಯಾಯಿತು.

ಸ್ವತಂತ್ರ ರಾಜ್ಯದತ್ತ...
1947ರ ಮುಂಬಯಿ ಶಾಸನ ಸಭೆಯಲ್ಲಿ ರೋಣದ ಅಂದಾನಪ್ಪ ದೊಡ್ಡಮೇಟಿ ಅವರು ಪ್ರತ್ಯೇಕ ಕರ್ನಾಟಕ ಪ್ರಾಂತ್ಯ ರಚನೆಗೆ ಒತ್ತಾಯಿಸಿ ಖಾಸಗಿ ಗೊತ್ತುವಳಿ ಮಂಡಿಸಿದರು. ಕೆಲವು ತಿದ್ದುಪಡಿಗಳೊಂದಿಗೆ ಗೊತ್ತುವಳಿಯು 60 ಮತಗಳನ್ನು ಪಡೆದು ಸ್ವೀಕೃತವಾಯಿತು. ವಿರುದ್ಧ ಬಂದದ್ದು ಕೇವಲ ಆರು ಮತಗಳು. ಮದ್ರಾಸ್ ಶಾಸನ ಸಭೆಯಲ್ಲಿಯೂ ಡಾ. ಪಿ. ಸುಬ್ಬರಾಯನ್ ಭಾಷಾವಾರು ಪ್ರಾಂತ್ಯ ರಚನೆಯ ಸಂಬಂಧ ಮಂಡಿಸಿದ ಗೊತ್ತುವಳಿ ಸ್ವೀಕೃತವಾಯಿತು.

ಸ್ವತಂತ್ರ ಭಾರತದ ಸಂವಿಧಾನದ ರಚನೆಗೆ ಸೇರಿದ್ದ ಘಟನಾ ಸಮಿತಿಯ ಮೇಲೂ ಭಾಷಾವಾರು ಪ್ರಾಂತ್ಯ ರಚನೆಗೆ ಒತ್ತಡ ಹೆಚ್ಚಿತು. ಅಂದಿನ ಘಟನಾ ಸಮಿತಿಯ ಸಭೆಯಲ್ಲೇ ಭಾಷಾವಾರು ಪ್ರಾಂತ್ಯ ರಚನೆ ಕುರಿತು ವರದಿ ಸಿದ್ಧಪಡಿಸಲು ಉಪ ಸಮಿತಿಯೊಂದರ ರಚನೆಯಾಯಿತು.

1947ರ ಆಗಸ್ಟ್ 15ರಂದು ಭಾರತ ಸ್ವತಂತ್ರವಾಯಿತು. ಆದರೆ, ಭಾರತ ಒಕ್ಕೂಟದ ಜೊತೆ ಮೈಸೂರು ಸಂಸ್ಥಾನ ಸೇರ್ಪಡೆಯಾಗಿದ್ದು 1947ರ ಅಕ್ಟೋಬರ್ 24ರಂದು. ಹೈದರಾಬಾದ್ ಕರ್ನಾಟಕದ ಸೇರ್ಪಡೆ 1948ರ ಸೆಪ್ಟೆಂಬರ್ 17ರಂದು. 

1948ರಲ್ಲಿ ಭಾಷಾವಾರು ಪ್ರಾಂತ್ಯ ರಚನೆಗೆ ಸಂಬಂಧಿಸಿದಂತೆ ವರದಿ ನೀಡಲು, ಅಲಹಾಬಾದ್ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಸ್. ಕೆ. ಧರ್ ಅಧ್ಯಕ್ಷತೆಯಲ್ಲಿ ಆಯೋಗ ನೇಮಿಸಿತ್ತು. ಆದರೆ, ವರದಿ ಭಾಷಾವಾರು ಪ್ರಾಂತ್ಯ ರಚನೆ ವಿರುದ್ಧವಾಗಿ ಬಂತು. 

ಕರ್ನಾಟಕ ಏಕೀಕರಣ ಪರಿಷತ್ತು
ನ್ಯಾಯಮೂರ್ತಿ ಧರ್ ಆಯೋಗದ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾದ ಸಮಿತಿಯಲ್ಲಿದ್ದ ಜವಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಪಟ್ಟಾಭಿರಾಮಯ್ಯ ಕೂಡಾ ಆಯೋಗದ ಶಿಫಾರಸುಗಳನ್ನೇ ಎತ್ತಿ ಹಿಡಿದರು. ಇದನ್ನು ಖಂಡಿಸಿ ರಾಜ್ಯದ ಎಲ್ಲೆಡೆ ಸಭೆ, ಸಮಾರಂಭ ಮತ್ತು ಸಮ್ಮೇಳನಗಳು ನಡೆದವು. ಕಾಂಗ್ರೆಸ್ ನಾಯಕರಿಂದ ಕರ್ನಾಟಕ ಏಕೀಕರಣ ಸಾಧ್ಯವಾಗದು ಎಂಬ ಅಭಿಪ್ರಾಯದಿಂದ ಪಕ್ಷೇತರ ಕರ್ನಾಟಕ ಏಕೀಕರಣ ಪರಿಷತ್ತು ಸ್ಥಾಪಿತವಾಗಿ, ಏಕೀಕರಣಕ್ಕೆ ಹೊಸ ತಿರುವು ಬಂದಿತು.

ಈ ಮಧ್ಯೆ ಆಂಧ್ರ ಪ್ರಾಂತ ರಚನೆಗೆ ಒತ್ತಾಯಿಸಿ, 1951ರ ಆಗಸ್ಟ್‌ನಲ್ಲಿ ಪೊಟ್ಟಿ ಶ್ರೀರಾಮುಲು ತಿರುಪತಿಯಲ್ಲಿ 37 ದಿನಗಳ ಉಪವಾಸ ಮಾಡಿದರು. ನಂತರ ಎರಡನೆಯ ಬಾರಿಗೆ ಆಮರಣಾಂತ ಉಪವಾಸಕ್ಕೆ ಕೈಹಾಕಿದ ಪೊಟ್ಟಿ ಶ್ರೀರಾಮುಲು, 58 ದಿನಗಳ ಉಪವಾಸ ಮಾಡಿ ನಿಧನರಾದರು. ಇದರಿಂದ ಎಚ್ಚೆತ್ತ ಲೋಕಸಭೆ, ಮದರಾಸ್ ನಗರವನ್ನು ಬಿಟ್ಟು ಆಂಧ್ರ ಪ್ರಾಂತ ರಚನೆಗೆ ನಿರ್ಧರಿಸಿತು. ಆಂಧ್ರ ಪ್ರಾಂತಕ್ಕೆ ಸೇರಿಸಬೇಕೆಂಬ ವಾದ ಇದ್ದ ಬಳ್ಳಾರಿ ತಾಲ್ಲೂಕಿನ ಬಗ್ಗೆ ಸ್ಪಷ್ಟ ಅಭಿಪ್ರಾಯ ಸಲ್ಲಿಸುವಂತೆ ರಾಷ್ಟ್ರಪತಿಗಳು ಹೈದರಾಬಾದ್‌ನ ಮುಖ್ಯ ನ್ಯಾಯಾಧೀಶ ಎಲ್. ಎಸ್. ಮಿಶ್ರಾ ಅವರಿಗೆ ಜವಾಬ್ದಾರಿ ಕೊಟ್ಟಿತು. 

ಆಂಧ್ರಕ್ಕಿಂತ ಕರ್ನಾಟಕದ ಪರ 90 ಮನವಿಗಳು ಹೆಚ್ಚಾಗಿ ಬಂದವು. ಜೊತೆಗೆ, ಕೊನೆಯ ಘಳಿಗೆಯಲ್ಲಿ ಕರ್ನಾಟಕದ ಖ್ಯಾತ ಇತಿಹಾಸ ತಜ್ಞ ಆರ್. ಎಸ್. ಪಂಚಮುಖಿ ಅವರ ಅಭಿಪ್ರಾಯವೂ ರಾಜ್ಯದ ಪರವಾಗಿಯೇ ಬಂದಿದ್ದರಿಂದ, ಬಳ್ಳಾರಿ ತಾಲ್ಲೂಕನ್ನು ಕರ್ನಾಟಕಕ್ಕೇ ಸೇರಿಸಲು ಮಿಶ್ರಾ ಶಿಫಾರಸು ಮಾಡಿದರು.

ಹುಬ್ಬಳ್ಳಿ ಗೋಲಿಬಾರ್
ಈ ಸಂದರ್ಭದಲ್ಲೇ, ಹುಬ್ಬಳ್ಳಿಯ ಸಮೀಪದ ಅದರಗುಂಚಿಯಲ್ಲಿ, ಶಂಕರಗೌಡ ಪಾಟೀಲರು 28-03-1953ರಂದು ಕರ್ನಾಟಕ ಏಕೀಕರಣಕ್ಕೆ ಆಗ್ರಹಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದರು. 19-04-1953ರಂದು ಹುಬ್ಬಳ್ಳಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸಮಿತಿಯ ಸಭೆ ನಡೆಯಲಿದ್ದ ವಿಷಯ ತಿಳಿದ ಕರ್ನಾಟಕ ಏಕೀಕರಣ ಕಾರ್ಯಕರ್ತರು ಬೆಳಗಿನಿಂದಲೇ ಗುಳಕವ್ವನ ಕಟ್ಟೆ ಮೈದಾನದಲ್ಲಿ ಗುಂಪುಗೂಡಿದರು. ಮೊದಮೊದಲು ಶಾಂತಿಯುತವಾಗಿದ್ದ ಪ್ರತಿಭಟನೆ ಕ್ರಮೇಣ ಉಗ್ರವಾಯಿತು. ಗುದ್ಲೆಪ್ಪ ಹಳ್ಳಿಕೇರಿ ಅವರ ಜೀಪಿಗೆ ಬೆಂಕಿ ಹಚ್ಚಿದರು. ಪೊಲೀಸರ ನಿಯಂತ್ರಣ ತಪ್ಪಿದಾಗ ಲಾಠೀ ಚಾರ್ಜ್ ಅಲ್ಲದೆ, ಗೋಲೀಬಾರ್ ಕೂಡಾ ಮಾಡಲಾಯಿತು. ಗಲಭೆಗೆ ಕಾರಣಕರ್ತರೆಂದು ಬಂಧಿತರಾದವರ ವಿಚಾರಣೆ ನಡೆಯಿತು. ಆಗ ಸ್ಥಾನಬದ್ಧತಾ ಕಾನೂನಿನ ಅಡಿಯಲ್ಲಿ ಬಂಧಿತರಾಗಿದ್ದವರ ಪರ ವಾದಿಸಿದವರು ಮಾಜಿ ಮುಖ್ಯಮಂತ್ರಿ ದಿ. ಎಸ್. ಆರ್. ಬೊಮ್ಮಾಯಿ. 

