Friday, February 9, 2024

ವಚನಗಳು

 

ಬಸವಣ್ಣನವರ ವಚನಗಳು

ಕ್ರ.ಸಂ

ವಚನಗಳು

01

ಉದಕದೊಳಗೆ ಬಚ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು, ಸಸಿಯೊಳಗಣ ರಸದ ರುಚಿಯಂತಿದ್ದಿತ್ತು, ನನೆಯೊಳಗಣ ಪರಿಮಳದಂತಿದ್ದಿತ್ತು, ನಿಮ್ಮ ನಿಲುವು ಕೂಡಲಸಂಗಮದೇವಾ, ಕನ್ಯೆಯ ಸ್ನೇಹದಂತಿದ್ದಿತ್ತು.

02

ಕಾಳಿಯ ಕಣ್ ಕಾಣದಿಂದ ಮುನ್ನ, ತ್ರಿಪುರ ಸಂಹಾರದಿಂದ ಮುನ್ನ, ಹರಿವಿರಂಚಿಗಳಿಂದ ಮುನ್ನ, ಉಮೆಯ ಕಳ್ಯಾಣದಿಂದ ಮುನ್ನ, ಮುನ್ನ, ಮುನ್ನ, ಮುನ್ನ, - ಅಂದಿಂಗೆಳೆಯ ನೀನು, ಹಳೆಯ ನಾನು ಮಹಾದಾನಿ ಕೂಡಲಸಂಗಮದೇವಾ.

03

ಅಯ್ಯಾ, ನೀನು ನಿರಾಕಾರವಾಗಿರ್ದಲ್ಲಿ ನಾನು ಜ್ನಾನವೆಂಬ ವಾಹನವಾಗಿರ್ದೆ, ಕಾಣಾ ಅಯ್ಯಾ, ನೀನು ನಾಟ್ಯಕ್ಕೆ ನಿಂದಲ್ಲಿ ನಾನು ಚೈತನ್ಯವೆಂಬ ವಾಹನವಾಗಿರ್ದೆ, ಕಾಣಾ ಅಯ್ಯಾ, ನೀನು ಆಕಾರವಾಗಿರ್ದಲ್ಲಿ ನಾನು ವೃಶ್ಹಭನೆಂಬ ವಾಹನವಾಗಿರ್ದೆ ಕಾಣಾ ಅಯ್ಯಾ; ನೀನೆನ್ನ ಭವದ ಕೊಂದಿಹೆನೆಂದು ಜಂಗಮ ಲಾಂಚ್ಹನನಾಗಿ ಬಂದಲ್ಲಿ ನಾನು ಭಕ್ತನೆಂಬ ವಾಹನವಾಗಿರ್ದೆ ಕಾಣಾ ಕೂಡಲಸಂಗಮದೇವಾ

04

ಅಯ್ಯಾ, ನಿಮ್ಮ ಶರಣನ ಮರ್ತ್ಯಕ್ಕೆ ತಂದೆಯಾಗಿ ನೆನೆನೆನೆದು ಸುಖಿಯಾಗಿಯಾನು ಬದುಕಿದೆನಯ್ಯಾ. ಅದೇನು ಕಾರಣ ತಂದೆಯಿಂದರಿದೆನಯ್ಯಾ. ಅರಿದರಿದು ನಿಮ್ಮ ಶರಣನು ಆಚರಿಸುವಾಚರಣೆಯ ಕಂಡು ಕಣ್ದೆರೆದೆನಯ್ಯಾ ಕೂಡಲಸಂಗಮದೇವಾ.

05

ಸಂಸಾರ ಸಾಗರನ ತೆರೆಕೊಬ್ಬಿ ಮುಖದ ಮೇಲೆ ಅಲೆಯುತ್ತಿದ್ದುದೇ ನೋಡಾ! ಸಂಸಾರಸಾಗರ ಉರದುದ್ದವೇ? ಹೇಳಾ! ಸಂಸಾರ ಸಾಗರ ಕೂರಲುದ್ದವೇ? ಹೇಳಾ? ಸಂಸಾರ ಸಾಗರ ಸಿರದುದ್ದವಾದ ಬಳಿಕ ಏನ ಹೇಳುವೆನಯ್ಯಾ? ಅಯ್ಯಾ, ಅಯ್ಯಾ, ಎನ್ನ ಹುಯ್ಯಲ ಕೇಳಯ್ಯ? ಕೂಡಲಸಂಗಮದೇವಾ ನಾನೇನೆನುವೆನಯ್ಯಾ?

