ಬಸವಣ್ಣನವರ ವಚನಗಳು
|
ಕ್ರ.ಸಂ |
ವಚನಗಳು |
|
01 |
ಉದಕದೊಳಗೆ ಬಚ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು, ಸಸಿಯೊಳಗಣ ರಸದ ರುಚಿಯಂತಿದ್ದಿತ್ತು, ನನೆಯೊಳಗಣ ಪರಿಮಳದಂತಿದ್ದಿತ್ತು, ನಿಮ್ಮ ನಿಲುವು ಕೂಡಲಸಂಗಮದೇವಾ, ಕನ್ಯೆಯ ಸ್ನೇಹದಂತಿದ್ದಿತ್ತು. |
|
02 |
ಕಾಳಿಯ ಕಣ್ ಕಾಣದಿಂದ ಮುನ್ನ, ತ್ರಿಪುರ ಸಂಹಾರದಿಂದ ಮುನ್ನ, ಹರಿವಿರಂಚಿಗಳಿಂದ ಮುನ್ನ, ಉಮೆಯ ಕಳ್ಯಾಣದಿಂದ ಮುನ್ನ, ಮುನ್ನ, ಮುನ್ನ,
ಮುನ್ನ, - ಅಂದಿಂಗೆಳೆಯ ನೀನು, ಹಳೆಯ ನಾನು ಮಹಾದಾನಿ ಕೂಡಲಸಂಗಮದೇವಾ. |
|
03 |
ಅಯ್ಯಾ, ನೀನು
ನಿರಾಕಾರವಾಗಿರ್ದಲ್ಲಿ ನಾನು ಜ್ನಾನವೆಂಬ ವಾಹನವಾಗಿರ್ದೆ, ಕಾಣಾ ಅಯ್ಯಾ,
ನೀನು ನಾಟ್ಯಕ್ಕೆ ನಿಂದಲ್ಲಿ ನಾನು ಚೈತನ್ಯವೆಂಬ ವಾಹನವಾಗಿರ್ದೆ, ಕಾಣಾ ಅಯ್ಯಾ,
ನೀನು ಆಕಾರವಾಗಿರ್ದಲ್ಲಿ ನಾನು ವೃಶ್ಹಭನೆಂಬ ವಾಹನವಾಗಿರ್ದೆ ಕಾಣಾ
ಅಯ್ಯಾ; ನೀನೆನ್ನ ಭವದ ಕೊಂದಿಹೆನೆಂದು ಜಂಗಮ ಲಾಂಚ್ಹನನಾಗಿ ಬಂದಲ್ಲಿ ನಾನು ಭಕ್ತನೆಂಬ
ವಾಹನವಾಗಿರ್ದೆ ಕಾಣಾ ಕೂಡಲಸಂಗಮದೇವಾ |
|
04 |
ಅಯ್ಯಾ, ನಿಮ್ಮ
ಶರಣನ ಮರ್ತ್ಯಕ್ಕೆ ತಂದೆಯಾಗಿ ನೆನೆನೆನೆದು ಸುಖಿಯಾಗಿಯಾನು ಬದುಕಿದೆನಯ್ಯಾ. ಅದೇನು ಕಾರಣ
ತಂದೆಯಿಂದರಿದೆನಯ್ಯಾ. ಅರಿದರಿದು ನಿಮ್ಮ ಶರಣನು ಆಚರಿಸುವಾಚರಣೆಯ ಕಂಡು ಕಣ್ದೆರೆದೆನಯ್ಯಾ
ಕೂಡಲಸಂಗಮದೇವಾ. |
|
05 |
ಸಂಸಾರ ಸಾಗರನ ತೆರೆಕೊಬ್ಬಿ ಮುಖದ ಮೇಲೆ
ಅಲೆಯುತ್ತಿದ್ದುದೇ ನೋಡಾ! ಸಂಸಾರಸಾಗರ ಉರದುದ್ದವೇ? ಹೇಳಾ! ಸಂಸಾರ ಸಾಗರ ಕೂರಲುದ್ದವೇ? ಹೇಳಾ? ಸಂಸಾರ ಸಾಗರ ಸಿರದುದ್ದವಾದ ಬಳಿಕ ಏನ ಹೇಳುವೆನಯ್ಯಾ? ಅಯ್ಯಾ,
ಅಯ್ಯಾ, ಎನ್ನ ಹುಯ್ಯಲ ಕೇಳಯ್ಯ? ಕೂಡಲಸಂಗಮದೇವಾ ನಾನೇನೆನುವೆನಯ್ಯಾ? |
|
06 |
ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ! ಮೋಹಕ್ಕೆ ಮಗಳಾಗಿ