ಏಕೀಕರಣಕ್ಕೆ ಹೆಚ್ಚಿದ ಒತ್ತಡ
ಹುಬ್ಬಳ್ಳಿ ಗಲಭೆಯ ನಂತರ, ಮಿಶ್ರಾ ವರದಿ ಸ್ವೀಕೃತವಾಗಿ ಆಂಧ್ರ ಪ್ರದೇಶದ ರಚನೆ ಖಚಿತವಾಯಿತು. ಕಾಂಗ್ರೆಸ್ ನಾಯಕರನ್ನೇ ನಂಬಿ ಕೂತರೆ ಕರ್ನಾಟಕ ಏಕೀಕರಣ ಸಾಧ್ಯವಿಲ್ಲ ಎಂಬ ಅಭಿಪ್ರಾಯವಿದ್ದ ಕಾಂಗ್ರೆಸ್ಸೇತರ ಪಕ್ಷದ ಕೆಲವು ಮುಖಂಡರು 28-05-1953ರಂದು ದಾವಣಗೆರೆಯಲ್ಲಿ ಸಭೆ ಸೇರಿ, 'ಕರ್ನಾಟಕ ರಾಜ್ಯ ನಿರ್ಮಾಣ ಮಾಡುವುದು ಕನ್ನಡಿಗರ ಜನ್ಮಸಿದ್ಧ ಹಕ್ಕು' ಎಂಬ ಘೋಷಣೆಯೊಂದಿಗೆ, ಮಾಜಿ ಸಂಸದ ದಿ. ಅಳವಂಡಿ ಶಿವಮೂರ್ತಿ ಸ್ವಾಮಿ ಮತ್ತು ಕೆ. ಆರ್. ಕಾರಂತರ ನೇತೃತ್ವದಲ್ಲಿ 'ಅಖಂಡ ಕರ್ನಾಟಕ ರಾಜ್ಯ ನಿರ್ಮಾಣ ಪರಿಷತ್ತು' ಎಂಬ ಸಂಸ್ಥೆಯನ್ನು ಹುಟ್ಟುಹಾಕಿದರು. ಏಕೀಕರಣ ಹೋರಾಟಕ್ಕೆ ಜನಾಂದೋಲನದ ಸ್ವರೂಪ ನೀಡುವಲ್ಲಿ ಪರಿಷತ್ತು ಯಶ್ವಸಿಯಾಯಿತು. 1953ರ ಅಕ್ಟೋಬರ್ ಒಂದರಂದು ಆಂಧ್ರಪ್ರದೇಶ ರಚನೆಯಾದ ಸಂದರ್ಭದಲ್ಲೇ ಬಳ್ಳಾರಿ ಜಿಲ್ಲೆ ಮೈಸೂರು ಸಂಸ್ಥಾನದಲ್ಲಿ ವಿಲೀನಗೊಂಡಿತು.

ಕರ್ನಾಟಕ ಏಕೀಕರಣಕ್ಕಾಗಿ ಜನಾಂದೋಲನ ಹೆಚ್ಚಿದಾಗ, ಕೇಂದ್ರ ಸರ್ಕಾರ 29-12-1953ರಂದು ರಚಿಸಿದ್ದ ಫಜಲ್ ಆಲಿ ನೇತೃತ್ವದ ರಾಜ್ಯ ಪುನರ್ವಿಂಗಡಣಾ ಆಯೋಗ ಕರ್ನಾಟಕ ರಾಜ್ಯ ರಚನೆಯ ಅಗತ್ಯತೆಯನ್ನು ಎತ್ತಿ ಹಿಡಿಯಿತು. ಅದರ ಕರಡು ವರದಿಯಲ್ಲಿ ಇಡಿಯಾಗಿ ಬಳ್ಳಾರಿ ಜಿಲ್ಲೆಯನ್ನು ಆಂಧ್ರಕ್ಕೆ ಸೇರಿಸಲು ಶಿಫಾರಸು ಮಾಡಿತ್ತು. ಅದನ್ನು ವಿರೋಧಿಸಿ, ಬಳ್ಳಾರಿ ಜಿಲ್ಲೆಯಾದ್ಯಂತ ತುಂಗಭದ್ರಾ ನದಿ ನೀರು ಹೋರಾಟ ನಡೆಯಿತು. ರಾಜ್ಯ ಪುನರ್ವಿಂಗಡಣಾ ಆಯೋಗವು ಹಿಂದಿನ ವರದಿಗಳನ್ನು ಪರಿಶೀಲಿಸಿ, ಬಂದ ಸಾವಿರಗಟ್ಟಲೆ ಮನವಿಗಳ ಅಧ್ಯಯನ ಮಾಡಿ, ಕೇಂದ್ರ ಸರ್ಕಾರಕ್ಕೆ 1955ರ ಅಕ್ಟೋಬರ್ 10ರಂದು ತನ್ನ ವರದಿಯನ್ನು ಸಲ್ಲಿಸಿತು.

ರಾಜ್ಯ ಪುನರ್ವಿಂಗಡಣಾ ಆಯೋಗದ ವರದಿಯ ಬಗ್ಗೆ ಸಂಸತ್ತು 1956ರ ಜನವರಿ 19ರಂದು ಚರ್ಚಿಸಿ, 1956ರ ಮಾರ್ಚ್ 19ರಂದು ವಿಧೇಯಕ ಪ್ರಕಟಿಸಿತು. ಅದರ ಪ್ರಕಾರ 1956ರ ನವೆಂಬರ್ 1ರಂದು ಕರ್ನಾಟಕ (ಆಗ ಮೈಸೂರು) ರಾಜ್ಯ ಅಸ್ತಿತ್ವಕ್ಕೆ ಬರಲಿತ್ತು. ಆಗ ಈ ಪ್ರದೇಶಗಳು ಹೊಸ ರಾಜ್ಯದಲ್ಲಿ ಸೇರ್ಪಡೆಯಾಗಬೇಕಿತ್ತು: 

1. ಇಡಿಯಾಗಿ ಮೈಸೂರು ರಾಜ್ಯ.
2. ಮುಂಬಯಿ ರಾಜ್ಯದ ಬಿಜಾಪುರ, ಧಾರವಾಡ, ಉತ್ತರ ಕನ್ನಡ ಮತ್ತು ಬೆಳಗಾವಿ (ಚಾಂದಘಡ ತಾಲ್ಲೂಕನ್ನು ಬಿಟ್ಟು) ಜಿಲ್ಲೆಗಳು.
3. ಹೈದರಾಬಾದ್ ರಾಜ್ಯದ ಗುಲಬರ್ಗಾ ಜಿಲ್ಲೆ (ಕೊಡಂಗಲ್ ಮತ್ತು ತಾಂಡೂರು ತಾಲ್ಲೂಕುಗಳನ್ನು ಬಿಟ್ಟು), ರಾಯಚೂರು ಜಿಲ್ಲೆ (ಆಲಂಪುರ ಮತ್ತು ಗದ್ವಾಲ್ ತಾಲ್ಲೂಕುಗಳನ್ನು ಬಿಟ್ಟು) ಮತ್ತು ಬೀದರ್ ಜಿಲ್ಲೆಯ ಬೀದರ್, ಭಾಲ್ಕಿ, ಔರಾದ್ (ಸಂತಪುರ) ಮತ್ತು ಹುಮನಾಬಾದ್ ತಾಲ್ಲೂಕುಗಳು.
4. ಮದ್ರಾಸ್ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ (ಕಾಸರಗೋಡು ತಾಲ್ಲೂಕು ಮತ್ತು ಅಮೀನ್ ದ್ವೀಪಗಳನ್ನು ಬಿಟ್ಟು) ಮತ್ತು ಕೊಯಮತ್ತೂರು ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು.
5. ಕೊಡಗು ರಾಜ್ಯ.

ಈಡೇರಿದ ಕನಸು
ವಿಜಯನಗರ ಕಾಲದವರೆಗೂ ದೊಡ್ಡ ಸಾಮ್ರಾಜ್ಯವಾಗಿದ್ದ ಕರುನಾಡು ಟಿಪ್ಪು ಸುಲ್ತಾನ್‌ನ ಮರಣದ ನಂತರ ಬ್ರಿಟಿಷರ ಒಡೆದು ಆಳುವ ನೀತಿಯಿಂದ ಹಲವಾರು ಪ್ರಾಂತ್ಯಗಳಾಗಿ ವಿಭಜನೆಯಾಗಿ ವಿವಿಧ ಭಾಷೆಗಳ ಪ್ರಾಂತ್ಯಗಳಲ್ಲಿ ಇಲ್ಲವಾಗಿತ್ತು. ಈಗ ಕನ್ನಡಿಗರನ್ನೊಳಗೊಂಡ ಪ್ರತ್ಯೇಕ ರಾಜ್ಯ ಅಸ್ತಿತ್ವಕ್ಕೆ ಬರುತ್ತದೆಂಬ ಸಂತಸದ ಜೊತೆಗೆ, ಇದಕ್ಕಾಗಿ ಹೋರಾಡಿದ ಹಿರಿಯ ಜೀವಗಳು ಹಂಬಲಿಸಿದಂತೆ, ಪೂರ್ತಿ ಏಕೀಕರಣ ಸಾಧ್ಯವಾಗಲಿಲ್ಲ. 

ಏಕೆಂದರೆ, ಕಾಸರಗೋಡು ಕೈಬಿಟ್ಟಿತ್ತು. ಅಕ್ಕಲಕೋಟೆ, ಸೊಲ್ಲಾಪುರಗಳು ಹೊರಗೇ ಉಳಿದಿದ್ದವು. ನೀಲಗಿರಿ ಕೂಡಾ ದಕ್ಕಲಿಲ್ಲ. ಏಕೀಕರಣದ ನಂತರವೂ ಪ್ರಾಚೀನ ಕಾಲದಿಂದ ಇದ್ದ ಕರ್ನಾಟಕ ಎಂಬ ಹೆಸರಿನ ಬದಲಾಗಿ ಮೈಸೂರು ರಾಜ್ಯವೆಂದು ಕರೆಯಲ್ಪಟ್ಟಿತು. ಕೊನೆಗೂ, ಸಾಕಷ್ಟು ಒತ್ತಡದ ನಂತರ, 1973 ನವೆಂಬರ್ 1ರಂದು ರಾಜ್ಯಕ್ಕೆ ಕರ್ನಾಟಕ ಎಂದು ಪುನರ್ ನಾಮಕರಣ ಮಾಡಲಾಯಿತು.

ಏನೇ ಆದರೂ, ಬೇರೆ ಬೇರೆ ಪ್ರಾಂತಗಳಲ್ಲಿ ಹಂಚಿಹೋಗಿದ್ದ ಕನ್ನಡಿಗರು 1956ರ ನವೆಂಬರ್ 1ರಂದು ಒಂದೇ ರಾಜ್ಯದ ಆಡಳಿತ ವ್ಯಾಪ್ತಿಗೆ ಬಂದಿದ್ದು ಒಂದು ಐತಿಹಾಸಿಕ ಹೋರಾಟದ ಫಲ. ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕರ್ನಾಟಕ ಶತಮಾನಗಳ ಸಂಕೋಲೆ ಕಳೆದುಕೊಂಡು ಎಲ್ಲ ರೀತಿಯಿಂದ ಒಂದಾಯಿತು. ಏಕೀಕರಣದ ಕನಸು ಈಡೇರುವ ಮೂಲಕ, ಕನ್ನಡಿಗರ ಭಾವನಾತ್ಮಕವಾಗಿಯೂ ಒಂದಾದರು. ಸಾಂಸ್ಕೃತಿಕ ಐಕ್ಯತೆಗೂ ಇಂಬು ದೊರೆಯಿತು. 

ಇಂಥದೊಂದು ಕನಸನ್ನು ನನಸು ಮಾಡಲು ಹೋರಾಡಿದ ಎಲ್ಲರ ತ್ಯಾಗ ಮತ್ತು ಬಲಿದಾನದ ಫಲ ಈ ನಮ್ಮ ಹೆಮ್ಮೆಯ ಕರ್ನಾಟಕ. ಆ ಸ್ಫೂರ್ತಿ ಅಳಿಯದಿರಲಿ. ಸಮೃದ್ಧ ಹಾಗೂ ಸ್ವಾವಲಂಬಿ ಕರ್ನಾಟಕ ಬೇಗ ಮೈದಾಳಲಿ. 

ಸಿರಿಗನ್ನಡಂಗೆಲ್ಗೆ!