06

ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ! ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ! ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ! ಇದಾವ ಪರಿಯಲ್ಲಿ ಕಾಡಿತ್ತು ಮಾಯೆ ಈ ಮಾಯೆಯ ಕಳೆವೊಡೆ ಯೆನ್ನಳವಲ್ಲ, ನೀವೇ ಬಲ್ಲಿರಿ ಕೂಡಲಸಂಗಮದೇವಾ.

07

ನೀನೊಲಿದಡೆ ಕೊರಡು ಕೊನರುವುದಯ್ಯಾ,ನೀನೊಲಿದಡೆ ಬರಡು ಹಯನಹುದಯ್ಯಾ,ನೀನೊಲಿದಡೆ ವಿಷವೆಲ್ಲ ಅಮೈತವಹುದಯ್ಯಾ,ನೀನೊಲಿದಡೆ ಸಕಲ ಪಡಿಪದಾರ್ಥಇದಿರಲ್ಲಿರ್ಪುವು ಕೂಡಲಸಂಗಮದೇವಾ.

08

ಭವಭವದಲ್ಲಿ ಎನ್ನ ಮನವು ಸಿಲುಕದೆಭವಭವದಲ್ಲಿ ಎನ್ನ ಮನವು ಕಟ್ಟದೆಭವಸಾಗರದಲ್ಲಿ ಮುಳುಗದೆಭವರಾಟಳದೊಳು ತುಂಬದೆ ಕೆಡಹದೆಭವವಿರಹಿತ ನೀನು, ಅವಧಾರುಕರುಣಿಸು ಕೂಡಲಸಂಗಮದೇವಾ.

09

ನೋಡಿ ನೋಡಿ ಮಾಡುವ ನೇಮ ಸಲ್ಲವು, ಸಲ್ಲವು.ತನುವುದ್ದೇಶ, ಮನವುದ್ದೇಶವಾಗಿಮಾಡುವ ನೇಮ ಸಲ್ಲವು, ಸಲ್ಲವು.ಗುರುಪಥವ ಮೀರಿ ಮಾಡುವ ನೇಮ ಸಲ್ಲವು, ಸಲ್ಲವು.ಕೂಡಲಸಂಗಮದೇವಯ್ಯಾಇವು ನಿಮ್ಮ ನಿಜದೊಳಗೆ ನಿಲ್ಲವು, ನಿಲ್ಲವು.

10

ಗುರುವಚನವಲ್ಲದೆ ಲಿಂಗವೆಂದೆನಿಸದು,ಗುರುವಚನವಲ್ಲದೆ ಜಂಗಮವೆಂದೆನಿಸದು,ಗುರುವಚನವಲ್ಲದೆ ನಿತ್ಯವೆಂದೆನಿಸದು,ಗುರುವಚನವಲ್ಲದೆ ನೇಮವೆಂದೆನಿಸದು.ತಲೆಯಿಲ್ಲದ ಅಟ್ಟೆಗೆ ಪಟ್ಟವ ಕಟ್ಟುವಭಯ ಭ್ರಷ್ಟರ ಮೆಚ್ಚುವನೆ,ನಮ್ಮ ಕೂಡಲಸಂಗಮದೇವ.

11

ಭವಬಂಧನ ದುರಿತಂಗಳ ಗೆಲುವಡೆಓಂ ನಮಃ ಶಿವಶರಣೆಂದಡೆ ಸಾಲದೆಹರ ಹರ ಶಂಕರ, ಶಿವ ಶಿವ ಶಂಕರ,ಜಯ ಜಯ ಶಂಕರ ಶರಣೆನುತ್ತಿದ್ದೇನೆ.ಎನ್ನ ಪಾತಕ ಪರಿಹರ,ಕೂಡಲಸಂಗಮದೇವಾ ಶರಣೆನುತ್ತಿದ್ದೇನೆ.

12

ಎಮ್ಮವರು ಬೆಸಗೊಂಡಡೆ ಶುಭಲಗ್ನವೆನ್ನಿರಯ್ಯಾ,ರಾಶಿಕೂಟ ಋಣಸಂಬಂಧವುಂಟೆಂದು ಹೇಳಿರಯ್ಯಾ,ಚಂದ್ರಬಲ ತಾರಾಬಲವುಂಟೆಂದು ಹೇಳಿರಯ್ಯಾ,ನಾಳಿನ ದಿನಕಿಂದನ ದಿನ ಲೇಸೆಂದು ಹೇಳಿರಯ್ಯಾ,ಕೂಡಲಸಂಗಮದೇವನ ಪೂಜಿಸಿದ ಫಲ ನಿಮ್ಮದಯ್ಯಾ.

0 comments:

Post a Comment