ಹುಟ್ಟಿದಳು ಮಾಯೆ! ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ! ಇದಾವ ಪರಿಯಲ್ಲಿ ಕಾಡಿತ್ತು ಮಾಯೆ
ಈ ಮಾಯೆಯ ಕಳೆವೊಡೆ ಯೆನ್ನಳವಲ್ಲ, ನೀವೇ ಬಲ್ಲಿರಿ ಕೂಡಲಸಂಗಮದೇವಾ. |
|
07 |
ನೀನೊಲಿದಡೆ ಕೊರಡು ಕೊನರುವುದಯ್ಯಾ,ನೀನೊಲಿದಡೆ
ಬರಡು ಹಯನಹುದಯ್ಯಾ,ನೀನೊಲಿದಡೆ ವಿಷವೆಲ್ಲ ಅಮೈತವಹುದಯ್ಯಾ,ನೀನೊಲಿದಡೆ ಸಕಲ
ಪಡಿಪದಾರ್ಥಇದಿರಲ್ಲಿರ್ಪುವು ಕೂಡಲಸಂಗಮದೇವಾ. |
|
08 |
ಭವಭವದಲ್ಲಿ ಎನ್ನ ಮನವು ಸಿಲುಕದೆಭವಭವದಲ್ಲಿ ಎನ್ನ
ಮನವು ಕಟ್ಟದೆಭವಸಾಗರದಲ್ಲಿ ಮುಳುಗದೆಭವರಾಟಳದೊಳು ತುಂಬದೆ ಕೆಡಹದೆಭವವಿರಹಿತ ನೀನು, ಅವಧಾರುಕರುಣಿಸು ಕೂಡಲಸಂಗಮದೇವಾ. |
|
09 |
ನೋಡಿ ನೋಡಿ ಮಾಡುವ ನೇಮ ಸಲ್ಲವು, ಸಲ್ಲವು.ತನುವುದ್ದೇಶ, ಮನವುದ್ದೇಶವಾಗಿಮಾಡುವ ನೇಮ ಸಲ್ಲವು, ಸಲ್ಲವು.ಗುರುಪಥವ ಮೀರಿ ಮಾಡುವ ನೇಮ ಸಲ್ಲವು, ಸಲ್ಲವು.ಕೂಡಲಸಂಗಮದೇವಯ್ಯಾಇವು
ನಿಮ್ಮ ನಿಜದೊಳಗೆ ನಿಲ್ಲವು, ನಿಲ್ಲವು. |
|
10 |
ಗುರುವಚನವಲ್ಲದೆ ಲಿಂಗವೆಂದೆನಿಸದು,ಗುರುವಚನವಲ್ಲದೆ
ಜಂಗಮವೆಂದೆನಿಸದು,ಗುರುವಚನವಲ್ಲದೆ ನಿತ್ಯವೆಂದೆನಿಸದು,ಗುರುವಚನವಲ್ಲದೆ
ನೇಮವೆಂದೆನಿಸದು.ತಲೆಯಿಲ್ಲದ ಅಟ್ಟೆಗೆ ಪಟ್ಟವ ಕಟ್ಟುವಭಯ ಭ್ರಷ್ಟರ ಮೆಚ್ಚುವನೆ,ನಮ್ಮ
ಕೂಡಲಸಂಗಮದೇವ. |
|
11 |
ಭವಬಂಧನ ದುರಿತಂಗಳ ಗೆಲುವಡೆಓಂ ನಮಃ ಶಿವಶರಣೆಂದಡೆ
ಸಾಲದೆಹರ ಹರ ಶಂಕರ,
ಶಿವ ಶಿವ ಶಂಕರ,ಜಯ ಜಯ ಶಂಕರ ಶರಣೆನುತ್ತಿದ್ದೇನೆ.ಎನ್ನ
ಪಾತಕ ಪರಿಹರ,ಕೂಡಲಸಂಗಮದೇವಾ ಶರಣೆನುತ್ತಿದ್ದೇನೆ. |
|
12 |
ಎಮ್ಮವರು ಬೆಸಗೊಂಡಡೆ ಶುಭಲಗ್ನವೆನ್ನಿರಯ್ಯಾ,ರಾಶಿಕೂಟ
ಋಣಸಂಬಂಧವುಂಟೆಂದು ಹೇಳಿರಯ್ಯಾ,ಚಂದ್ರಬಲ ತಾರಾಬಲವುಂಟೆಂದು ಹೇಳಿರಯ್ಯಾ,ನಾಳಿನ
ದಿನಕಿಂದನ ದಿನ ಲೇಸೆಂದು ಹೇಳಿರಯ್ಯಾ,ಕೂಡಲಸಂಗಮದೇವನ ಪೂಜಿಸಿದ ಫಲ
ನಿಮ್ಮದಯ್ಯಾ. |







0 comments:
Post a Comment