ಕೃಪೆ: ಶ್ರೀ ಚಾಮರಾಜ ಸವಡಿ 

ಕರ್ನಾಟದ ಏಕೀಕರಣ :
ಬಹಳಷ್ಟೂ ನಮ್ಮ ಕನ್ನಡಿಗರಿಗೆ ಗೊತ್ತಿಲ್ಲ ಕರ್ನಾಟದ ಏಕೀಕರಣ ಅಂದರೆ ಏನು, ಅನೇಕ ಕಡೆ ಸುವರ್ಣ ಸಂಭ್ರಮ ಆಗುತ್ತಿದೆ, ಗಲ್ಲಿ ಗಲ್ಲಿಗಳಲ್ಲಿ ಸಮಾರಂಭ ನಡೆಯುತ್ತಿದೆ. ಅದೇ ಹಾಡು-ಕುಣಿತ ಮತ್ತು ಕೆಲವು ರಾಜಕೀಯ ನಾಯಕರ ಮತ್ತು ಉಟ್ಟು ಹೋರಾಟಗಾರಾರ ಕಿವಿಗೆ ಅಪ್ ಪಳಿಸುವ ಭಾಷಣಗಳು. ಆದರೆ ಇದಕ್ಕೆ ನಿಜಕ್ಕೂ ಹೋರಾಡಿದ, ಭಗೀರಥ ಪ್ರಯತ್ನವನ್ನು ಮಾಡಿದ ಶ್ರೀ ಆಲೂರರ ಸಾಧನೆ ನಮ್ಮ ಇಂದಿನ ಜನಾಂಗಕ್ಕೆ ತಿಳಿಯದಿರುವುದು ದುಃಖದ ಸಂಗತಿ. ಉದ್ದಗಲಕ್ಕೂ ಹಂಚಿಹೋಗಿದ್ದ ನಮ್ಮ ರಾಜ್ಯವನ್ನು ಒಂದು ಮಾಡಿದ ಸಾಧನೆ ಕಡಿಮೆಯೇ, ಯಾಕೆ ನಾವು ಇವರನ್ನು ಸ್ಮರಿಸುತ್ತಿಲ್ಲ, ಯಾಕೆ ನಮ್ಮ ಶಿಕ್ಷಣದಲ್ಲಿ ಇವರ ಪಾಠವಿಲ್ಲ ?? ಎಲ್ಲೆಲ್ಲಿ ತೇಪೆಗಳಾಗಿದ್ದವು ಅಂತ ನಮ್ಮ ಜನಕ್ಕೆ ಗೊತ್ತೆ ??

ಬೆಂಗಳೂರು ಗ್ರಾಮಂತರ, ಮಂಡ್ಯ, ಕೋಲಾರ, ತುಮಕೂರು. ಮೈಸೂರುಗಳನ್ನು ಒಳಗೊಂಡ ಮೈಸೂರು ಅರಸರ ಪ್ರಾಂತ್ಯ.
ಬ್ರಿಟಿಷ್ ಆಡಳಿತದಲ್ಲಿ ಇದ್ದ ಬೆಂಗಳೂರು(ಕಂಟೋನ್ಮೆಂಟ್)
ಬ್ರಿಟಿಷ್ ಆಡಳಿತ ಆದರೆ ಮುಂಬೈ ಪ್ರೆಸಿಡೆನ್ಸಿದಲ್ಲಿ ಇದ್ದ ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಮತ್ತು ವಿಜಾಪುರ. ಉತ್ತರ ಮತ್ತು ದಕ್ಶಿಣ ಸೊಲ್ಲಾಪುರ ಮತ್ತು ಮಂಗಳವಾಡೆ.
ಬ್ರಿಟಿಷ್ ಮದ್ರಾಸ್ ಪ್ರಾಂತ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಕಾಸರಗೋಡು, ಬಳ್ಳಾರಿ, ಪೆನೆಗೊಂಡ, ನೀಲಗಿರಿ, ಕೊಳ್ಳೆಗಾಲ, ಹಿಂದೂಪುರ, ಕಲ್ಯಾಣದುರ್ಗ, ಪೆನಗೋಂಡ, ಹೊಸೂರು, ಮಡಕಶಿರಾ ಮತ್ತು ತಾಳವಾಡಿ.
ಕೊಡಗು
ಹೈದಾರಬಾದ್ ಸಂಸ್ಥಾನಕ್ಕೆ ಸೇರಿದ ಬೀದರ್, ರಾಯಚೂರು ಮತ್ತು ಗುಲ್ಬರ್ಗ
ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ ಷಾಪುರ, ಶಿರಹಟ್ಟಿ, ದೊಡ್ದವಾಡ.
ಮೀರಜ್ ಸಂಸ್ಥಾನಕ್ಕೆ ಸೇರಿದ ಲಕ್ಶ್ಮೇಶ್ವರ
ಕಿರಿಯ ಮೀರಜ್ ಸಂಸ್ಥಾನಕ್ಕೆ ಸೇರಿದ ಗುಡಗೇರಿ
ಹಿರಿಯ ಕುರುಂದ್ ನಾಡ್
ವಡಗಾಂವ್
ಔಂದ್ ಸಂಸ್ಥಾನಕ್ಕೆ ಸೇರಿದ ವಿಜಾಪುರದ ಗುಣದಾಳು
ರಾಮದುರ್ಗ ಸಂಸ್ಥಾನ
ಜಮಖಂಡಿ ಸಂಸ್ಥಾನಕ್ಕೆ ಸೇರಿದ ಕುಂದಗೋಳ, ಚಿಪ್ಪಲಕಟ್ಟಿ ೧೫) ಮುಧೋಳ ಸಂಸ್ಥಾನಕ್ಕೆ ಸೇರಿದ ಮುಧೊಳ್
ಸೊಂಡುರು ಸಂಸ್ಥಾನಕ್ಕೆ ಸೇರಿದ ಸೊಂಡುರು
ಜತ್ ಸಂಸ್ಥಾನಕ್ಕೆ ಸೇರಿದ ಜತ್ ಜಿಲ್ಲೆ
ಸವಣೂರು ಸಂಸ್ಥಾನಕ್ಕೆ ಸೇರಿದ ಸವಣೂರು ಜಿಲ್ಲೆ
ಅಕ್ಕಲಕೋಟೆಯ ಸಂಸ್ಥಾನಕ್ಕೆ ಸೇರಿದ ಅಕ್ಕಲಕೋಟೆ ಜಿಲ್ಲೆ ಹೀಗೆ ಅನೇಕರ ಕೈಗಳಲ್ಲಿ ಹಂಚಿಹೊಗಿದ್ದ ಕರುನಾಡನ್ನು ಒಂದು ಮಾಡಿದ್ದು ನಿಜಕ್ಕೂ ಮಾಯೆಯೆ ಸರಿ, ಕನ್ನಡಿಗರ ಹಿತ ರಕ್ಸಿಸುವ ಒಂದು ರಾಜ್ಯವಿರಲಿಲ್ಲ, ನಮ್ಮ ಜನರನ್ನು ಆಳುವ ಪ್ರಭುಗಳು ಇತರ ಭಾಷಿಕರಾಗಿದ್ದು, ನಾವು ಅನಾಥಪ್ರಜ್ನೆ ಅನುಭವಿಸುತ್ತ ಇದ್ದೆವೂ. ಏಕೀಕರಣಕ್ಕೆ ಅಡ್ದಿ ಆತಂಕಗಳು ಬರಲಿಲ್ಲ್ವವೇ ?? ಬಂಡಾಯದ ಧ್ವನಿ ಕೇಳಿಬಂದವೂ, ಆದರೂ ದೃತಿಗೆಡದೆ ಕನ್ನಡದ ಹಿತಕ್ಕೆ ಇಟ್ಟ ಹೆಜ್ಜೆಯನ್ನು ಹಿಂದೆ ತೆಗೆಯದ ಆ ಚೇತನ ನಮ್ಮ ಇಂದಿನ ಪೀಳಿಗೆಗೆ ಮಾದರಿ.

ವಿಶ್ವ ಅಂಚೆ ದಿನ

 


ಪ್ರತಿ ವರ್ಷ ಅಕ್ಟೋಬರ್ ೯ನೇ ತಾರೀಕಿನಂದು ವಿಶ್ವ ಅಂಚೆ ದಿನವೆಂದು ಆಚರಿಸಲಾಗುತ್ತದೆ. ೧೮೭೪ರ ಇದೇ ದಿನಾಂಕದಂದು ಸ್ವಿಟ್ಜರ್‌ಲೆಂಡಿನ ಬ್ರೆನ್ ನಗರದಲ್ಲಿ ಯುನಿವರ್ಸಲ್ ಪೋಸ್ಟಲ್ ಯೂನಿಯನ್ (ಯು. ಪಿ. ಯು.) ಸ್ಥಾಪನೆಯಾಗಿತ್ತು. ಈ ಸಂಸ್ಥೆ ಜಾಗತಿಕ ಸಂವಹನ ಕ್ರಾಂತಿಗೆ ದೊಡ್ಡ ಕೊಡೆಗೆಯನ್ನು ನೀಡಿದೆ. ಅದರ ಜ್ಞಾಪಕಾರ್ಥವಾಗಿ ವಿಶ್ವ ಅಂಚೆ ದಿನವನ್ನು ಆಚರಿಸಲಾಗುತ್ತದೆ. ೧೯೬೯ರಲ್ಲಿ ಜಪಾನ್ ದೇಶದ ಟೋಕಿಯೋ ನಗರದಲ್ಲಿ ನಡೆದ ಯು.ಪಿ.ಯು ಸಮ್ಮೇಳನದಲ್ಲಿ ಅಕ್ಟೋಬರ್ ೯ರಂದು ಮೊದಲ ವಿಶ್ವ ಅಂಚೆ ದಿನವೆಂದು ಘೋಷಿಸಲಾಯಿತು.



ಯು.ಪಿ.ಯು ಯುನೈಟೆಡ್ ನೇಶನ್ಸ್‌ನ ಒಂದು ಅಂಗ ಸಂಸ್ಥೆಯಾಗಿದ್ದು ಪ್ರಪಂಚದಾದ್ಯಂತ ಅಂಚೆ ಜಾಲವನ್ನು ಹೊಂದಿದೆ. ಇದು ವಿಶ್ವದ ಎರಡನೆಯ ಅತ್ಯಂತ ಹಳೆಯ ಅಂತರರಾಷ್ಟ್ರೀಯ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದಿದೆ. ಇದು ೧೯೨ ಸದಸ್ಯ ರಾಷ್ಟ್ರಗಳನ್ನು ಹೊಂದಿದೆ. ಅಂತರರಾಷ್ಟ್ರೀಯ ಅಂಚೆ ಸಂವಹನದ ನಿಯಮಾವಳಿಗಳನ್ನು ಈ ಸಂಸ್ಥೆ ನಿರ್ಣಯಿಸುತ್ತದೆ.



ಇಂದು ಬದಲಾವಣೆಯ ಗಾಳಿ ಎಲ್ಲ ರಂಗಗಳಲ್ಲೂ ಬೀಸತೊಡಗಿದೆ. ಇದಕ್ಕೆ ಅಂಚೆ ಸೇವೆಯೂ ಹೊರತಲ್ಲ. ಮನೆಯವರು, ಬಂಧು ಮಿತ್ರರು, ಸ್ನೇಹಿತರು, ಪ್ರೇಮಿಗಳು, ಕೋರ್ಟು ಕಛೇರಿ ವ್ಯವಹಾರಸ್ಥರು ದಿನ-ವಾರ-ತಿಂಗಳುಗಳ ಕಾಲ ತಮ್ಮವರಿಂದ ಬರುವ ಒಂದು ಪತ್ರಕ್ಕಾಗಿ ಕಾಯುವ ಪರಿಸ್ಥಿತಿ ಈಗ ಬಹಳ ವಿರಳವಾಗಿದೆ. ಡಿಜಿಟಲ್ ಕ್ರಾಂತಿಯಿಂದಾಗಿ ಇಂದು ಅಂಚೆ ಕಾಗದಗಳಿಗಾಗಿ ಕಾಯುವ ಪರಿಸ್ಥಿತಿ ಇಲ್ಲ. ದಶಕಗಳ ಹಿಂದೆ ಸ್ಥಿರ ದೂರವಾಣಿ ಸೌಲಭ್ಯ ಮತ್ತು ಕಂಪ್ಯೂಟರ್ ಆಧಾರಿತ ಅಂತರ್ಜಾಲ ವ್ಯವಸ್ಥೆ ಸಂಪರ್ಕಕ್ಕೆ ಹೊಸ ವೇಗವನ್ನು ನೀಡಿದವು. ಆದರೆ ಇವು ಎಲ್ಲರ ಕೈಗೆಟುಕುವ ಸ್ಥಿತಿ ಇರಲಿಲ್ಲ. ಆದರೆ ಇಂದಿನ ಕಾಲಘಟ್ಟದಲ್ಲಿ ನಾವು ಮೊಬೈಲ್, ಸ್ಮಾರ್ಟ್‌ಫೋನುಗಳ ಮೂಲಕ ಸಂಪರ್ಕದ ಹೊಸ ಹೊಸ ದಾರಿಗಳನ್ನು ಕಂಡುಕೊಂಡಿದ್ದೇವೆ. ಕೇವಲ ಇ-ಮೇಲ್‌ಗಳಲ್ಲದೆ, ವಾಟ್ಸಾಪ್, ಫೇಸ್‌ಬುಕ್ ಮುಂತಾದ ಸಾಮಾಜಿಕ ಜಾಲತಾಣಗಳ ಮುಖಾಂತರ ಸಂಪರ್ಕ ಸಾಧ್ಯವಾಗಿದೆ. ಮೊಬೈಲ್ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಖಾಸಗಿ ಮತ್ತು ಸಾರ್ವಜನಿಕ ಉದ್ದಿಮೆಗಳು ಪೈಪೋಟಿಗೆ ಬಿದ್ದು ದರಗಳನ್ನು ಕಡಿಮೆಗೊಳಿಸುತ್ತಿವೆ. ಹಾಗಾಗಿ ಬಡವರು-ಶ್ರೀಮಂತರೆಂಬ ಭೇದವಿಲ್ಲದೆ ಈ ಸೇವೆಯನ್ನು ಬಳಸಿಕೊಳ್ಳುತ್ತಿದ್ದಾರೆ.



ಸಂಪರ್ಕ ಕ್ಷೇತ್ರದಲ್ಲಾದ ಕ್ಷಿಪ್ರ ಕ್ರಾಂತಿಯಿಂದ ಸಾಂಪ್ರದಾಯಿಕ ಅಂಚೆ ಸೇವೆ ಮಂಕಾಗಿರುವುದು ನಮ್ಮ ಮುಂದಿರುವ ವಾಸ್ತವ. ನಮ್ಮಲ್ಲಿ ಅಂಚೆ ಇಲಾಖೆ ಅಂಚೆ, ಟೆಲಿಗ್ರಾಂ, ಮನಿ ಆರ್ಡರ್, ಕೆಲವು ಹಣ ಉಳಿತಾಯ ಯೋಜನೆಗಳ ಸೀಮಿತತೆಯಲ್ಲಿ ಕೆಲಸ ನಿರ್ವಹಿಸುತ್ತಿದೆ. ಈ ಪೈಕಿ ಕೆಲವು ಸೇವೆಗಳು ನಿಂತು ಹೋಗಿವೆ. ಜಾಗತೀಕರಣದಿಂದ ಜನರಲ್ಲಿ ಕೊಳ್ಳಬಾಕತನ ಹೆಚ್ಚಿದ ಮೇಲೆ ಈ ಬದಲಾವಣೆಯನ್ನು ನಿರ್ವಹಿಸಲು ಬೇಕಾದ ಸಿದ್ಧತೆಗಳು ನಮ್ಮ ಅಂಚೆ ಇಲಾಖೆಯ ಬಳಿ ಇದ್ದಂತಿಲ್ಲ. ಇಂದು ಜನ ಆನ್‌ಲೈನ್ ಶಾಂಪಿಂಗ್ ಮುಖಾಂತರ ವಸ್ತುಗಳನ್ನು ಖರೀಧಿಸುತ್ತಾರೆ. ಅವು ನಿಗದಿತ ಸಮಯಕ್ಕೆ ಕೊಳ್ಳುಗರನ್ನು ತಲುಪುವ ಸೇವೆಗಳು ಲಭ್ಯವಿವೆ. ಈ ಬಗೆಯ ಬದಲಾವಣೆಯನ್ನು ಎದುರಿಸಲು ವಿಶ್ವದ ಕೆಲವು ದೇಶಗಳಲ್ಲಿ ಅಲ್ಲಿನ ಅಂಚೆ ಇಲಾಖೆಗಳು ಖಾಸಗಿ ಸಹಬಾಗಿತ್ವಕ್ಕೆ ಮೊರೆಹೋದ ಉದಾಹರಣೆಗಳೂ ಸಾಕಷ್ಟು ಸಿಗುತ್ತವೆ. ಜಪಾನ್ ಪೋಸ್ಟ್ ಆಸ್ಟ್ರೇಲಿಯಾದ ಟೋಲ್ ಹೋಲ್ಡಿಂಗ್ಸ್ ಎಂಬ ಖಾಸಗಿ ಸಂಸ್ಥೆಯನ್ನು ಖರೀಧಿಸಿತು; ಯುನೈಟೆಡ್ ಸ್ಟೇಟ್ಸ್‌ನ ಅಂಚೆ ಇಲಾಖೆ ಅಮೇಜಾನ್ ಡಾಟ್ ಕಾಂ ಜೊತೆ ಒಪ್ಪಂದ ಮಾಡಿಕೊಂಡಿದೆ; ಆಸ್ಟೇಲಿಯಾದ ಅಂಚೆ ಇಲಾಖೆ ಚೀನಾದ ಆಲಿಬಾಬಾ ಎಂಬ ಸಂಸ್ಥೆಯ ಜೊತೆ ಒಪ್ಪಂದ ಮಾಡಿಕೊಂಡಿದೆ.



ಇಂತಹ ಎಲ್ಲ ಬದಲಾವಣೆ ಮತ್ತು ಸವಾಲುಗಳ ನಡುವೆ ನಾವು ಮತ್ತೊಮ್ಮೆ ವಿಶ್ವ ಅಂಚೆ ದಿನವನ್ನು ಎದುರುಗೊಳ್ಳುತ್ತಿದ್ದೇವೆ. ಈ ದಿನವನ್ನು ಜನರು ಮತ್ತು ವ್ಯವಹಾರಗಳಲ್ಲಿ ಅಂಚೆಯ ಕೊಡುಗೆಯ ಕುರಿತು ಅರಿವು ಮೂಡಿಸುವುದೇ ಆಗಿದೆ. ಅಂಚೆ ಇಲಾಖೆಗಳು ಎಲ್ಲ ದೇಶಗಳ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಕೊಡುಗೆಗಳನ್ನು ನೀಡಿವೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಪ್ರತಿ ವರ್ಷವೂ ಒಂದೊಂದು ವಿಷಯವನ್ನು ಗುರಿಯಾಗಿಸಿಕೊಡು ವಿಶ್ವ ಅಂಚೆ ದಿನ ಆಚರಿಸಲ್ಪಡುತ್ತದೆ. ಜಾಗತಿಕ ಮಟ್ಟದಲ್ಲಿ ಹಸಿವು, ಬಡತನ, ಅನ್ಯಾಯ, ಹವಾಮಾನ ವೈಪರೀತ್ಯ ಮೊದಲಾದವುಗಳ ವಿರುದ್ಧ ಹೋಡಲು ಇಂಬು ನೀಡುತ್ತಿದೆ ಎಂಬುದು ಈ ದಿನವನ್ನು ಇನ್ನಷ್ಟು ವಿಶಿಷ್ಟವಾಗಿಸಿದೆ.
🙏 *ಮಾಹಿತಿ ವೇದಿಕೆ*🌺

*ಇಂದು ವಿಶ್ವ ಅಂಚೆ ದಿನ*✍

*ವಿಸ್ತರಿಸಲ್ಪಟ್ಟ ಅಂಚೆಸೇವೆಗಳು*✍

*2016- ಇಂಡಿಯಾ ಪೋಸ್ಟ್ ಎಟಿಎಂ ಸೇವೆ*
*1863- ರೈಲ್ವೆ ಮೇಲ್ ಸರ್ವೀಸ್ (ಆರ್​ಎಂಎಸ್)*
*1876- ಪಾರ್ಸಲ್ ಪೋಸ್ಟ್ ಯುನಿಟ್ ಸ್ಥಾಪನೆ*
*1879- ಪೋಸ್ಟ್ ಕಾರ್ಡ್ ಪ್ರಾರಂಭ*
*1880- ಮನಿ ಆರ್ಡರ್ ಸೇವೆ ಆರಂಭ1911- ಮೊದಲ ಏರ್​ವೆುೕಲ್ ಸೇವೆ ಪ್ರಾರಂಭ (ಅಲಹಾಬಾದ್​ನಿಂದ ನೈನಿ)*
*1935- ಭಾರತೀಯ ಪೋಸ್ಟಲ್ ಆರ್ಡರ್ ಶುರು*
*1972- ಪಿನ್​ಕೋಡ್ ಜಾರಿಗೆ*
*1984- ಪೋಸ್ಟಲ್ ಲೈಫ್ ಇನ್ಶೂರೆನ್ಸ್ ಆರಂಭ*
*1985- ಪ್ರತ್ಯೇಕವಾದ ಅಂಚೆ ಮತ್ತು ದೂರವಾಣಿ ಇಲಾಖೆಗಳು*
*1986- ಸ್ಪೀಡ್ ಪೋಸ್ಟ್ ಸೇವೆ*
*1990- ಮುಂಬೈ, ಚೆನ್ನೈನಲ್ಲಿ 2 ಸ್ವಯಂಚಾಲಿತ ಅಂಚೆ ಆವೃತ್ತಿ ಸ್ಥಾಪನ*
*1995- ಗ್ರಾಮೀಣ ಅಂಚೆ ವಿಮ*
*1996- ಮೀಡಿಯಾ ಪೋಸ್ಟಲ್ ಸರ್ವೀಸ್*
*1997- ಬ್ಯುಸಿನೆಸ್ ಪೋಸ್ಟಲ್ ಸರ್ವೀಸ್*
*1998- ಡಾಟಾ ಡಾಕ್ ಮತ್ತು ಎಕ್ಸ್​ಪ್ರೆಸ್ ಡಾಕ್ ಸೇವೆ*
*2000- ಗ್ರೀಟಿಂಗ್ ಪೋಸ್ಟ್ ಸೇವೆ*
*2001- ಇಲೆಕ್ಟ್ರಾನಿಕ್ ಫಂಡ್ ಟ್ರಾನ್ಸ್​ಫರ್*
*2002- ಇಂಟರ್ನೆಟ್ ಆಧಾರಿತ ಟ್ರ್ಯಾಕ್ ಮತ್ತು ಟ್ಯಾಕ್ಸ್ ಸೇವ*
*2003- ಬಿಲ್ ಮೇಲ್ ಸರ್ವೀಸ್*
*2004- ಇ-ಪೋಸ್ಟಲ್ ಸರ್ವೀಸ್2004- ಲಾಜಿಸ್ಟಿಕ್ ಪೋಸ್ಟ್ ಸರ್ವೀಸ್*

ಅಂಚೆ ಎನ್ನುವ ಹೆಸರು ಹೇಗೆ ಬಂತು ಗೊತ್ತೇ?

ಪ್ರಸ್ತುತದ ಕನ್ನಡ ಭಾಷೆಯಲ್ಲಿ “ಅಂಚೆ” ಎಂದರೆ Postal, ಟಪಾಲು ಎಂಬ ಅರ್ಥವಿದೆ. ಕನ್ನಡ ಪಂಡಿತರ ಅಥವಾ ನಿಘಂಟುಗಳ ಮೊರೆ ಹೋದರೆ “ಅಂಚೆ” ಎಂಬ ಪದಕ್ಕೆ ‘ಹಂಸ’ ಎಂಬ ಅರ್ಥ ಸಿಗುತ್ತದೆ. ಹಂಸ ನೀರಿನಲ್ಲಿರುವ ಬಾತುಕೋಳಿಯ ಇನ್ನೊಂದು ಹೆಸರು. ಆದರೆ, ಟಪಾಲು/Postal ವಿಭಾಗಕ್ಕೆ ‘ಅಂಚೆ’ ಎಂಬ ಹೆಸರು ಹೇಗೆ ಬಂತೆಂಬುದರ ಹಿಂದೆ ಸ್ವಾರಸ್ಯಕರ ಸಂಗತಿ ಒಂದಿದೆ.

ಹೌದು, ಕ್ರಿ. ಶ. 1672 ರವರೆಗೆ ‘ಅಂಚೆ’ ಎಂಬುದರ ಅರ್ಥ ‘ಹಂಸ’ ಮಾತ್ರ. ಅಂದಿಗೆ ಕನ್ನಡ ನಾಡು (ಕನ್ನಡ ಮಾತನಾಡುವ ರಾಜ್ಯ) ಎನಿಸಿಕೊಂಡಿದ್ದ ಮೈಸೂರು ಸಂಸ್ಥಾನದ ದೊರೆಗಳಾದ ಶ್ರೀ ಚಿಕ್ಕದೇವರಾಜ ಒಡೆಯರ್ ಅವರು ರಾಜ್ಯದ Postal Department/ಟಪಾಲು ವಿಭಾಗವನ್ನು ಸ್ಥಾಪಿಸುವಲ್ಲಿ ವಿಶೇಷ ಆಸಕ್ತಿ ವಹಿಸಿದ್ದರು.

ಈ ವಿಭಾಗಕ್ಕೆ ಹೆಸರೇನಿಡಬೇಕೆಂಬ ವಿಚಾರ ಬಂದಾಗ ಅವರ ತಲೆಗೆ ಹೊಳೆದದ್ದು ನಮ್ಮ ಪುರಾಣಗಳಲ್ಲಿ ಅಮರ ಪ್ರೇಮಿಗಳೆನಿಸಿಕೊಂಡ ನಳ-ದಮಯಂತಿಯರು. ಈ ಪ್ರೇಮಿಗಳ ನಡುವೆ ಪ್ರೀತಿಯ ಸಂಕೇತ ಹಾಗೂ ಸಂದೇಶ ವಾಹಕವಾಗಿದ್ದ ‘ಹಂಸೆ’ ಅಥವಾ ‘ಅಂಚೆ’ ಯನ್ನು ಮೈಸೂರು ರಾಜ್ಯದ Postal ವಿಭಾಗದ ಹೆಸರಾಗಿ ಆಯ್ಕೆ ಮಾಡಲಾಯಿತು. ಹೀಗೆ ಅಂದು ನಾಮಕರಣಗೊಂಡ ‘ಅಂಚೆ ವಿಭಾಗ’ ಕನ್ನಡದಲ್ಲಿ ಶಾಶ್ವತವಾಗಿ ಉಳಿದುಬಿಟ್ಟಿದೆ. ಅಬ್ಬಾ!! ರಾಜ್ಯದ ವ್ಯವಸ್ಥೆಯ ಒಂದು ವಿಭಾಗಕ್ಕೆ ಎಂತಹ ರೋಮಾಂಚನೀಯ, ಭಾವನಾತ್ಮಕ ಹೆಸರು!!

ಒಂದು ಸ್ಥಳವಾಗಲಿ, ರಸ್ತೆಯಾಗಲಿ, ಯೋಜನೆಯಾಗಲಿ ಅಥವಾ ವ್ಯವಸ್ಥೆಯ ವಿಭಾಗವಾಗಲಿ, ಹೆಸರಿಡುವುದರಲ್ಲಿ ಎಷ್ಟು ಸೃಜನಶೀಲ ಹಾಗೂ ಭಾವನಾತ್ಮಕವಾಗಿರಬೇಕೆಂಬುದಕ್ಕೆ ಇದು ಒಳ್ಳೆಯ ಉದಾಹರಣೆ.

ಈ ವಿಷಯವನ್ನು ನಾನು ಓದುತ್ತಿರುವಾಗ, 10ನೇ ತರಗತಿಯಲ್ಲಿ ಕನ್ನಡದ ಮೇಷ್ಟ್ರು ಹೇಳಿಕೊಟ್ಟ ತತ್ಸಮ-ತದ್ಭವ ಪಾಠಗಳು ನೆನಪಾದವು. ‘ಹಂಸ’ ಎಂಬುದು ಸಂಸ್ಕ್ರತ ಪದ. ರೂಪಾಂತರಗೊಂಡು ಕನ್ನಡಕ್ಕೆ ಬಂದಾಗ ‘ಅಂಚೆ’ಯಾಯಿತು.
ವ್ಯವಸ್ಥೆಯ ಒಂದು ವಿಭಾಗಕ್ಕೆ ಅದನ್ನು ಹೆಸರಾಗಿ ಬಳಸಿಕೊಂಡಾಗ ಕಾಲಕ್ರಮೇಣ ಮೂಲ ಅರ್ಥವೇ ಕಳೆದು ಹೊಸ ಅರ್ಥ ಬಂದಂತಿದೆ. ಸಾಂಸ್ಕೃತಿಕ, ಸಾಮಾಜಿಕ, ರಾಜಕೀಯ ವ್ಯವಸ್ಥೆಗಳು ಭಾಷೆಯ ಮೇಲೆ ಬೀರುವ ಪರಿಣಾಮಗಳಿಗೆ ‘ಅಂಚೆ’ ಕೈಗನ್ನಡಿಯಂತಿದೆ. ಇದೇ ಅಲ್ಲವೇ ಭಾಷೆಯ ವಿಕಸನ!

ಶೃತಿ ಹೆಚ್ ಎಂ


ಭಾರತಾಂಬೆಯ ಹೆಮ್ಮೆಯ ಪುತ್ರ ಡಾ.ಎಪಿಜೆ ಅಬ್ದುಲ್ ಕಲಾಂ"

 


"ಭಾರತಾಂಬೆಯ ಹೆಮ್ಮೆಯ ಪುತ್ರ ಡಾ.ಎಪಿಜೆ ಅಬ್ದುಲ್ ಕಲಾಂ"

ಅವರೊಬ್ಬ ಕರ್ಮಯೋಗಿ. ಅಪ್ಪಟ ದೇಶಭಕ್ತ. ಸುಭದ್ರ ಭಾರತದ ಕನಸು ಕಂಡ ಹಾಗೂ ಅದರ ನಿರ್ಮಾಣಕ್ಕಾಗಿ ಜೀವನವನ್ನೇ ಮುಡುಪಾಗಿಟ್ಟ ಧೀಮಂತ. ಮಹಾ ಮೇಧಾವಿ. ಅವರು ಈ ದೇಶ ಕಂಡ ಅತ್ಯುತ್ತಮ ವಿಜ್ನಾನಿಗಳಲ್ಲೊಬ್ಬರು. ಚಿಕ್ಕ ಮಕ್ಕಳಿಂದ ಆರಂಭವಾಗಿ ಐಐಟಿ, ಐಐಎಂ ವಿದ್ಯಾರ್ಥಿಗಳಿಗೆಲ್ಲರಿಗೂ ಅಚ್ಚುಮೆಚ್ಚಿನ ಗುರು, ಶಿಕ್ಷಕ. ಸಹನೆ, ಸರಳತೆ, ಸಜ್ಜನಿಕೆಗೆ ಅತ್ಯುತ್ತಮ ಉದಾಹರಣೆ. ಅವರು ಭಾರತದ 11ನೇ ರಾಷ್ಟ್ರಪತಿಯಾಗಿದ್ದರು. ಕೋಟ್ಯಾಂತರ ಯುವಕರಿಗೆ ಕನಸುಗಳನ್ನು ಕಟ್ಟಿಕೊಟ್ಟ, ದೇಶಕ್ಕಾಗಿ ದುಡಿಯಲು ಅವರಿಗೆ ಸದಾ ಪ್ರೇರಣೆ ನೀಡುತ್ತಿದ್ದ ಒಬ್ಬ ಮಹಾನ್ ನಾಯಕ. ಅವರೇ ಭಾರತದ ಮಿಸ್ಸೈಲ್ ಮ್ಯಾನ್, ಭಾರತ ರತ್ನ ಡಾ.ಎಪಿಜೆ ಅಬ್ದುಲ್ ಕಲಾಂ..

15 ಅಕ್ಟೋಬರ್ 1931 ರಂದು ರಾಮೇಶ್ವರದ ಬಡ ಕುಟುಂಬದಲ್ಲಿ ಹುಟ್ಟಿದ ಕಲಾಂ, ದಿನ ಪತ್ರಿಕೆ ಹಂಚುತ್ತಲೇ ತಮ್ಮ ಕನಸುಗಳಿಗೆ ರೆಕ್ಕೆ ಕಟ್ಟಿಕೊಂಡರು; ದೇಶಕ್ಕೂ ಹೊಸ ಕನಸುಗಳನ್ನು ಕೊಟ್ಟರು. ಅದನ್ನು ನನಸು ಮಾಡುವುದಕ್ಕೆ ದುಡಿದರು. ಬಾಹ್ಯಾಕಾಶ ಎಂಜಿನಿಯರಿಂಗ್‌ನಲ್ಲಿ ಡಾಕ್ಟೊರೆಟ್ ಪದವಿ ಗಳಿಸಿದರು. ಡಿಆರ್‌ಡಿಒ ಮತ್ತು ಇಸ್ರೋದಲ್ಲಿ ಹಿರಿಯ ವಿಜ್ಞಾನಿಯಾಗಿ ಕೆಲಸ ಮಾಡಿದರು. ಇಡೀ ವಿಶ್ವವೇ ಭಾರತದತ್ತ ಬೆರಗುಕಣ್ಣುಗಳಿಂದ ನೋಡುವಂತಹ ಸಾಧನೆಗಳನ್ನು ಮಾಡಿದರು. ಭಾರತದ ಅತ್ಯುನ್ನತ ನಾಗರಿಕ ಗೌರವವಾದ 'ಭಾರತರತ್ನ' ಪ್ರಶಸ್ತಿಗೆ ಅವರು ಪಾತ್ರರಾಗಿದ್ದರು. ಇದಲ್ಲದೆ ಪದ್ಮ ಭೂಷಣ ಕೂಡ ಅವರಿಗೆ ಒಲಿದು ಬಂದಿತ್ತು, ಇದಲ್ಲದೆ ಹಲವಾರು ವಿಶ್ವವಿದ್ಯಾಲಯಗಳು ಸುಮಾರು 40 ಕ್ಕೂ ಹೆಚ್ಚು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿವೆ. ಬ್ರಹ್ಮಚಾರಿಯಾಗಿದ್ದ ಅವರು, ತಮ್ಮ ಇಡೀ ಜೀವನವನ್ನು ಅಧ್ಯಯನ, ಸಂಶೋಧನೆ, ಬಾಹ್ಯಾಕಾಶ ಕಾರ್ಯಕ್ರಮಗಳ ಯೋಜನೆಗಳಿಗೆ ಮೀಸಲಿಟ್ಟರು.

1998 ರಲ್ಲಿ ಅಮೆರಿಕಾ ಸಹಿತ ಇಡೀ ವಿಶ್ವವೇ ಬೆರಗಾಗುವಂತೆ ಮಾಡಿದ ಭಾರತದ ಫೋಖ್ರಾನ್-2 ಅಣ್ವಸ್ತ್ರ ಪರೀಕ್ಷೆಯ ವಿಚಾರದಲ್ಲಂತೂ ಡಾ.ಅಬ್ದುಲ್ ಕಲಾಂ ಅವರು ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು. ಪ್ರಥಮ ಅಣು ಪರೀಕ್ಷೆ 1974ರಲ್ಲಿ ನಡೆಡಿತ್ತು. ಅ ನಂತರ ತೀವ್ರವಾದ ಅಂತಾರಾಷ್ಟ್ರೀಯ ವಿರೋಧ, ಅದರಲ್ಲೂ ಮುಖ್ಯವಾಗಿ ಅಮೆರಿಕದ ನಿರಂತರ ಒತ್ತಡಗಳ ನಡುವೆಯೂ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಅಣು ಪರೀಕ್ಷೆ ನಡೆಸಲು ಕೈಗೊಂಡ ನಿರ್ಧಾರಕ್ಕೆ ಇಡೀ ವಿಶ್ವವೇ ದಂಗಾಗಿ ಹೋಯಿತು, ಮಾತ್ರವಲ್ಲ, ಭಾರತ ಒಂದು ಅಣ್ವಸ್ತ್ರ ಹೊಂದಿದ ದೇಶ ಎಂಬುದನ್ನೂ ಇತರ ದೇಶಗಳು ಒಲ್ಲದ ಮನಸ್ಸಿನಿಂದ ಒಪ್ಪುವಂತಾಯಿತು, ಹಾಗೂ ಭಾರತ ವಿಶ್ವದ ಬಲಿಷ್ಠ ರಾಷ್ಟ್ರಗಳಲ್ಲೊಂದಾಗಿ ಮಾರ್ಪಾಡು ಹೊಂದಿತು, ವಿಶ್ವ ಮನ್ನಣೆ ಗಳಿಸಲಾರಂಭಿಸಿತು.

2002ರಲ್ಲಿ ಡಾ.ಅಬ್ದುಲ್ ಕಲಾಂ ಅವರು ಅಂದಿನ ಸರಕಾರ ನಡೆಸುತ್ತಿದ್ದ ಬಿಜೆಪಿ ಹಾಗೂ ವಿಪಕ್ಷಗಳ ಬೆಂಬಲದೊಂದಿಗೆ ರಾಷ್ಟ್ರಪತಿಯಾಗಿ ಆಯ್ಕೆಯಾದರು. ಐದು ವರ್ಷಗಳ ಸೇವೆ ಸಲ್ಲಿಸಿ ಅವರು ನಾಗರಿಕ ಜೀವನಕ್ಕೆ ಮರಳಿ ವಿದ್ಯಾಭ್ಯಾಸ, ಬರವಣಿಗೆ ಮತ್ತು ಜನಸೇವೆಯಲ್ಲಿ ತೊಡಗಿಕೊಂಡರು.

ಡಾ.ಅಬ್ದುಲ್ ಕಲಾಂರವರು,ಜುಲೈ 27, 2015 ರಂದು ಶಿಲ್ಲಾಂಗ್ ನಲ್ಲಿ ಉಪನ್ಯಾಸ ನೀಡುವ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದರು. ನಂತರ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಕೊನೆಯ ಉಸಿರು ಇರುವವರೆಗೂ ಅವರು ಸೇವೆಯಲ್ಲಿ ನಿರತರಾಗಿದ್ದು, ಇಡೀ ದೇಶದ ಜನತೆಗೆ ಮಾದರಿಯ ವ್ಯಕ್ತಿತ್ವ.

ಅಬ್ದುಲ್ ಕಲಾಂ ಅವರ ಜನ್ಮ ದಿನದ ಶುಭಾಶಯಗಳೊಂದಿಗೆ ಅವರ...
ಅವರ‌ಹಿತ ನುಡಿಗಳು

ಅಬ್ದುಲ್ ಕಲಾಂ ದೇಹ ನಮ್ಮಿಂದ ದೂರವಾಗಿದ್ದರೂ ಅವರ ಸಾಧನೆ, ವ್ಯಕ್ತಿತ್ವಗಳು ನಮಗೆ ಸದಾ ಮಾರ್ಗದರ್ಶನ ಮಾಡುತ್ತಲೇ ಇರುತ್ತವೆ. ಅವರು ಬದುಕಿನ ಕೊನೆಯ ಘಳಿಗೆಯವರೆಗೂ ಮಾರ್ದರ್ಶಕರಾಗೇ ಬದುಕಿ ಸೈ ಎನಿಸಿದರು.
ಅವರ ಅನುಭವದಲ್ಲಿ ಬಂದ ವಿವೇಕಯುಕ್ತ ಮಾತುಗಳು ನಮ್ಮ ಜೀವನಕ್ಕೆ ಅತ್ಯುತ್ತಮ ಮಾರ್ಗದರ್ಶನ ನೀಡಬಲ್ಲವು.

1) ನಿನ್ನ ಕನಸು ನನಸಾಗಬೇಕಿದ್ದರೆ.. ಮೊದಲು ನೀನು ಕನಸು ಕಾಣು..

2) ನಿದ್ದೆಯಲ್ಲಿ ಕಾಣುವುದಲ್ಲ .. ನಿದ್ದೆಗೆಡಿಸಿ ಕಾಡುವುದು

3) ಯಶಸ್ಸನ್ನು ಅನುಭವಿಸಬೇಕಿದ್ದರೇ ಕಷ್ಟಗಳು ತುಂಬಾ ಮುಖ್ಯ

4) ನಮ್ಮ ಸಹಿ ಹಸ್ತಾಕ್ಷರವಾಗಿ ಬದಲಾಗುವುದೇ ಯಶಸ್ಸು..

5) ಸೋಲಿನ ಕತೆಗಳನ್ನು ಓದುವುದರಿಂದ ಗೆಲುವಿನ ಹಾದಿ ತಿಳಿಯುತ್ತದೆ ..

6) ಸೋಲೆಂಬ ರೋಗ ಕೊಲ್ಲಲು ಆತ್ಮವಿಶ್ವಾಸ ಮತ್ತು ಶ್ರಮವೇ ಮದ್ದು..

7) ನಮ್ಮ ಮಕ್ಕಳ ಉತ್ತಮ ನಾಳೆಗಾಗಿ ನಮ್ಮ ಇಂದನ್ನು ತ್ಯಾಗ ಮಾಡೋಣ..

8) ಯಾವುದೇ ಸಮಸ್ಯೆಗೂ ಯುದ್ಧ ಅಂತಿಮ ಪರಿಹಾರವಲ್ಲ..

9) ಅತೀ ಸಂತೋಷ ಅಥವಾ ಅತೀ ದುಃಖವಾದಾಗ ಮಾತ್ರ ಕವನ ಸೃಷ್ಟಿ

10) ಯುವಕರು ಕೆಲಸ ಹುಡುಕಬಾರದು.. ಕೆಲಸ ಉತ್ಪಾದಕರಾಗಬೇಕು

11) ವಿಜ್ಞಾನ ಮಾನವೀಯತೆಗೆ ಸುಂದರ ಉಡುಗೊರೆ. ನಾವು ಅದನ್ನು ವಿರೂಪಗೊಳಿಸಬಾರದು

12) ಮಳೆ ಬಂದಾಗ ಎಲ್ಲ ಹಕ್ಕಿಗಳು ಮರದ ಆಶ್ರಯ ಪಡೆಯುತ್ತವೆ. ಆದರೆ ಹದ್ದುಗಳು ಮೋಡದಿಂದಲೂ ಮೇಲಕ್ಕೆ ಹೋಗಿ ಹಾರಾಡುತ್ತವೆ. ಸಮಸ್ಯೆ ಎಲ್ಲರಿಗೂ ಇದೆ. ಆದರೆ ಅದನ್ನು ಹೇಗೆ ಎದುರಿಸ್ತೀರಿ ಎನ್ನುವುದು ಮುಖ್ಯ

13) ಯಾವುದರಲ್ಲೂ ತೊಡಗಿಸಿಕೊಳ್ಳದೇ ಇದ್ದರೆ ನೀವು ಯಶಸ್ವಿಯಾಗಲ್ಲ. ತೊಡಗಿಸಿಕೊಂಡರೆ ಯಾವುದೇ ಕಾರಣಕ್ಕೂ ಸೋಲಲ್ಲ

14) ನಮಗೆಲ್ಲರಿಗೂ ಒಂದೇ ಪ್ರತಿಭೆ ಹೊಂದಿಲ್ಲ. ಆದರೆ ಪ್ರತಿಭೆಯನ್ನು ಬೆಳೆಸಿಕೊಳ್ಳಲು ಎಲ್ಲರಿಗೂ ಸಮಾನ ಅವಕಾಶವಿರುತ್ತೆ

15) ಸೂರ್ಯನಂತೆ ಪ್ರಜ್ವಲಿಸಬೇಕಿದ್ದರೆ, ಸೂರ್ಯನಂತೆ ಮೊದಲು ಉರಿಯಬೇಕು

16) ನಿಮ್ಮ ಮೊದಲ ಜಯದ ನಂತರ ವಿಶ್ರಾಂತಿ ಪಡೆಯಬೇಡಿ. ಯಾಕಂದ್ರೆ ನೀವು ಎರಡನೇ ಬಾರಿ ಸೋತರೆ, ಮೊದಲನೇ ಜಯ ಬರೀ ಅದೃಷ್ಟ ಎಂದು ತೆಗಳುವವರು ಹೆಚ್ಚು ಇರುತ್ತಾರೆ

17) ಕೆಲವರನ್ನು ಸೋಲಿಸುವುದು ಭಾರೀ ಸುಲಭ. ಆದ್ರೆ ಕೆಲವರನ್ನು ಗೆಲ್ಲುವುದು ಭಾರೀ ಕಷ್ಟ

18) ನೀವು ಮಾಡುವ ಕೆಲಸವನ್ನು ಪ್ರೀತಿಸಿ, ಶ್ರದ್ಧೆಯಿಂದ ಕೆಲಸ ಮಾಡಿ ಆತ್ಮಶುದ್ಧಿ ಮಾಡಿಕೊಳ್ಳಿ..

19) ನಿಮ್ಮ ಭವಿಷ್ಯ ಬದಲಾಗಬೇಕಾದ್ರೆ, ಮೊದಲು ನಿಮ್ಮ ಹವ್ಯಾಸಗಳನ್ನು ಬದಲಿಸಿಕೊಳ್ಳಿ..

20) ಸ್ಪಷ್ಟ ಗುರಿ.. ವಿಷಯ ಜ್ಞಾನ.. ನಿರಂತರ ಶ್ರಮ.. ಅಧ್ಯಯನ ಶೀಲತೆ

21) ಜೀವನ ಮತ್ತು ಸಮಯ ನಮ್ಮ ಉತ್ತಮ ಶಿಕ್ಷಕರು

22) ಜೀವನ ನಮ್ಮ ಗುರಿಯನ್ನು ನಿರ್ದೇಶಿಸುತ್ತದೆ. ಸಮಯ ಜೀವನದ ಮೌಲ್ಯವನ್ನು ನಿರ್ಧರಿಸುತ್ತದೆ

23) ನಾವು ಸ್ವತಂತ್ರರಾಗದಿದ್ದರೆ, ಯಾರೂ ಗೌರವಿಸುವುದಿಲ್ಲ

24) ನಿನ್ನ ತಪ್ಪುಗಳೇ ನಿನ್ನ ನಿಜವಾದ ಗುರು
                   
#ಜನ್ಮದಿನದ_ಶುಭಾಶಯಗಳು_ಕಲಾಂ_ಜಿ

ಕನಕದಾಸ ಜಯಂತಿ

 ಕನಕದಾಸ ಜಯಂತಿ















ಕನಕದಾಸರು (1509-1609) ಕರ್ಣಾಟಕದ ಹೆಸರಾಂತ ಕವಿ, ಸಂಗೀತಗಾರ, ವಾಗ್ಗೇಯಕಾರರು, ವೇದಾಂತಿಗಳು. ಇವರು ದ್ವೈತ ಮದ್ವ ತತ್ವವನ್ನು ತಮ್ಮ ರಚನೆಗಳಲ್ಲಿ ಅಳವಡಿಸಿ , ಹಾಡಿ ಜನರಿಗೆ ಪ್ರಚಾರ ಮಾಡಿದರು. ಇವರು ಸುಮಾರು ೨೫೦ ಕೃತಿಗಳನ್ನು ರಚಿಸಿದ್ದಾರೆ. ನಳಚರಿತ್ರೆ , ಹರಿಭಕ್ತಿಸಾರ, ರಾಮಧಾನ್ಯಚರಿತೆ, ಮೋಹನತರ೦ಗಿಣಿ, ನೃಸಿ೦ಹಾಷ್ಟವ - ಇವು ಪ್ರಮುಖರಚನೆಗಳು. ಕನಕದಾಸರ ಊರು ಹಾವೇರಿ ಜಿಲ್ಲೆಯ ಕಾಗಿನೆಲೆ. ಇವರು ಕಾಗಿನೆಲೆ ಆದಿಕೇಶವ ಎಂಬ ಅಂಕಿತವನ್ನುತಮ್ಮ ಕೀರ್ತನೆಗಳಲ್ಲಿ ಉಪಯೋಗಿಸಿದ್ದಾರೆ.





ತಿಮ್ಮಪ್ಪನಾಯಕ ಇವರ ಮೊದಲಿನ ಹೆಸರು. ಇವರು ದಂಡನಾಯಕನಾಗಿದ್ದು ಯಾವುದೋ ಯುಧ್ಧದಲ್ಲಿ ತೀವ್ರ ಗಾಯವಾದರೂ ,ಬದುಕುಳಿದರಂತೆ. ಇದಾದ ನಂತರ ಅವರು ಯುದ್ಧವನ್ನು ಬಿಟ್ಟು , ದೇವರ ಧ್ಯಾನದಲ್ಲಿ ತೊಡಗಿದರು ಎಂದು ಹೇಳುತ್ತಾರೆ. ಶ್ರೀ ವ್ಯಾಸರಾಯರು ಇವರನ್ನು ತಮ್ಮ ಶಿಷ್ಯನಾಗಿ ಮಾಡಿಕೊಂಡು ಕನಕದಾಸ ಎಂದು ಹೆಸರಿಟ್ಟರು. ಇವರ ಕೀರ್ತನೆಗಳು ಆ ಕಾಲದ ದಿನ ನಿತ್ಯ ಜೀವನದ ಸಂಗತಿಗಳನ್ನು ನಿರೂಪಿಸುತ್ತದೆ. ಜಾತಿಪದ್ಧತಿಯ ತಾರತಮ್ಯಗಳನ್ನು ಖಂಡಿಸಿದ್ದಾರೆ.ಬರೀ ಸಂಪ್ರದಾಯದ ಆಚರಣೆಗಳು ನಿಷ್ಪ್ರಯೋಜಕ, ನೈತಿಕ ಮೌಲ್ಯಗಳನ್ನು ಬೆಲೆಸಿಕೊಳ್ಳುವುದು ಮುಖ್ಯ ಎಂದು ಕನಕದಾಸರು ಹೇಳುತ್ತಾರೆ.




ಕುರುಬ ಜನಾಂಗಕ್ಕೆ ಸೇರಿದ ಇವರಿಗೆ ಉಡುಪಿಯ ದೇವಸ್ಥಾನದಲ್ಲಿ ಅವರಿಗೆ ಪ್ರವೇಶ ದೊರೆಯದಿದ್ದಾಗ, ದೇವಸ್ಥಾನದ ಹಿ೦ದೆ ನಿ೦ತು "ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ" ಎಂದು ಹಾಡತೊಡಗಿದರ೦ತೆ . ಆಗ ದೇವಸ್ಥಾನದ ಹಿಂದಿನ ಗೋಡೆ ಒಡೆದು ಶ್ರೀ ಕೃಷ್ಣನು ದರ್ಶನ ಕೊಟ್ಟನಂತೆ. ಈ ಬಿರುಕಾದ ಗೋಡೆಯನ್ನು ಕನಕನ ಕಿಂಡಿ ಎ೦ದು ಕರೆಯಲಾಗಿದೆ. ಈಗಲೂ ಉಡುಪಿ ಕೃಷ್ಣನ ದೇವಸ್ಥಾನದಲ್ಲಿ ಇದನ್ನು ನೋಡಬಹುದು.




ಇವರ ದೇವರನಾಮಗಳು ಕರ್ನಾಟಕ ಸಂಗೀತಹಾಗು ಸಾಹಿತ್ಯವನ್ನು ಶ್ರೀಮಂತಗೊಳಿಸಿದೆ. ಈಹಾಡನ್ನು ಇಂದಿಗೂ ನಾವೆಲ್ಲ ಕೇಳುತ್ತೀವಿ,ಹಾಡುತ್ತೀವಿ. ಇವರು ಕೊಟ್ಟಿರುವ ಸಂದೇಶಇಂದಿಗೂ ಪ್ರಸ್ತುತ.

ರಾಗ – ಮುಖಾರಿ ತಾಳ – ಏಕ


ತೊರೆದು ಜೀವಿಸಬಹುದೆ ಹರಿ ನಿನ್ನ ಚರಣವ

ತೊರೆದು ಜೀವಿಸಬಹುದೆ || ಪ ||


ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ

ಕರಪಿಡಿದೆನ್ನನು ಕಾಯೊ ಕರುಣಾನಿಧಿ || ಅ.ಪ ||


ತಾಯಿ ತಂದೆಯ ಬಿಟ್ಟು ತಪವ ಮಾಡಲು ಬಹುದು

ದಾಯಾದಿ ಬಂಧುಗಳ ಬಿಡಲು ಬಹುದು

ರಾಯ ಮುನಿದರೆ ರಾಜ್ಯವ ಬಿಡಬಹುದು

ಕಾಯಜಪಿತ ನಿನ್ನಡಿಯ ಬಿಡಲಾಗದು || ೧ ||


ಒಡಲು ಹಸಿದರೆ ಅನ್ನವ ಬಿಡಬಹುದು

ಪಡೆದ ಕ್ಷೇತ್ರವ ಬಿಟ್ಟು ಹೊರಡಲು ಬಹುದು

ಮಡದಿ ಮಕ್ಕಳ ಕಡೆಗೆ ತೊಲಗಿಸಿಬಿಡಬಹುದು

ಕಡಲೊಡೆಯ ನಿಮ್ಮಡಿಯ ಘಳಿಗೆ ಬಿಡಲಾಗದು || ೨ ||


ಪ್ರಾಣವ ಪರರಿಗೆ ಬೇಡಿದರೆ ಕೊಡಬಹುದು

ಮಾನಾಭಿಮಾನವ ತಗ್ಗಿಸಬಹುದು

ಪ್ರಾಣದಾಯಕನಾದ ಆದಿಕೇಶವರಾಯ

ಜಾಣ ಶ್ರೀಕೃಷ್ಣ ನಿನ್ನಡಿಯ ಬಿಡಲಾಗದು || ೩ ||








ಕರ್ನಾಟಕದಲ್ಲಿ ಹರಿದಾಸ ಪರಂಪರೆಗೆ ಸುಮಾರು ಐದು ನೂರು ವರ್ಷಗಳ ಭವ್ಯ ಇತಿಹಾಸವಿದೆ. ಕನಕದಾಸರಂಥ ವೈಚಾರಿಕ ಸಂತರಿಂದಾಗಿ ಸಮಾಜದ ಮೇಲು-ಕೀಳು, ಜಾತಿ-ಮತಗಳ ಸಿದ್ಧಾಂತ ಬದಿಗೆ ಸರಿಯಿತು. ದೇವಸ್ತುತಿಯೇ ಮುಖ್ಯವೆನಿಸಿದ್ದ ಭಕ್ತಿ ಪರಂಪರೆಯ ಕಾಲದಲ್ಲಿ ಧ್ರುವತಾರೆಯಂತೆ ಅವತರಿಸಿದ ಕನಕದಾಸರು ತಮ್ಮ ವೈಚಾರಿಕ ಮತ್ತು ಪ್ರತಿಭಟನಾ ನೆಲೆಗಟ್ಟಿನಿಂದ ದಾಸ ಸಾಹಿತ್ಯಕ್ಕೆ ವೈಚಾರಿಕ ಪ್ರಭೆಯನ್ನು ನೀಡಿದರು.


ದಾಸ ಸಾಹಿತ್ಯದ ಮೂಲಕ ಸಾಹಿತ್ಯವನ್ನು ಇನ್ನಷ್ಟು ಸರಳಗೊಳಿಸಿದ, ಕನ್ನಡ ಸಾಹಿತ್ಯಕ್ಕೆ ಹೊಸತನ ತುಂಬಿದ ಕನಕದಾಸರನ್ನು ಹೊಸಗನ್ನಡ ಸಾಹಿತ್ಯ ಕೋಗಿಲೆ ಎಂದು ದಾಸ ಸಾಹಿತ್ಯ ಬಸವ ಕೋಗಿಲೆ ಎಂದು ಪ್ರಾಜ್ಞರು ಕರೆದುದುಂಟು. ಕನ್ನಡ ಸಾಹಿತ್ಯದಲ್ಲಿ 16ನೇ ಶತಮಾನದ ದಾಸ ಸಾಹಿತ್ಯ ಹೆಚ್ಚು ಜನಮುಖಿಯಾದವು. ಜಾತಿ-ನೀತಿಯ ಉಡದ ಪಟ್ಟಿನ ನಡುವೆಯೂ ಕನಕದಾಸರು, ಜನತೆಯಲ್ಲಿ ಸಾಮಾಜಿಕ ಚಿಂತನೆ, ಕಾವ್ಯ ಮತ್ತು ಕೀರ್ತನೆಗಳ ಮೂಲಕ ಸಾಹಿತ್ಯ ಹಾಗೂ ಸಂಗೀತಕ್ಕೆ ಮಹತ್ತರ ಕಾಣಿಕೆ ಸಲ್ಲಿಸಿ, ದಾಸ ಸಾಹಿತ್ಯದ ತೂಕವನ್ನು ಮತ್ತಷ್ಟು ಹೆಚ್ಚಿಸಿದರು.

ವಿಶ್ವಬಂಧು, ಸಂತ ಕವಿ ಕನಕದಾಸರು

ಕನಕದಾಸರು (1508-1606) ಸಾಮಾನ್ಯವಾದ ಕುರುಬ ಜಾತಿಯಲ್ಲಿ ಹುಟ್ಟಿದರೂ ತಮ್ಮ ಸ್ವಸಾಮರ್ಥ್ಯ ಮತ್ತು ಪ್ರತಿಭೆಯಿಂದ ಹಿರಿಮೆ ಗಳಿಸಿದವರು. ಕನಕರು ಕೆಳಸ್ತರದಿಂದ ಬಂದವರಾದ್ದರಿಂದ, ಕೆಳಜಾತಿಯವರ ನೋವಿನ ಅರಿವು ಹಾಗೂ ಡಣ್ಣಾಯಕ (ಒಂದು ಪ್ರದೇಶದ ಮುಖ್ಯಸ್ಥ) ರಾಗಿದ್ದರಿಂದ ಮೇಲ್ವರ್ಗದ ಜೀವನದ ಅನುಭವ ಅವರದಾಗಿತ್ತು.



5ನೆಯ ಶತಮಾನದಲ್ಲಿ ವಿಜಯನಗರ ಆಡಳಿತಕ್ಕೆ ಒಳಪಟ್ಟ ಬಾಡ ಪ್ರದೇಶ (ಈಗಿನ ಹಾವೇರಿ ಜಿಲ್ಲೆಯ ಶಿಗ್ಗಾಂವ ಮತ್ತು ಬಂಕಾಪುರ ಪ್ರದೇಶ) ಅಂದಿನ 28 ಗ್ರಾಮಗಳ ಹೋಬಳಿಯಾಗಿತ್ತು. ಅದರ ನಾಡಗೌಡಿಕೆ ಮತ್ತು ಹೊಣೆಗಾರಿಕೆಯನ್ನು ವಿಜಯನಗರದ ಅರಸರು ತಿಮ್ಮಪ್ಪನ ಹೆಗಲಿಗೇರಿಸಿದರು. ಕಾಲಾಂತರದಲ್ಲಿ ಡಣ್ಣಾಯಕತ್ವ ಕನಕನ ಕೈತಪ್ಪಿ ಹೋಯಿತು. ಆದರೂ ಈತನ ನಿಯತ್ತು ನಿ:ಸ್ವಾರ್ಥತನಕ್ಕೆ ಮತ್ತೆ ಅದು ಈತನ ಮುಡಿಗೇರಿತು. ಈ ನಡುವೆ ಕನಕನಿಗೆ ಮದುವೆಯಾಗಿ, ಪುತ್ರ ಭಾಗ್ಯ ಉಂಟಾಯಿತು.


ಕಾಲನ ಆಟದಲ್ಲಿ ಕೆಲ ಕಾಲದಲ್ಲೇ ಕನಕ ಮಗು ಮತ್ತು ತಾಯಿಯನ್ನು ಕಳೆದುಕೊಂಡ. ಕನಕ ಈ ನೋವಿನಿಂದ ಹೊರಬಂದು, ಲೌಕಿಕತೆಯಿಂದ ಪಾರಮಾರ್ಥಿಕದತ್ತ ತಿರುಗಿದ. ಭೌತಿಕ, ಆಸೆ ಆಕಾಂಕ್ಷೆಗಳಿಂದ ದೂರವಾದ. ಈ ಹಂತದಲ್ಲೇ ಕನಕಪ್ಪ ಬಾಡದಿಂದ, ತಾನು ನಂಬಿ ಪೂಜಿಸುತ್ತಿದ್ದ ದೈವ ಬಾಡದ ಆದಿಕೇಶವನನ್ನು ಕಾಗಿನೆಲೆಗೆ ತಂದು ಪ್ರತಿಷ್ಠಾಪಿಸಿಯಾಗಿತ್ತು. ಆತನ ಆರಾಧನೆಯಲ್ಲಿ ಸಂತೋಷ ಕಾಣುತ್ತ, ತನ್ನ ಕಾವ್ಯ ಕೃಷಿ ಮುಂದುವರಿಸಿದರು.


ಒಂದು ದಿನ ಭೂಮಿ ಅಗೆಯುತ್ತಿದ್ದಾಗ, ಅಲ್ಲಿ ನಿಧಿಯೊಂದು ಸಿಕ್ಕಿತು. ಕನಕರು ಈ ನಿಧಿಯನ್ನು ದೇವಸ್ಥಾನಗಳ ಜೀರ್ಣೋದ್ಧಾರ, ಬಡಬಗ್ಗರಿಗೆ ಪ್ರಸಾದಕ್ಕೆ ಬಳಸಿ, ತಮ್ಮ ಲೋಕಕಲ್ಯಾಣ ಗುಣ ಮೆರೆದರು. ಆ ದಿನ ಕನಕಪ್ಪನನ್ನು ಬಾಡ ನಾಡಿನ ಜನ ಕನಕದಾಸನೆಂದು ಕರೆಯಲಾರಂಭಿಸಿದರು. ಕನಕರು ಬಾಳಿದ ಕಾಲ, ವಿಜಯನಗರದಲ್ಲಿ ಶ್ರೀ ಕೃಷ್ಣದೇವರಾಯ ಆಳ್ವಿಕೆ ಮಾಡುತ್ತಿದ್ದ ಕಾಲ (1509). ಕನಕರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದು, ತಿರುಮಲೆ ತಾತಾಚಾರಿ ಅವರನ್ನು, ನಂತರ ಹಂಪಿಯಲ್ಲಿ ವ್ಯಾಸರಾಯರನ್ನು ಭೇಟಿ ಮಾಡಿದರು. ವ್ಯಾಸರಾಯರನ್ನು ಗುರುವಾಗಿ ಸ್ವೀಕರಿಸಿ, ವೇದ ಉಪನಿಷತ್ತು, ವೈಷ್ಣವ ಮತ-ಧರ್ಮ ಕುರಿತಾದ ಜ್ಞಾನ ಸಂಪಾದಿಸಿದರು. ಗುರು ವ್ಯಾಸರಾಯರು ಕನಕರ ಯೋಗ್ಯತೆಯನ್ನು ಗುರುತಿಸಿ, ಪ್ರೀತಿಯಿಂದ ಕಂಡು, ಅವರ ಯೋಗ್ಯತೆಯನ್ನು ಹಲವು ಬಾರಿ ಜಾಹಿರುಗೊಳಿಸಿದ ಅನೇಕ ಪ್ರಸಂಗಗಳು ನಡೆದವು.
ಕನಕದಾಸರು ಹರಿಭಕ್ತರಾಗಿ, ದಾಸರಾಗಿ ನಂಜನಗೂಡು, ಬೇಲೂರು, ಉಡುಪಿ ಮತ್ತಿತರೆಡೆಗಳಲ್ಲಿ ಸುತ್ತಾಡಿ, ತಮ್ಮ ಕೀರ್ತನೆಗಳ ಮೂಲಕ ಜನರ ಅಜ್ಞಾನ ಹೋಗಲಾಡಿಸುತ್ತಿದ್ದರು. ಶ್ರೀ ಕೃಷ್ಣನ ದರ್ಶನ ಮಾಡಬೇಕೆಂಬ ಇಚ್ಚೆಯಿಂದ ಕನಕದಾಸರು ಉಡುಪಿಗೆ ಬಂದಾಗ, ಅಲ್ಲಿನ ಪುರೋಹಿತರು ಕನಕದಾಸರ ಉಡುಗೆ ತೊಡುಗೆ ನೋಡಿ ಅವರೊಬ್ಬ ಕುಲೀನರೆಂಬ ಕಾರಣಕ್ಕೆ ಶ್ರೀಕೃಷ್ಣನ ದರ್ಶನಕ್ಕೆ ದೇವಸ್ಥಾನದ ಒಳಗೆ ಪ್ರವೇಶ ನಿರಾಕರಿಸಿದರು. ಆಗ ಕನಕದಾಸರು, ಶ್ರೀಕೃಷ್ಣನ ಗರ್ಭಗುಡಿ ಹಿಂಭಾಗಕ್ಕೆ ತೆರಳಿ ಹರಿಕೀರ್ತನೆ ಹೇಳುತ್ತಾ ನಿಂತಾಗ, ಗೋಡೆ ಬಿರುಕು ಬಿಟ್ಟು, ಶ್ರೀಕೃಷ್ಣನೇ ಪಶ್ಚಿಮಾಭಿಮುಖವಾಗಿ ತಿರುಗಿ, ಅವರಿಗೆ ದರ್ಶನ ನೀಡಿದನಂತೆ. ಈ ಕಥೆ, ಸಮಾಜದಲ್ಲಿನ ಮೇಲು ಕೀಳು ಎಂಬ ಅಸ್ಪೃಶ್ಯತೆಯ ಆಚರಣೆಗೆ ಇಂದಿಗೂ ಸಾಕ್ಷಿಯಾಗಿ ನಿಂತಿದೆ.


ಕನಕದಾಸರು ತಮ್ಮ ಜೀವಿತಾವಧಿಯಲ್ಲಿ ಎರಡು ಕಾವ್ಯಗಳನ್ನು ರಚಿಸಿದ್ದಾರೆ. ಮೋಹನ ತರಂಗಿಣಿ (ಶೃಂಗಾರ ರಸಕಾವ್ಯ) ಮತ್ತು ನಳ ಚರಿತ್ರೆ (ನಳ - ದಮಯಂತಿಯರ ಪ್ರೇಮ ಕಾವ್ಯ) ಅವರ ಕಾವ್ಯಶಕ್ತಿಗೆ ಹಿಡಿದ ಕನ್ನಡಿಯಂತಿದೆ. ಹರಿಭಕ್ತ ಸಾರ (ಅನುಭಾವ ಲಘುಕಾವ್ಯ) ಮತ್ತು ರಾಮಧಾನ್ಯ ಚರಿತ್ರೆ (ಸಾಮಾಜಿಕ ಆಶಯವನ್ನೊಳಗೊಂಡ ಲಘುಕಾವ್ಯ) ಗಳು ಕನಕರ ವೈವಿಧ್ಯಮಯ ಮತ್ತು ಜನಪರ ನಿಲುವಿಗೆ ಸಾಕ್ಷಿಯಂತಿದೆ.


ಕನಕರ ಮುಂಡಿಗೆಗಳು, ಜಾನಪದೀಯ ಸೊಗಡಿನ ಪದಗಳು, ಭಾಮಿನಿ ಷಟ್ಪದಿಯ ಕಾವ್ಯ ಉಲ್ಲೇಖಾರ್ಹ. ಕನಕರು ತಮ್ಮ ಎರಡೂ ಕಾವ್ಯಗಳನ್ನು ಚೆನ್ನಿಗರಾಯ ಮತ್ತು ಕಾಗಿನೆಲೆ ಆದಿಕೇಶವನಿಗೆ ಅರ್ಪಿಸಿದ್ದಾರೆ. ತಮ್ಮ ಕೀರ್ತನೆ ಮತ್ತು ಪದಗಳ ಮೂಲಕ ನಾಡಿನ ಜನರ ನಾಲಿಗೆಯ ಮೇಲೆ ಇಂದಿಗೂ ನಲಿದಾಡುತ್ತಿದ್ದಾರೆ. ಕನಕದಾಸರು ಅಂದಿನ ಸಮಾಜ ವ್ಯವಸ್ಥೆಯಲ್ಲಿ ಅನುಭವಿಸಿದ ನೋವೇ ಅವರ ಕೀರ್ತನೆ ಹಾಗೂ ಪದಗಳಲ್ಲಿ ಹಾಡಾಗಿ ಹರಿದಿದೆ. ಜಾತಿ ವ್ಯವಸ್ಥೆಯನ್ನು ವಿರೋಧಿಸಿದಂತೆ ಕನಕರು ಜನರಲ್ಲಿ ತಮ್ಮ ಕೀರ್ತನೆಗಳ ಮೂಲಕ ಆಧ್ಯಾತ್ಮಿಕ, ಸಾಮಾಜಿಕ ಹಾಗೂ ವೈಚಾರಿಕ ಪ್ರಜ್ಞೆಯನ್ನು ಬಿತ್ತಿದ್ದಾರೆ. ಕನಕದಾಸರು ದಾಸ ಪಂಥದ ವಚನಕಾರರು ಮಾತ್ರವಲ್ಲ, ಎಲ್ಲ ಮತೀಯ ಬಂಧನಗಳಿಂದ ಪಾರಾಗಿ, ಸಾಮಾಜಿಕ ಕಟ್ಟುನಿಟ್ಟುಗಳಿಂದ ಮುಕ್ತರಾಗಿ, ಆಧ್ಯಾತ್ಮ ಸಿದ್ಧಿಯ ಶಿಖರನ್ನೇರಿದ ವಿಶ್ವಬಂಧು, ಸಂತ ಕವಿ.